Homeಮುಖಪುಟನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

ನೌಕಾಪಡೆಗೆ ಸ್ವದೇಶಿ ನಿರ್ಮಿತ ಸ್ಕಾರ್ಪಿಯನ್‌ ಕ್ಲಾಸ್‌‌ ‘ಐಎನ್‌ಎಸ್‌ ಕಾರಂಜ್‌‌’ ಜಲಾಂತರ್ಗಾಮಿ ನಿಯೋಜನೆ!

- Advertisement -
- Advertisement -

ಸ್ವದೇಶಿ ನಿರ್ಮಿತ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯಾದ ‘ಐಎನ್‌ಎಸ್ ಕಾರಂಜ್’ ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಮುಂಬೈನ ಮಜಾಗನ್ ಶಿಪ್‌ಯಾರ್ಡ್‌ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಮಾಜಿ ನೌಕಾಪಡೆಯ ಮುಖ್ಯಸ್ಥ ವಿ.ಎಸ್. ಶೇಖಾವತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಏಳು ದಶಕಗಳಿಂದ ನೌಕಾಪಡೆಯು ಸ್ವದೇಶಿಕರಣ ಮತ್ತು ರಕ್ಷಣಾ ಸ್ವಾವಲಂಬನೆಗೆ ಬದ್ಧವಾಗಿದೆ ಎಂದು ಮುಖ್ಯ ಅಡ್ಮಿರಲ್ ಕರಂಬೀರ್ ಸಿಂಗ್ ಹೇಳಿದ್ದಾರೆ. ಪ್ರಸ್ತುತ, 42 ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಿವೆ ಮತ್ತು ಅವುಗಳಲ್ಲಿ 40 ದೇಶಾದ್ಯಂತ ಹಡಗುಕಟ್ಟೆಗಳಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೀಟು ಹಂಚಿಕೆಯಲ್ಲಿ ಭಿನ್ನಮತ: AIADMK-BJP ಮೈತ್ರಿ ತೊರೆದ ವಿಜಯಕಾಂತ್‌ರ DMDK

ಫ್ರೆಂಚ್ ಕಂಪನಿ ಡಿಸಿಎನ್‌ಎಸ್‌ನೊಂದಿಗಿನ 2005 ರ ಒಪ್ಪಂದದಡಿಯಲ್ಲಿ ನಿರ್ಮಿಸಲಾಗುವ ಆರು ಕ್ಯಾಲ್ವರಿ ವರ್ಗದ ಜಲಾಂತರ್ಗಾಮಿ ನೌಕೆಗಳಲ್ಲಿ ಐಎನ್‌ಎಸ್ ಕಾರಂಜ್ ಮೂರನೆಯದಾಗಿದೆ. ಸಮುದ್ರದಲ್ಲಿ ಜಲಾಂತರ್ಗಾಮಿ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

ಸಮುದ್ರ ಮತ್ತು ಒಳನಾಡಿನ ಮೇಲೆ ಒಂದೇ ರೀತಿಯಲ್ಲಿ ಆಕ್ರಮಣ ಮಾಡಬಹುದು ಎಂಬುದಾಗಿದೆ ಸ್ಕಾರ್ಪಿಯಾನ್ ವರ್ಗದ ಜಲಾಂತರ್ಗಾಮಿ ನೌಕೆಯ ವೈಶಿಷ್ಟ್ಯ. ಇದಲ್ಲದೆ, ಇದು ಇತರ ಜಲಾಂತರ್ಗಾಮಿ ನೌಕೆಗಳನ್ನು ನಾಶಪಡಿಸಲು ಮತ್ತು ಸ್ಪೋಟಕಗಳನ್ನು ಬಳಸಿ ದಾಳಿ ಕೂಡಾ ಮಾಡುತ್ತದೆ. 220 ಅಡಿ ಉದ್ದ ಮತ್ತು 40 ಅಡಿ ಎತ್ತರವಿರುವ ಈ ಜಲಾಂತರ್ಗಾಮಿಯು ಸಮುದ್ರದ ಮೇಲಿನಿಂದ 11 ನಾಟಿಕಲ್ ಮೈಲಿ ಮತ್ತು ಸಮುದ್ರದೊಳಗಿನಿಂದ 20 ನಾಟಿಕಲ್ ಮೈಲುಗಳಷ್ಟು ವೇಗದಲ್ಲಿ ಪ್ರಯಾಣಿಸುತ್ತದೆ.

ಇದನ್ನು ಡಿಸೆಂಬರ್ 2017 ರಲ್ಲಿ ಐಎನ್ಎಸ್ ಕ್ಯಾಲ್ವರಿ ಮತ್ತು ಸೆಪ್ಟೆಂಬರ್ 2019 ರಲ್ಲಿ ಐಎನ್ಎಸ್ ಖಂಡೇರಿ ನಿಯೋಜಿಸಲಾಗಿತ್ತು. ನಾಲ್ಕು ಮತ್ತು ಐದನೇ ಜಲಾಂತರ್ಗಾಮಿ ನೌಕೆಗಳಾದ ಐಎನ್‌ಎಸ್ ವೆಲಾ ಮತ್ತು ಐಎನ್‌ಎಸ್ ವ್ಯಾಗ್ಮೀರ್ ಸಮುದ್ರದಲ್ಲಿ ಪರೀಕ್ಷೆಯಲ್ಲಿದ್ದು ಹಾಗೂ ಆರನೆಯ ಐಎನ್‌ಎಸ್ ವಾಗ್‌ಶೀರ್ ನಿರ್ಮಾಣ ಹಂತದಲ್ಲಿದೆ.

ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...