Homeಮುಖಪುಟ‘ಯಾವ ದಾಳಿಯು ದೃಢತೆಯನ್ನು ಮುರಿಯದು’ - ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿಯ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ವರದಿಯಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಂದಿಗ್ರಾಮದ ದೇವಾಲಯವೊಂದರ ಹೊರಗೆ ನಾಲ್ಕೈದು ಜನರ ಗುಂಪಿನಿಂದ ಹಲ್ಲೆ ನಡೆದಿದೆ ಎಂದು ಬುಧವಾರ ರಾತ್ರಿ ವರದಿಯಾಗಿದೆ. ಇದೀಗ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳು ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದೆ ಎಂದು ವರದಿ ನೀಡಿದೆ. ಅಷ್ಟೇ ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

“ಮಮತಾ ಬ್ಯಾನರ್ಜಿಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲೇನಲ್ಲ. ಮುಂಚೆಯೂ ರೈತರ ಪರ ನಿಂತಿದ್ದಕ್ಕಾಗಿ ಈ ಐತಿಹಾಸಿಕ ಸ್ಥಳದಲ್ಲಿ ಅವರ ಮೇಲೆ ದಾಳಿ ಮಾಡಲಾಗಿತ್ತು. ಆದರೆ ಯಾವುದೂ ಅವರ ದೃಡತೆಯನ್ನು ಮುರಿಯುವುದಿಲ್ಲ. ಅವರು ನಿಮ್ಮ ಪ್ರಬಲ ಧ್ವನಿಯಾಗಿ ಮುಂದುವರಿಯುತ್ತಾರೆ” ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಈಗಾಗಲೇ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ. ಅವರು ಪ್ರಭಾವಿ ಅಲ್ಪಸಂಖ್ಯಾತ ಮುಖಂಡ ಅಬ್ಬಾಸ್ ಸಿದ್ದೀಕ್ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ನೊಂದಿಗೆ ಸಂಪರ್ಕದಲ್ಲಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತಿ. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆಲ್ಲಲಿಲ್ಲ.

2019 ರ ಚುನಾವಣೆಯಲ್ಲಿ ಬಿಜೆಪಿಯ ಗಣನೀಯ ಸಾಧನೆಯ ನಂತರ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...