Homeಕರ್ನಾಟಕ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ - ಡಿ.ಕೆ. ಶಿವಕುಮಾರ್‌‌

‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

- Advertisement -
- Advertisement -

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಲ್ಲಿರುವ ಲೈಂಗಿಕ ಹಗರಣ ಮತ್ತು ಸಿಡಿ ವಿಚಾರವಾಗಿ ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ “ರಾಜಕಾರಣದಲ್ಲಿ ಷಡ್ಯಂತ್ರ ಸಹಜ. ಇವರಿಗೆ ಶರ್ಟು, ಪ್ಯಾಂಟ್ ಬಿಚ್ಚಲು ಯಾರಾದರೂ ಹೇಳಿ ಕೊಟ್ಟಿದ್ರಾ? ಅವರು ಆಡಿರುವ ಮಾತುಗಳಿಗೆ ಸ್ಕ್ರಿಪ್ಟ್ ನಾವು ಬರೆದು ಕೊಟ್ಟಿದ್ವಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಕರಣವನ್ನು ನಾವೂ ಗಮನಿಸುತ್ತಿದ್ದೇವೆ. ಸುಮ್ಮನೆ ಏನೂ ಕುಳಿತಿಲ್ಲ. ಯಡಿಯೂರಪ್ಪ ವಿರುದ್ಧ ಸೆಡ್ಡು ಹೊಡೆದ ಶಾಸಕರು ಸಿಡಿ ಬಿಡುಗಡೆ ಮಾಡಿದ್ದಾರೆ. ವಿಶ್ವನಾಥ್ ಅವರು ಮುಖ್ಯಮಂತ್ರಿಗೆ ಸಿಡಿ ಗುಮ್ಮಾ ಅಂತಾ ಹೇಳಿದ್ದಾರೆ. ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ ಅಂತಾ ಯತ್ನಾಳ್ ಅವರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎಲ್ಲರನ್ನು ಒಗ್ಗೂಡಿಸಲು ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿಕೊಂಡಿದ್ದರು ಎಂದು ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಹಿಂದೆ ಶ್ರೀನಿವಾಸ ಗೌಡರು ಭ್ರಷ್ಟಾಚಾರ ಕುರಿತು ಸದನದಲ್ಲೇ ಕೊಟ್ಟ ಹೇಳಿಕೆ ಬಗ್ಗೆ ತನಿಖೆ ಮಾಡಲು ಆಗಲಿಲ್ಲ. ಭ್ರಷ್ಟಾಚಾರದ ಬಗ್ಗೆ ಕೊಟ್ಟ ಹೇಳಿಕೆ ವಿರುದ್ಧದ ತನಿಖೆ ಏನಾದವು?” ಎಂದು ಹೇಳಿದ್ದಾರೆ.

ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

“ಸಿ.ಡಿ.ಯಲ್ಲಿ ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ, ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರನ್ನು ಅವಹೇಳನ ಮಾಡಿದ್ದಾರೆ. ಕನ್ನಡಿಗನಾಗಿ ನಾನು ಆ ಮಾತು ಹೇಳಬಾರದು. ಬೆಳಗಾವಿಯನ್ನು ಪ್ರತ್ಯೇಕ ರಾಜ್ಯ ಎಂದಿದ್ದಾರೆ. ಕನ್ನಡ ಹೋರಾಟಗಾರರು ಯಾಕೆ ಇನ್ನೂ ಸುಮ್ನೆ ಇದ್ದಾರೋ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಸರ್ಕಾರವೇ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಯಾಕೆ ಇನ್ನೂ ಕೇಸು ಹಾಕಿಲ್ಲ, ಕೇಸು ತೆಗೆದುಕೊಂಡಿಲ್ಲ” ಎಂದು ಅವರು ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

“ಈ ವಿಚಾರವಾಗಿ ಕೆಲವರು ಕೋರ್ಟ್ ಗೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸಿ.ಡಿ. ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿದ್ದಾರೆ. ಯಾಕೆ ಕೋರ್ಟ್ ಗೆ ಹೋಗಿದ್ದಾರೋ ಆ ಬಗ್ಗೆ ಅವರಿಗೇ ಗೊತ್ತಿದೆ. ನಮಗೇನು ಗೊತ್ತು? ಈ ಸಿ.ಡಿ. ಪ್ರಸಂಗ ಬಾಂಬೆಯಲ್ಲಿ ನಡೆಯಿತೋ? ಬೆಂಗಳೂರಿನಲ್ಲಿ ನಡೆಯಿತೋ? ಪೂನಾದಲ್ಲಿ ನಡಿತೋ? ಬಿಜೆಪಿ ಸರ್ಕಾರ ಇತ್ತೋ? ಶಿವಸೇನೆ ಸರ್ಕಾರ ಇತ್ತೋ? ಯಾರು, ಏನು, ಎತ್ತಾ ಅಂತಾ ಅವರೇ ಹೇಳಬೇಕು? ಇದರಲ್ಲಿ ತಿರುಚುವುದು ಏನಿದೆ? ಒಂದೋ ಎರಡೋ ತಿರುಚಬಹುದು. 19 ಸಿ.ಡಿ.ಗಳನ್ನೂ ತಿರುಚಲು ಆಗುತ್ತಾ?” ಎಂದು ಡಿಕೆಶಿ ಕೇಳಿದ್ದಾರೆ.

ಸಿ.ಡಿ.ಯನ್ನು ಕಾಂಗ್ರೆಸ್‌‌ನವರು ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ,  “ಕಾಂಗ್ರೆಸ್‌ನವರು ಮಾಡಿದ್ದಾರೆ ಅಂದ್ರೆ, ಕಾಂಗ್ರೆಸ್ ಅವರು ಬಂದು ನಿಮ್ಮ ಶರ್ಟು, ಪ್ಯಾಂಟ್ ಬಿಚ್ಚಿ ಅಂತಾ ಹೇಳಿ ಕೊಟ್ಟಿದ್ರಾ? ಸಿಎಂ ಭ್ರಷ್ಟ ಎಂದು ಹೇಳಲು ಸ್ಕ್ರಿಪ್ಟ್ ಬರೆದು ಕೊಟ್ಟಿದ್ರಾ? ಕನ್ನಡಿಗರ ವಿರುದ್ಧ ಮಾತಾಡಿ ಎಂದು ಹೇಳಿಕೊಟ್ವಾ? ನಾವೇನು ಸ್ಕ್ರಿಪ್ಟ್ ಕೊಟ್ವಾ? ಇದೇನು ಸಿನಿಮಾನಾ? ಇವೆಲ್ಲಾ ಅವರ ಬಾಯಿಲ್ಲಿ ಬಂದಂತಹ ನುಡಿಮುತ್ತುಗಳು..!” ಎಂದು ಹೇಳಿದ್ದಾರೆ.

ಯಾವ ತನಿಖೆ ಬೇಕಾದರೂ ಮಾಡಲಿ, ಯಾವ ಪಕ್ಷದ ಮೇಲಾದರೂ ಹೇಳಲಿ. ವಿರೋಧ ಪಕ್ಷವಾಗಿ ನಾವು ಭ್ರಷ್ಟಾಚಾರ ಆರೋಪ ಮಾಡುವುದು ಬೇರೆ ವಿಚಾರ. ಆದರೆ ಹಾಲಿ ಮಂತ್ರಿ ಅವರು ಮುಖ್ಯಮಂತ್ರಿ ಭ್ರಷ್ಟ ಎಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಅಲ್ಲವೇ? ಇದನ್ನು ಮುಖ್ಯಮಂತ್ರಿಗಳು ಹೇಗೆ ಸಹಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಹಾಲು ಕುಡಿಸಿ, ಇಂತಹ ಮಾತು ಹೇಳಿಸಲು ಅವರೇನು ಚಿಕ್ಕ ಮಕ್ಕಳಾ? ಇದನ್ನೆಲ್ಲಾ ಹೇಗೆ ನಿಭಾಯಿಸಬೇಕು ಅಂತಾ ಕಾಂಗ್ರೆಸ್‌ಗೆ ಗೊತ್ತಿದೆ. ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದೊಂದಿಗೆ ಚರ್ಚಿಸಲು ಯಾವುದೇ ಸಮಿತಿ ರಚಿಸಿಲ್ಲ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...