Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...