Homeಮುಖಪುಟಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಮೋದಿ ಸರ್ಕಾರ ಇರುವವರೆಗೂ ಮುಂದುವರಿಸಲು ಸಿದ್ಧ ಎಂದು ನರೇಂದ್ರ ಟಿಕಾಯತ್ ಹೇಳಿದ್ದಾರೆ.

“ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಇಬ್ಬರು ಹಿರಿಯ ಸೋದರರಾದ ಹಾಗೂ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ನರೇಶ್ ಮತ್ತು ರಾಕೇಶ್ ಟಿಕಾಯತ್ ಅವರಂತೆಯೇ ರೈತರ ಸಮಸ್ಯೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ:…

ಮುಜಫ್ಫರನಗರದ ಸಿಸೌಲಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ 45 ವರ್ಷದ ನರೇಂದ್ರ, “ತಮ್ಮ ಕುಟುಂಬದ ಯಾವುದೇ ಒಬ್ಬ ಸದಸ್ಯ ಕೂಡ ಯವುದೇ ತಪ್ಪು ಮಾಡಿದ್ದಾರೆಂದು ಸಾಬೀತಾದಲ್ಲಿ ಇಡೀ ಟಿಕಾಯತ್ ಕುಟುಂಬ ಪ್ರತಿಭಟನಾ ಸ್ಥಳವನ್ನು ತ್ಯಜಿಸುತ್ತದೆ” ಎಂದು ಹೇಳಿದ ಅವರು ತಮ್ಮ ಕುಟುಂಬ ಪ್ರತಿಭಟನೆಯಿಂದ ಹಣ ಮತ್ತು ಆಸ್ತಿ ಸಂಪಾದಿಸಿದೆ ಎಂಬ ಕೆಲ ಆರೋಪಗಳನ್ನು ನಿರಾಕರಿಸಿದ್ದಾರೆ.

“ನಾನು ಮನೆಯಲ್ಲಿದ್ದರೂ ಸಹ ನನ್ನ ಕಣ್ಣೆಲ್ಲಾ ಪ್ರತಿಭಟನಾ ಸ್ಥಳದಲ್ಲಿದೆ. ಆಗಾಗ ಅಲ್ಲಿಗೆ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ತಮ್ಮ ಎಲ್ಲಾ ಬೇಡಿಕೆಗಳು ಸಂಪೂರ್ಣವಾಗಿ ಈಡೇರಿದ ನಂತರ ರೈತರು ಪ್ರತಿಭಟನಾ ಸ್ಥಳದಿಂದ ತೆರಳುತ್ತಾರೆ. ಯಾವುದೇ ಭರವಸೆ ಅಥವಾ ಭಾಗಶಃ ಬೇಡಿಕೆ ಪೂರೈಕೆಗೆ ಅವರು ಬಗ್ಗುವುದಿಲ್ಲ ಎಂದು ರೈತರ ನಿಲುವನ್ನು ಪುನರುಚ್ಚರಿಸಿದರು.

“ಕೃಷಿ ಉತ್ಪನ್ನಗಳನ್ನು ಎಂಎಸ್‍ಪಿಗೆ ಖರೀದಿಸಲಾಗುವುದೆಂದು ಹೇಳುತ್ತಿರುವ ಸರ್ಕಾರ ಲಿಖಿತ ಭರವಸೆಯನ್ನು ಏಕೆ ನೀಡುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ರಾಕೇಶ್ ಟಿಕಾಯತ್, ನರೇಶ್ ಟಿಕಾಯತ್ ಅವರು ರೈತ ಹೋರಾಟದ ಮುಂಚೂಣಿ ನಾಯಕರ ಸಾಲಿನಲ್ಲಿದ್ದಾರೆ. ಈಗ ಇವರ ಮತ್ತೋರ್ವ ಸಹೋದರರಾದ ನರೇಂದ್ರ ಟಿಕಾಯತ್ ಕೂಡ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...