Homeಮುಖಪುಟಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

ಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಿತ್ತಾಟದ ನಡುವೆ ಎಡಪಕ್ಷಗಳು ಮತ್ತು ಕಾಂಗ್ರೆಸ್‌‌ನ ಮೈತ್ರಿ ಕೂಡಾ ಕೂಡಾ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಎಡಪಕ್ಷಗಳು ಈ ಭಾರಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ಮಣೆ ಹಾಕಿವೆ. ಅದರಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕಿ 26 ವರ್ಷದ ಐಶೆ ಘೋಷ್‌ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿಪಿಐ(ಎಂ) ನಿಂದ ಆಯ್ಕೆಯಾಗಿದ್ದಾರೆ.

ಜೆಎನ್‌ಯುವಿನಲ್ಲಿ ಹಾಸ್ಟೆಲ್ ಫೀಸ್‌ ಹೆಚ್ಚಿಸುವುದರ ವಿರುದ್ದ ನಡೆದ ವಿದ್ಯಾರ್ಥಿ ಹೋರಾಟಕ್ಕೆ ಐಶೆ ಘೋಷ್‌ ನಾಯಕತ್ವ ನೀಡಿದ್ದರು. 2020 ರ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಅವರ ಮೇಲೆ ಬಲ ಪಂಥೀಯ ವಿದ್ಯಾರ್ಥಿಗಳು ತೀವ್ರ ದಾಳಿ ನಡೆಸಿದ್ದರು.

ಸಿಪಿಐ(ಎಂ) ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ(ಎಸ್‌ಎಫ್‌ಐ) ನಾಯಕಿಯು ಆಗಿರುವ ಐಶೆ ಘೋಷ್ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಜಮುರಿಯಾದಿಂದ ಸ್ಪರ್ಧಿಸಲಿದ್ದಾರೆ. ಅವರು ಈ ಜಿಲ್ಲೆಯ ದುರ್ಗಾಪುರದವರಾಗಿದ್ದಾರೆ.

ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ವಿಧಾನಸಭಾ ಚುನಾವಣೆಗೆ ಹಲವು ಯುವ ನಾಯಕರನ್ನು ಕಣಕ್ಕಿಳಿಸಿದೆ. ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಜಿ ಅವರು ಹೂಗ್ಲಿ ಜಿಲ್ಲೆಯ ಸಿಂಗೂರ್ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಸಿಪಿಐ(ಎಂ) ಯುವಜನ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲಿ ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಸುವೆಂದು ಅವರು ಮಮತಾ ಬ್ಯಾನರ್ಜಿಯ ಆಪ್ತರಾಗಿದ್ದರು, ಇತ್ತೀಚೆಗಷ್ಟೇ ಅವರು ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಅಷ್ಟೇ ಅಲ್ಲದೆ, ಜೆಎನ್‌ಯುನ ಮತ್ತೊಬ್ಬ ವಿದ್ಯಾರ್ಥಿ ನಾಯಕಿ, ದೀಪ್ಸಿತಾ ಧರ್ ಅವರಿಗೂ ಪಶ್ಚಿಮ‌ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿಐ(ಎಂ) ಟಿಕೆಟ್ ನೀಡಿದೆ.

ಆರು ಹಂತಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿರುವ ಹೆಚ್ಚಿನ ಸ್ಥಾನಗಳ ಹೆಸರನ್ನು ಬಂಗಾಳ ಎಡರಂಗದ ಅಧ್ಯಕ್ಷ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬಿಮನ್ ಬೋಸ್ ಬುಧವಾರ ಬಿಡುಗಡೆ ಮಾಡಿದ್ದಾರೆ. ಬಂಗಾಳದ 294 ಸ್ಥಾನಗಳಲ್ಲಿ, ಮೊದಲ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 60 ರ ಎಡ ಅಭ್ಯರ್ಥಿಗಳ ಹೆಸರನ್ನು ಕಳೆದ ವಾರ ಘೋಷಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಅಬ್ಬಾಸುದ್ದೀನ್ ಸಿದ್ದಿಕಿ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಕೂಡಾ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. “ಕಾಂಗ್ರೆಸ್ ಮತ್ತು ಐಎಸ್ಎಫ್‌ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುತ್ತವೆ. ಮಾತುಕತೆ ಇನ್ನೂ ನಡೆಯುತ್ತಿದೆ” ಎಂದು ಬೋಸ್ ಹೇಳಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತು. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ವಿಡಿಯೋ ನೋಡಿ►► ‘ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...