Homeಮುಖಪುಟಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

- Advertisement -
- Advertisement -

ವಕೀಲರು ಮತ್ತು ನ್ಯಾಯಾಧೀಶರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನೇಷನ್ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ಹೂಡಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಬುಧವಾರ ಹೇಳಿದ್ದು, ಕೆಲವು ನಿರ್ಧಾರಗಳನ್ನು “ಕಾರ್ಯನಿರ್ವಾಹಕರ ಬುದ್ಧಿವಂತಿಕೆಗೆ” ಬಿಡಬೇಕು ಎಂದಿದೆ. ಮುಂಬೈ ಮೂಲದ ವಕೀಲರ ಗುಂಪೊಂದು ಈ ಪಿಐಎಲ್ ಸಲ್ಲಿಸಿದ್ದು, ಸಿಬ್ಬಂದಿ ಸೇರಿದಂತೆ ನ್ಯಾಯಾಂಗದ ಸದಸ್ಯರಿಗೆ ಮೊದಲು ಲಸಿಕೆ ಹಾಕಬೇಕು ಎಂದು ಮನವಿ ಮಾಡಿದ್ದರು.

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ನ್ಯಾಯಪೀಠವು ಈ ಮನವಿಯನ್ನು ಆಲಿಸಿ, ಪೌರ ಕಾರ್ಮಿಕರು ಮತ್ತು ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಂತಹ ಅನೇಕರು ಸಾಂಕ್ರಾಮಿಕ ರೋಗದ ಮಧ್ಯೆ ಕೆಲಸ ಮುಂದುವರಿಸಿದ್ದಾರೆ. ಡಬ್ಬಾವಾಲಾಗಳು, ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳು ಪಿಐಎಲ್ ಯಾಕೆ ಸಲ್ಲಿಸಬಾರದು? ಎಲ್ಲರೂ ಮುಂಚೂಣಿ ಕೆಲಸಗಾರರಾಗಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಲಿರುವ ಮಮತಾ ಬ್ಯಾನರ್ಜಿ; ಅವರು ಹೇಳಿದ್ದೇನು?

“ಕೆಲವೊಂದು ಕೆಲಸಗಳನ್ನು ಕಾರ್ಯನಿರ್ವಾಹಕನ ಬುದ್ಧಿವಂತಿಕೆಗೆ ಬಿಡಬೇಕು. ವ್ಯಾಕ್ಸಿನೇಷನ್‌ ನೀತಿಯಲ್ಲಿ ಏನು ತಪ್ಪಾಗಿದೆ ಎಂದು ನಮಗೆ ತಿಳಿಸಿ? ತಪ್ಪುಗಳಿಲ್ಲದ ನೀತಿ ನಿರ್ಧಾರದಲ್ಲಿ ನ್ಯಾಯಾಲಯವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

“ನೀವು ‘ಟೈಟಾನಿಕ್’ ಚಲನಚಿತ್ರವನ್ನು ನೋಡಿದ್ದೀರಾ? ಹಡಗಿನ ಕ್ಯಾಪ್ಟನ್ ಅನ್ನು ನೀವು ನೆನಪಿಸಿಕೊಳ್ಳಿ? ಇತರೆ ಪ್ರಯಾಣಿಕರನ್ನು ಸ್ಥಳಾಂತರಿಸುವವರೆಗೂ ಅವನು ಕಾದಿರುತ್ತಾನೆ. ಮೊದಲು, ಪ್ರತಿಯೊಬ್ಬರೂ ಲಸಿಕೆಯನ್ನು ಪಡೆಯಲಿ ನಂತರದ ಆದ್ಯತೆ ನ್ಯಾಯಾಂಗಕ್ಕೆ. ನಾನು ಇಲ್ಲಿ ನಾಯಕನಾಗಿದ್ದೇನೆ” ಎಂದು ಮುಖ್ಯ ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ.

ಭಾರತದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಜನವರಿ 16 ರಂದು ಪ್ರಾರಂಭವಾಗಿದ್ದು, ಆರೋಗ್ಯ ಕಾರ್ಯಕರ್ತರು, ಪುರಸಭೆಯ ಕಾರ್ಮಿಕರು, ಪೊಲೀಸ್, ರಕ್ಷಣಾ ಸಿಬ್ಬಂದಿ ಸೇರಿದಂತೆ ಇತರ ಮುಂಚೂಣಿ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗಿತ್ತು.

ಇದನ್ನೂ ಓದಿ: ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...