Homeಚಳವಳಿಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ - ರೈತ ಮುಖಂಡರು

ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ಮಹಿಳಾ ದಿನದಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗಿದ್ದ ಹೋರಾಟಗಾರ್ತಿ ನೋದೀಪ್ ಕೌರ್ ಮೇಲೆ ಎಬಿವಿಪಿ ನಡೆಸಿದ ದಾಳಿಯನ್ನು ಎಸ್‌ಕೆಎಂ ಖಂಡಿಸಿದೆ.

- Advertisement -
- Advertisement -

ಸರ್ಕಾರದೊಂದಿಗೆ ಮಾತುಕತೆಗಾಗಿ 9 ಸದಸ್ಯರ ಸಮಿತಿಯನ್ನು ರಚಿಸಲಾಗುತ್ತಿದೆ ಎಂಬ ಹೇಳಿಕೆಗಳು ಸುಳ್ಳು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸ್ಪಷ್ಟಪಡಿಸಿದೆ. ಸರ್ಕಾರದೊಂದಿಗೆ ಮಾತನಾಡಲು ಅಂತಹ ಯಾವುದೇ ಸಮಿತಿಯನ್ನು ರಚಿಸಲಾಗಿಲ್ಲ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ರೈತರು, ರೈತ ವಿರೋಧಿ ಬಿಜೆಪಿಗೆ ಮತ ಚಲಾಯಿಸದಂತೆ ಅಲ್ಲಿನ ಮತದಾರರನ್ನು ಮನವಿ ಮಾಡಲು ಎಸ್‌ಕೆಎಂ ನಾಯಕರ ತಂಡ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಹೋಗಲಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮವು ಮಾರ್ಚ್ 12 ರಂದು ಪಶ್ಚಿಮ ಬಂಗಾಳದಿಂದ ಪ್ರಾರಂಭವಾಗಿ ಮೂರು ದಿನಗಳು ಈ ರಾಜ್ಯಗಳಲ್ಲಿ ನಡೆಯಲಿದೆ ಎಂದು ಎಸ್‌ಕೆಎಂ ಪತ್ರಿಕಾ ಪ್ರಕಟಣೆ ತಿಳಿಸಿದೆ.

ರೈತ ಆಂದೋಲನದಲ್ಲಿ ಈವರೆಗೆ ಪ್ರಾಣ ತ್ಯಾಗ ಮಾಡಿರುವ ರೈತರ ಸಂಖ್ಯೆ 280 ದಾಟಿದೆ ಎಂದು ಮಾಹಿತಿ ನೀಡಿದ್ದಾರೆ. ಇಂದು (ಬುಧವಾರ) ಹರಿಯಾಣದ ಜಿಂದ್ ಜಿಲ್ಲೆಯ 50 ವರ್ಷದ ರೈತ ರಾಧೇಶ್ಯಾಮ್ ಟಿಕ್ರಿ ಗಡಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ಕಿಸಾನ್ ಮಜ್ದೂರ್ ಜಾಗೃತಿ ಯಾತ್ರೆಯು ಉತ್ತರ ಪ್ರದೇಶದ ಬಿಜ್ನೋರ್ ದಾಟಿ, ನಿನ್ನೆ ಉತ್ತರಾಖಂಡದ ಜಸ್ಪುರಕ್ಕೆ ಪ್ರವೇಶಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಯಾತ್ರೆ 300 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ಮತ್ತು ಇದುವರೆಗೆ 200 ಕ್ಕೂ ಹೆಚ್ಚು ಹಳ್ಳಿಗಳು, ಪಟ್ಟಣಗಳನ್ನು ತಲುಪಿದೆ. ಇಂದು ರಾತ್ರಿ ದಿನೇಶಪುರವನ್ನು ತಲುಪುವ ನಿರೀಕ್ಷೆಯಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇನ್ನು, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗಿದ್ದ ಹೋರಾಟಗಾರ್ತಿ ನೋದೀಪ್ ಕೌರ್ ಮೇಲೆ ಎಬಿವಿಪಿ ನಡೆಸಿದ ದಾಳಿಯನ್ನು ಎಸ್‌ಕೆಎಂ ಖಂಡಿಸಿದೆ.

ಇತ್ತ, “ರೈತರು ಮೋದಿ ಸರ್ಕಾರದ ಉಳಿದ ಮೂರೂವರೆ ವರ್ಷ ಅವಧಿಯುದ್ದಕ್ಕೂ ತಮ್ಮ ಹೋರಾಟ ಮುಂದುವರಿಸಲು ಸಿದ್ಧವಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರಯತ್ನಿಸಿದರೂ ಈ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ರೈತ ಮುಖಂಡ ನರೇಂದ್ರ ಟಿಕಾಯತ್ ಹೇಳಿದ್ದಾರೆ.


ಇದನ್ನೂ  ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...