Homeಮುಖಪುಟಪಂಚರಾಜ್ಯಗಳ ಚುನಾವಣೆ: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಪಂಚರಾಜ್ಯಗಳ ಚುನಾವಣೆ: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಯೊಂದಿಗೆ, ಚುನಾವಣಾ ಬಾಂಡ್‌ಗಳ ಮಾರಾಟವನ್ನು ತಡೆಯಲು ಮಧ್ಯಂತರ ನಿರ್ದೇಶನ ಕೋರಿ ಎನ್‌ಜಿಒ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂ ಕೋರ್ಟ್‌ಗೆ ಸರ್ಜಿ ಸಲ್ಲಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ನಿಟ್ಟಿನಲ್ಲಿ, ಎನ್‌ಜಿಒ ತನ್ನ 2017 ರ ರಿಟ್ ಅರ್ಜಿ ಕುರಿತು ತುರ್ತು ಪಟ್ಟಿಯನ್ನು ಕೋರಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಲ್ಲಿ ಮುಂಬರುವ ರಾಜ್ಯ ಚುನಾವಣೆಗಳಿಗೆ ಮುಂಚಿತವಾಗಿ ಚುನಾವಣಾ ಬಾಂಡ್‌ಗಳ ಯಾವುದೇ ಮಾರಾಟವು “ಶೆಲ್ ಕಂಪನಿಗಳ ಮೂಲಕ ರಾಜಕೀಯ ಪಕ್ಷಗಳ ಅಕ್ರಮ ಹಣವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂಬ ಗಂಭೀರ ಆತಂಕವಿದೆ ಎಂದು ರ್ಜಿಯಲ್ಲಿ ಹೇಳಲಾಗಿದೆ.

“ಬಾಕಿ ಚುನಾವಣಾ ಬಾಂಡ್‌ಗಳ ಸಲ್ಲಿಕೆಗೆ ಈಗ ಅನುಮತಿಸಬಾರದು ಎಂದು ಅರ್ಜಿದಾರರು ಬಯಸುತ್ತಾರೆ” ಎಂದು ತುರ್ತು ಅರ್ಜಿ ಹೇಳಿದೆ.

ಈ ಪ್ರಕರಣವನ್ನು ಕೊನೆಯದಾಗಿ 2020 ರ ಜನವರಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಎನ್‌ಜಿಒ ಉನ್ನತ ನ್ಯಾಯಾಲಯಕ್ಕೆ ತಿಳಿಸಿದೆ ಮತ್ತು ಈ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ 2020 ರ ಡಿಸೆಂಬರ್ 27 ರಂದು ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ ನಂತರವೂ ಈ ವಿಷಯವನ್ನು ಪಟ್ಟಿ ಮಾಡಲಾಗಿಲ್ಲ.

ಚುನಾವಣಾ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‌ನ ಸ್ವರೂಪದಲ್ಲಿರುವ ಒಂದು ಸಾಧನವಾಗಿದ್ದು, ವ್ಯಕ್ತಿ ಅಥವಾ ಸಂಸ್ಥೆಯು ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತ ಅಥವಾ ಸ್ಥಾಪಿತವಾದ ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳ ಸಂಘದಿಂದ ಖರೀದಿಸಬಹುದು. ಬಹು ಪಂಗಡಗಳಲ್ಲಿರುವ ಬಾಂಡ್‌ಗಳನ್ನು ರಾಜಕೀಯ ಪಕ್ಷಗಳಿಗೆ ಹಣ ನೀಡುವ ಉದ್ದೇಶದಿಂದ ನಿರ್ದಿಷ್ಟವಾಗಿ ನೀಡಲಾಗುತ್ತದೆ.

ಚುನಾವಣಾ ಬಾಂಡ್‌ಗಳನ್ನು ಹಣಕಾಸು ಕಾಯ್ದೆ 2017 ರ ಮೂಲಕ ಪರಿಚಯಿಸಲಾಯಿತು, ಇದು ಚುನಾವಣಾ ಬಾಂಡ್‌ಗಳ ಪರಿಚಯವನ್ನು ಸಕ್ರಿಯಗೊಳಿಸಲು ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ ಎಂಬ ಮೂರು ಕಾನೂನುಗಳನ್ನು ತಿದ್ದುಪಡಿ ಮಾಡಿತು.

ಹಣಕಾಸು ಕಾಯ್ದೆ-2017 ಚುನಾವಣಾ ಧನಸಹಾಯದ ಉದ್ದೇಶಕ್ಕಾಗಿ ಯಾವುದೇ ನಿಗದಿತ ಬ್ಯಾಂಕ್ ನೀಡುವ ಚುನಾವಣಾ ಬಾಂಡ್‌ಗಳ ವ್ಯವಸ್ಥೆಯನ್ನು ಪರಿಚಯಿಸಿತು.

ಹಣ ಕಾಯ್ದೆಯಾಗಿ ಅಂಗೀಕರಿಸಲ್ಪಟ್ಟ ಹಣಕಾಸು ಕಾಯ್ದೆ, ಇದಕ್ಕೆ ರಾಜ್ಯಸಭೆಯ ಒಪ್ಪಿಗೆಯ ಅಗತ್ಯವಿಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯನ್ನು ಬೈಪಾಸ್ ಮಾಡುವ ಸಲುವಾಗಿ ಇದನ್ನು ಹಣಕಾಸು ಮಸೂದೆಯನ್ನಾಗಿ ಜಾರಿ ಮಾಡಲಾಗಿದೆ ಎಮದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಿದ್ದುಪಡಿಗಳ ಪರಿಣಾಮವೆಂದರೆ, ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆ ನೀಡುವವರ ಹೆಸರುಗಳು ಮತ್ತು ವಿಳಾಸಗಳನ್ನು ನಮೂದಿಸಬೇಕಾಗಿಲ್ಲ ಮತ್ತು ಆ ಮೂಲಕ ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕೊಲ್ಲುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಕಂಪನಿಯ ಕೊನೆಯ 3 ವರ್ಷಗಳ ನಿವ್ವಳ ಲಾಭದ ಮೇಲಿನ 7.5% ಕ್ಯಾಪ್ ಅನ್ನು ತೆಗೆದುಹಾಕುವುದರೊಂದಿಗೆ, ಈಗ ಕಾರ್ಪೊರೇಟ್ ಧನಸಹಾಯವು “ಕಂಪನಿಯು ಎಷ್ಟು ದಾನ ಮಾಡಬಹುದು ಎಂಬುದಕ್ಕೆ ಯಾವುದೇ ಮಿತಿಯಿಲ್ಲದ ಕಾರಣ ಅನೇಕ ಪಟ್ಟು ಹೆಚ್ಚಾಗಿದೆ” ಎಂದು ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...