Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...