Homeಮುಖಪುಟಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

ಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

- Advertisement -
- Advertisement -

1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‍ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟೂಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‍ಸಿಂಗ್. ಆಗ ಅವರ ಕುತ್ತಿಗೆಯನ್ನು ಕುಡಗೋಲಿನಿಂದ ಸೀಳಿದರು ಆ ಗಲಭೆಕೋರರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿ  ಏಳು ವರ್ಷದ ಒಬ್ಬ ಬಾಲಕ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‍ಸಿಂಗ್ ಅವರ ಪುತ್ರ.

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತನ್ನ ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ‘ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ’ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನದಲ್ಲಿ ದ್ವೇಷವು ಪರಿಣಾಮ ಬೀರಲು ಅವಕಾಶ ನೀಡಲಿಲ್ಲ.

ಮುಂದೆ ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನು ನೀಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ‘ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ’ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ‘ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ?’ ಎಂದೆಲ್ಲಾ ಪೀಡಿಸಲಾರಂಭಿಸಿದರು. ತಂದೆ ದೇವೇಂದ್ರ ಜಾತ್ಯತೀತತೆಯ ಬಗ್ಗೆ ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ‘ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ’ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಯಾದವ್ ಎಂದಾಯಿತು.

ಈ ಘಟನೆಯ ಬಗ್ಗೆ ಯಾಕೆ ಹೇಳಬೇಕಾಯಿತು?

2014 ರಲ್ಲಿ ಯೋಗೇಂದ್ರ ಯಾದವ ಅವರು, ಹರಿಯಾಣದ ಗುರುಗ್ರಾಮದಲ್ಲಿ ಚುನಾವಣೆಗೆ ನಿಂತಾಗ ಬಿಜೆಪಿಯವರು ಒಂದು ಪತ್ರಿಕಾಗೋಷ್ಠಿ ನಡೆಸಿದರು. ಅಲ್ಲಿ ಯೋಗೇಂದ್ರ ಯಾದವ ಅವರು ತಮ್ಮ ನಿಜವಾದ ಹೆಸರು ಸಲೀಂ ಎಂದು ಹೇಳಿಕೊಂಡು, ಅದರ ಆಧಾರದ ಮೇಲೆ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಗ ಯೋಗೇಂದ್ರ ಯಾದವ ಅವರು, ತಾವು ಹಾಗೆ ಮಾಡಿದ ಒಂದೇ ಒಂದು ಸಾಕ್ಷ್ಯವನ್ನು ಒದಗಿಸಿ ತಾನು ರಾಜಕೀಯದಿಂದ ನಿವೃತ್ತನಾಗುವೆ ಎಂದು ಘೋಷಿಸಿದರು ಮತ್ತು ಆ ಮಾತನ್ನು ಪುನರುಚ್ಛಿಸುತ್ತಲೇ ಇದ್ದಾರೆ. ಮೊನ್ನೆ ಇಂಡಿಯಾ ಟುಡೇಯ ಸಂವಾದವೊಂದರಲ್ಲಿ ಜಾತ್ಯತೀತತೆಯ ಬಗ್ಗೆ ಮಾತನಾಡಿದಾಗ ಬಿಜೆಪಿಯ ಅಮಿತ್ ಮಾಳವಿಯ ಅವರು ಯೋಗೇಂದ್ರ ಯಾದವ ಅವರಿಗೆ ಇದರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಚುನಾವಣೆಯ ಸಮಯದಲ್ಲಿ ತಮ್ಮ ಮುಸ್ಲಿಂ ಹೆಸರಿನ ಆಧಾರದ ಮೇಲೆ ರಾಜಕೀಯ ಮಾಡಿದ್ದಾರೆ ಎಂದು ಹೇಳಿದಾಗ, ಯೋಗೇಂದ್ರ ಯಾದವ ಅವರಿಗೆ ಈ ಎಲ್ಲ ಕಥೆಯನ್ನು ಮತ್ತೊಮ್ಮೆ ಹೇಳಬೇಕಾಯಿತು.

ಅಮಿತ್ ಮಾಳವೀಯ ನಂತಹ ವ್ಯಕ್ತಿಗೆ ಇಂತಹ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯ ಇಲ್ಲ ಎಂದು ಹೇಳಿ, ತಾವು ತಮ್ಮ ಮುಸ್ಲಿಂ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪ ನಿಜವಾಗಿದ್ದಲ್ಲಿ, ಸಾಕ್ಷ್ಯ ಒದಗಿಸಿ ಇಲ್ಲವಾದರೆ ಸುಮ್ಮನಿರಿ (‘ಶಟ್ ಅಪ್’) ಎಂದು ಗುಡುಗಿದರು. ಬಿಜೆಪಿಯವರು ಸಾಕ್ಷ್ಯವನ್ನು ಒದಗಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಇನ್ನು ಮುಂದೆಯೂ ಇಂತಹ ಆರೋಪವನ್ನು ಮಾಡುವದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅವರ ಮತ್ತು ತಂದೆಯ ಮೇಲೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ನೀವೂ ಆ ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...