Homeಮುಖಪುಟಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಕಳೆದ ಮೂರು ತಿಂಗಳಿನಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಮೋದಿ ಸರ್ಕಾರ ಇರುವವರೆಗೂ ಮುಂದುವರಿಸಲು ಸಿದ್ಧ ಎಂದು ನರೇಂದ್ರ ಟಿಕಾಯತ್ ಹೇಳಿದ್ದಾರೆ.

“ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.

ತಮ್ಮ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್‍ನಲ್ಲಿ ಯಾವುದೇ ಅಧಿಕೃತ ಹುದ್ದೆ ಹೊಂದದೇ ಹಾಗೂ ಕುಟುಂಬದ ಕೃಷಿ ಕಾರ್ಯಗಳಲ್ಲಿ ಹೆಚ್ಚಾಗಿ ನರೇಂದ್ರ ಟಿಕಾಯತ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಇಬ್ಬರು ಹಿರಿಯ ಸೋದರರಾದ ಹಾಗೂ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ನರೇಶ್ ಮತ್ತು ರಾಕೇಶ್ ಟಿಕಾಯತ್ ಅವರಂತೆಯೇ ರೈತರ ಸಮಸ್ಯೆ ಕುರಿತಂತೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಎಂಎಸ್‌ಪಿ ಕಾಗದದಲ್ಲಿತ್ತು, ಕಾಗದದಲ್ಲಿ ಇದೆ ಮತ್ತು ಮುಂದೆಯೂ ಕಾಗದದಲ್ಲಿಯೇ ಇರಲಿದೆ ಹೊರತು ರೈತರಿಗೆ ಸಿಗುತ್ತಿಲ್ಲ:…

ಮುಜಫ್ಫರನಗರದ ಸಿಸೌಲಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ 45 ವರ್ಷದ ನರೇಂದ್ರ, “ತಮ್ಮ ಕುಟುಂಬದ ಯಾವುದೇ ಒಬ್ಬ ಸದಸ್ಯ ಕೂಡ ಯವುದೇ ತಪ್ಪು ಮಾಡಿದ್ದಾರೆಂದು ಸಾಬೀತಾದಲ್ಲಿ ಇಡೀ ಟಿಕಾಯತ್ ಕುಟುಂಬ ಪ್ರತಿಭಟನಾ ಸ್ಥಳವನ್ನು ತ್ಯಜಿಸುತ್ತದೆ” ಎಂದು ಹೇಳಿದ ಅವರು ತಮ್ಮ ಕುಟುಂಬ ಪ್ರತಿಭಟನೆಯಿಂದ ಹಣ ಮತ್ತು ಆಸ್ತಿ ಸಂಪಾದಿಸಿದೆ ಎಂಬ ಕೆಲ ಆರೋಪಗಳನ್ನು ನಿರಾಕರಿಸಿದ್ದಾರೆ.

“ನಾನು ಮನೆಯಲ್ಲಿದ್ದರೂ ಸಹ ನನ್ನ ಕಣ್ಣೆಲ್ಲಾ ಪ್ರತಿಭಟನಾ ಸ್ಥಳದಲ್ಲಿದೆ. ಆಗಾಗ ಅಲ್ಲಿಗೆ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ತಮ್ಮ ಎಲ್ಲಾ ಬೇಡಿಕೆಗಳು ಸಂಪೂರ್ಣವಾಗಿ ಈಡೇರಿದ ನಂತರ ರೈತರು ಪ್ರತಿಭಟನಾ ಸ್ಥಳದಿಂದ ತೆರಳುತ್ತಾರೆ. ಯಾವುದೇ ಭರವಸೆ ಅಥವಾ ಭಾಗಶಃ ಬೇಡಿಕೆ ಪೂರೈಕೆಗೆ ಅವರು ಬಗ್ಗುವುದಿಲ್ಲ ಎಂದು ರೈತರ ನಿಲುವನ್ನು ಪುನರುಚ್ಚರಿಸಿದರು.

“ಕೃಷಿ ಉತ್ಪನ್ನಗಳನ್ನು ಎಂಎಸ್‍ಪಿಗೆ ಖರೀದಿಸಲಾಗುವುದೆಂದು ಹೇಳುತ್ತಿರುವ ಸರ್ಕಾರ ಲಿಖಿತ ಭರವಸೆಯನ್ನು ಏಕೆ ನೀಡುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

ರಾಕೇಶ್ ಟಿಕಾಯತ್, ನರೇಶ್ ಟಿಕಾಯತ್ ಅವರು ರೈತ ಹೋರಾಟದ ಮುಂಚೂಣಿ ನಾಯಕರ ಸಾಲಿನಲ್ಲಿದ್ದಾರೆ. ಈಗ ಇವರ ಮತ್ತೋರ್ವ ಸಹೋದರರಾದ ನರೇಂದ್ರ ಟಿಕಾಯತ್ ಕೂಡ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...