Homeಮುಖಪುಟಪಂಚರಾಜ್ಯಗಳ ಚುನಾವಣೆ: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಪಂಚರಾಜ್ಯಗಳ ಚುನಾವಣೆ: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯೊಂದಿಗೆ, ಚುನಾವಣಾ ಬಾಂಡ್‌ಗಳ ಮಾರಾಟವನ್ನು ತಡೆಯಲು ಮಧ್ಯಂತರ ನಿರ್ದೇಶನ ಕೋರಿ ಎನ್‌ಜಿಒ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್‌ಗೆ ಸರ್ಜಿ ಸಲ್ಲಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ನಿಟ್ಟಿನಲ್ಲಿ, ಎನ್‌ಜಿಒ ತನ್ನ 2017 ರ ರಿಟ್ ಅರ್ಜಿ ಕುರಿತು ತುರ್ತು ಪಟ್ಟಿಯನ್ನು ಕೋರಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಲ್ಲಿ ಮುಂಬರುವ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ ಚುನಾವಣಾ ಬಾಂಡ್‌ಗಳ ಯಾವುದೇ ಮಾರಾಟವು “ಶೆಲ್ ಕಂಪನಿಗಳ ಮೂಲಕ ರಾಜಕೀಯ ಪಕ್ಷಗಳ ಅಕ್ರಮ ಹಣವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂಬ ಗಂಭೀರ ಆತಂಕವಿದೆ ಎಂದು ರ್ಜಿಯಲ್ಲಿ ಹೇಳಲಾಗಿದೆ.

“ಬಾಕಿ ಚುನಾವಣಾ ಬಾಂಡ್‌ಗಳ ಸಲ್ಲಿಕೆಗೆ ಈಗ ಅನುಮತಿಸಬಾರದು ಎಂದು ಅರ್ಜಿದಾರರು ಬಯಸುತ್ತಾರೆ” ಎಂದು ತುರ್ತು ಅರ್ಜಿ ಹೇಳಿದೆ.

ಈ ಪ್ರಕರಣವನ್ನು ಕೊನೆಯದಾಗಿ 2020 ರ ಜನವರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಎನ್‌ಜಿಒ ಉನ್ನತ ನ್ಯಾಯಾಲಯಕ್ಕೆ ತಿಳಿಸಿದೆ ಮತ್ತು ಈ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ 2020 ರ ಡಿಸೆಂಬರ್ 27 ರಂದು ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ ನಂತರವೂ ಈ ವಿಷಯವನ್ನು ಪಟ್ಟಿ ಮಾಡಲಾಗಿಲ್ಲ.

ಚುನಾವಣಾ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‌ನ ಸ್ವರೂಪದಲ್ಲಿರುವ ಒಂದು ಸಾಧನವಾಗಿದ್ದು, ವ್ಯಕ್ತಿ ಅಥವಾ ಸಂಸ್ಥೆಯು ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತ ಅಥವಾ ಸ್ಥಾಪಿತವಾದ ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳ ಸಂಘದಿಂದ ಖರೀದಿಸಬಹುದು. ಬಹು ಪಂಗಡಗಳಲ್ಲಿರುವ ಬಾಂಡ್‌ಗಳನ್ನು ರಾಜಕೀಯ ಪಕ್ಷಗಳಿಗೆ ಹಣ ನೀಡುವ ಉದ್ದೇಶದಿಂದ ನಿರ್ದಿಷ್ಟವಾಗಿ ನೀಡಲಾಗುತ್ತದೆ.

ಚುನಾವಣಾ ಬಾಂಡ್‌ಗಳನ್ನು ಹಣಕಾಸು ಕಾಯ್ದೆ 2017 ರ ಮೂಲಕ ಪರಿಚಯಿಸಲಾಯಿತು, ಇದು ಚುನಾವಣಾ ಬಾಂಡ್‌ಗಳ ಪರಿಚಯವನ್ನು ಸಕ್ರಿಯಗೊಳಿಸಲು ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ ಎಂಬ ಮೂರು ಕಾನೂನುಗಳನ್ನು ತಿದ್ದುಪಡಿ ಮಾಡಿತು.

ಹಣಕಾಸು ಕಾಯ್ದೆ-2017 ಚುನಾವಣಾ ಧನಸಹಾಯದ ಉದ್ದೇಶಕ್ಕಾಗಿ ಯಾವುದೇ ನಿಗದಿತ ಬ್ಯಾಂಕ್ ನೀಡುವ ಚುನಾವಣಾ ಬಾಂಡ್‌ಗಳ ವ್ಯವಸ್ಥೆಯನ್ನು ಪರಿಚಯಿಸಿತು.

ಹಣ ಕಾಯ್ದೆಯಾಗಿ ಅಂಗೀಕರಿಸಲ್ಪಟ್ಟ ಹಣಕಾಸು ಕಾಯ್ದೆ, ಇದಕ್ಕೆ ರಾಜ್ಯಸಭೆಯ ಒಪ್ಪಿಗೆಯ ಅಗತ್ಯವಿಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯನ್ನು ಬೈಪಾಸ್ ಮಾಡುವ ಸಲುವಾಗಿ ಇದನ್ನು ಹಣಕಾಸು ಮಸೂದೆಯನ್ನಾಗಿ ಜಾರಿ ಮಾಡಲಾಗಿದೆ ಎಮದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಿದ್ದುಪಡಿಗಳ ಪರಿಣಾಮವೆಂದರೆ, ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆ ನೀಡುವವರ ಹೆಸರುಗಳು ಮತ್ತು ವಿಳಾಸಗಳನ್ನು ನಮೂದಿಸಬೇಕಾಗಿಲ್ಲ ಮತ್ತು ಆ ಮೂಲಕ ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕೊಲ್ಲುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಕಂಪನಿಯ ಕೊನೆಯ 3 ವರ್ಷಗಳ ನಿವ್ವಳ ಲಾಭದ ಮೇಲಿನ 7.5% ಕ್ಯಾಪ್ ಅನ್ನು ತೆಗೆದುಹಾಕುವುದರೊಂದಿಗೆ, ಈಗ ಕಾರ್ಪೊರೇಟ್ ಧನಸಹಾಯವು “ಕಂಪನಿಯು ಎಷ್ಟು ದಾನ ಮಾಡಬಹುದು ಎಂಬುದಕ್ಕೆ ಯಾವುದೇ ಮಿತಿಯಿಲ್ಲದ ಕಾರಣ ಅನೇಕ ಪಟ್ಟು ಹೆಚ್ಚಾಗಿದೆ” ಎಂದು ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...