Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...