Homeಕರ್ನಾಟಕಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಜುಂಜಿ ಅಹ್ಮದ್ ಅವರು ಸ್ಥಲೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ- ರವಿಕೃಷ್ಣಾ ರೆಡ್ಡಿ

- Advertisement -
- Advertisement -

ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ಪರಿಶೀಲನೆ ನಡೆಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ಮುಖ್ಯಸ್ಥರಾದ ರವಿಕೃಷ್ಣಾ ರೆಡ್ಡಿ ಮತ್ತು ಮುಖಂಡರನ್ನು ಬಂಧಿಸಲಾಗಿದೆ.

“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ “ಲಂಚಮುಕ್ತ ಕರ್ನಾಟಕ” ಅಭಿಯಾನದ ಭಾಗವಾಗಿ ಇಂದು ನಾಗಮಂಗಲ ತಾಲ್ಲೂಕಿನ ಕಚೇರಿಯ ಅವ್ಯವಸ್ಥೆಗಳ ಬಗ್ಗೆ ಮತ್ತು ನಮಗೆ ಬಂದ ದೂರುಗಳ ಬಗ್ಗೆ ಅಲ್ಲಿ ಪರಿಶೀಲಿಸಿ ತಹಸೀಲ್ದಾರ್’ರವರಿಗೆ ಲೋಪದೋಷಗಳ ಪಟ್ಟಿ ನೀಡಲು ಹೋದಾಗ, ಅಲ್ಲಿ ಅಸಭ್ಯವಾಗಿ ಮತ್ತು ಅಧಿಕಾರಿಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿರುವ ತಹಸೀಲ್ದಾರ್ ಕುಂಜಿ ಅಹ್ಮದ್ ನಮ್ಮ ಮೇಲೆ ಸುಳ್ಳು ಆರೋಪಗಳ ದೂರು ನೀಡಿ, ಸ್ಥಳೀಯ ಗೂಂಡಾಗಳನ್ನು ಪ್ರಚೋದಿಸಿ ಹಲ್ಲೆ ಮಾಡುವ ವಾತಾವರಣ ನಿರ್ಮಿಸಿ, ಸ್ಥಳೀಯ ಪೊಲೀಸರನ್ನು ಶಾಮೀಲು ಮಾಡಿಕೊಂಡು ದೂರು ದಾಖಲಿಸಿ ನಮ್ಮನ್ನು ಬಂಧಿಸುವಂತೆ ಮಾಡಿರುತ್ತಾರೆ” ಎಂದು ಪಕ್ಷದ ಮುಖಂಡರು ಆರೋಪಿಸಿದ್ದಾರೆ

“ಇಡೀ ಘಟನೆ ನಮ್ಮ ಪಕ್ಷದ FB ಪುಟದಲ್ಲಿ ಲೈವ್ ದಾಖಲಾಗಿರುತ್ತದೆ. ಇದನ್ನು ಈ ಮೂಲಕ ಕಂದಾಯ ಸಚಿವ ಆರ್ ಆಶೋಕ್ ಅವರ ಗಮನಕ್ಕೆ ತರುತ್ತಿದ್ದೇವೆ. ನಿಮ್ಮ ಇಲಾಖೆಯ ಸದರಿ ಅಧಿಕಾರಿಯ ಒಟ್ಟಾರೆ ವರ್ತನೆ ಅನೇಕ ಸಂಶಯಗಳನ್ನು ಹುಟ್ಟಿಸುತ್ತಿದೆ ಮತ್ತು ಅವರು ಇಲ್ಲಿ ಒಂದು ಖಾಸಗಿ ಪಟಾಲಂ ಕಟ್ಟಿಕೊಂಡು ಕಾನೂನುಬಾಹಿರ ಕೆಲಸಗಳನ್ನು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ಈ ಕುರಿತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿಯೂ ಮನವಿ ಮಾಡಿದ್ದಾರೆ.

ನಾಗಮಂಗಲದ ಪೊಲೀಸ್ ಠಾಣೆಯಲ್ಲಿ ಪಕ್ಷದ ನಾಯಕರು. ರಾಜ್ಯಾಧ್ಯಕ್ಷರೂ ಸೇರಿದಂತೆ ಹಲವರನ್ನು ಕಳೆದ ಎರಡು ಗಂಟೆಗಳಿಂದ ಠಾಣೆಯಲ್ಲಿ ಇರಿಸಿಕೊಂಡು ಸುಳ್ಳು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಫೇಸ್‌ಬುಕ್ ಪುಟದಿಂದ ಘಟನೆಯ ಸಂಪೂರ್ಣ ವಿವರ ವೀಡಿಯೋ ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಪೊಲೀಸ್‌ ಠಾಣೆಯಿಂದಲೇ ಮಾತನಾಡಿದ ರವಿಕೃಷ್ಣಾ ರೆಡ್ಡಿ, “ಇಲ್ಲಿನ ಎಸ್‌ಐ ರವಿಶಂಕರ್‌ಗೆ ಯಾವುದೆ ನಿಯಮಗಳು ಗೊತ್ತಿಲ್ಲ. ಇನ್ನು ತಹಶೀಲ್ದಾರ್ ಕುಂಜಿ ಅಹ್ಮದ್ ಅವರು ಸ್ಥಳೀಯ ಗೂಂಡಾಗಳನ್ನು ಕರೆಸಿ ಪರಿಸ್ಥಿತಿಯನ್ನು ಉದ್ವಿಘ್ನಗೊಳಿಸಿದ್ದಾರೆ. ಅವರನ್ನೆ ಸಾರ್ವಜನಿಕರು ಎಂದು ಬಿಂಬಿಸಿ ಅವಾಂತರ ಸೃಷ್ಟಿಸಿದ್ದಾರೆ” ಎಂದು ಹೇಳಿದರು.

ಇಂದು ಸಂಜೆಯ ವೇಳೆಗೆ ತಮ್ಮನ್ನು ಮಂಡ್ಯ ಕಾರಾಗೃಹಕ್ಕೆ ಕಳುಹಿಸುತ್ತಾರೆ ಎಂದೂ ಹೇಳಿದ್ದಾರೆ.


ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...