Homeಮುಖಪುಟಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಮೋದಿ ಸರ್ಕಾರ ಇರುವವರೆಗೂ ಮುಂದುವರಿಸಲು ಸಿದ್ಧ ಎಂದು ನರೇಂದ್ರ ಟಿಕಾಯತ್ ಹೇಳಿದ್ದಾರೆ.

“ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಇಬ್ಬರು ಹಿರಿಯ ಸೋದರರಾದ ಹಾಗೂ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ನರೇಶ್ ಮತ್ತು ರಾಕೇಶ್ ಟಿಕಾಯತ್ ಅವರಂತೆಯೇ ರೈತರ ಸಮಸ್ಯೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ:…

ಮುಜಫ್ಫರನಗರದ ಸಿಸೌಲಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ 45 ವರ್ಷದ ನರೇಂದ್ರ, “ತಮ್ಮ ಕುಟುಂಬದ ಯಾವುದೇ ಒಬ್ಬ ಸದಸ್ಯ ಕೂಡ ಯವುದೇ ತಪ್ಪು ಮಾಡಿದ್ದಾರೆಂದು ಸಾಬೀತಾದಲ್ಲಿ ಇಡೀ ಟಿಕಾಯತ್ ಕುಟುಂಬ ಪ್ರತಿಭಟನಾ ಸ್ಥಳವನ್ನು ತ್ಯಜಿಸುತ್ತದೆ” ಎಂದು ಹೇಳಿದ ಅವರು ತಮ್ಮ ಕುಟುಂಬ ಪ್ರತಿಭಟನೆಯಿಂದ ಹಣ ಮತ್ತು ಆಸ್ತಿ ಸಂಪಾದಿಸಿದೆ ಎಂಬ ಕೆಲ ಆರೋಪಗಳನ್ನು ನಿರಾಕರಿಸಿದ್ದಾರೆ.

“ನಾನು ಮನೆಯಲ್ಲಿದ್ದರೂ ಸಹ ನನ್ನ ಕಣ್ಣೆಲ್ಲಾ ಪ್ರತಿಭಟನಾ ಸ್ಥಳದಲ್ಲಿದೆ. ಆಗಾಗ ಅಲ್ಲಿಗೆ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ತಮ್ಮ ಎಲ್ಲಾ ಬೇಡಿಕೆಗಳು ಸಂಪೂರ್ಣವಾಗಿ ಈಡೇರಿದ ನಂತರ ರೈತರು ಪ್ರತಿಭಟನಾ ಸ್ಥಳದಿಂದ ತೆರಳುತ್ತಾರೆ. ಯಾವುದೇ ಭರವಸೆ ಅಥವಾ ಭಾಗಶಃ ಬೇಡಿಕೆ ಪೂರೈಕೆಗೆ ಅವರು ಬಗ್ಗುವುದಿಲ್ಲ ಎಂದು ರೈತರ ನಿಲುವನ್ನು ಪುನರುಚ್ಚರಿಸಿದರು.

“ಕೃಷಿ ಉತ್ಪನ್ನಗಳನ್ನು ಎಂಎಸ್‍ಪಿಗೆ ಖರೀದಿಸಲಾಗುವುದೆಂದು ಹೇಳುತ್ತಿರುವ ಸರ್ಕಾರ ಲಿಖಿತ ಭರವಸೆಯನ್ನು ಏಕೆ ನೀಡುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ರಾಕೇಶ್ ಟಿಕಾಯತ್, ನರೇಶ್ ಟಿಕಾಯತ್ ಅವರು ರೈತ ಹೋರಾಟದ ಮುಂಚೂಣಿ ನಾಯಕರ ಸಾಲಿನಲ್ಲಿದ್ದಾರೆ. ಈಗ ಇವರ ಮತ್ತೋರ್ವ ಸಹೋದರರಾದ ನರೇಂದ್ರ ಟಿಕಾಯತ್ ಕೂಡ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...