Homeಮುಖಪುಟಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

ಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

- Advertisement -
- Advertisement -

1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‍ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟೂಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‍ಸಿಂಗ್. ಆಗ ಅವರ ಕುತ್ತಿಗೆಯನ್ನು ಕುಡಗೋಲಿನಿಂದ ಸೀಳಿದರು ಆ ಗಲಭೆಕೋರರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿ  ಏಳು ವರ್ಷದ ಒಬ್ಬ ಬಾಲಕ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‍ಸಿಂಗ್ ಅವರ ಪುತ್ರ.

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತನ್ನ ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ‘ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ’ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನದಲ್ಲಿ ದ್ವೇಷವು ಪರಿಣಾಮ ಬೀರಲು ಅವಕಾಶ ನೀಡಲಿಲ್ಲ.

ಮುಂದೆ ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನು ನೀಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ‘ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ’ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ‘ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ?’ ಎಂದೆಲ್ಲಾ ಪೀಡಿಸಲಾರಂಭಿಸಿದರು. ತಂದೆ ದೇವೇಂದ್ರ ಜಾತ್ಯತೀತತೆಯ ಬಗ್ಗೆ ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ‘ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ’ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಯಾದವ್ ಎಂದಾಯಿತು.

ಈ ಘಟನೆಯ ಬಗ್ಗೆ ಯಾಕೆ ಹೇಳಬೇಕಾಯಿತು?

2014 ರಲ್ಲಿ ಯೋಗೇಂದ್ರ ಯಾದವ ಅವರು, ಹರಿಯಾಣದ ಗುರುಗ್ರಾಮದಲ್ಲಿ ಚುನಾವಣೆಗೆ ನಿಂತಾಗ ಬಿಜೆಪಿಯವರು ಒಂದು ಪತ್ರಿಕಾಗೋಷ್ಠಿ ನಡೆಸಿದರು. ಅಲ್ಲಿ ಯೋಗೇಂದ್ರ ಯಾದವ ಅವರು ತಮ್ಮ ನಿಜವಾದ ಹೆಸರು ಸಲೀಂ ಎಂದು ಹೇಳಿಕೊಂಡು, ಅದರ ಆಧಾರದ ಮೇಲೆ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಗ ಯೋಗೇಂದ್ರ ಯಾದವ ಅವರು, ತಾವು ಹಾಗೆ ಮಾಡಿದ ಒಂದೇ ಒಂದು ಸಾಕ್ಷ್ಯವನ್ನು ಒದಗಿಸಿ ತಾನು ರಾಜಕೀಯದಿಂದ ನಿವೃತ್ತನಾಗುವೆ ಎಂದು ಘೋಷಿಸಿದರು ಮತ್ತು ಆ ಮಾತನ್ನು ಪುನರುಚ್ಛಿಸುತ್ತಲೇ ಇದ್ದಾರೆ. ಮೊನ್ನೆ ಇಂಡಿಯಾ ಟುಡೇಯ ಸಂವಾದವೊಂದರಲ್ಲಿ ಜಾತ್ಯತೀತತೆಯ ಬಗ್ಗೆ ಮಾತನಾಡಿದಾಗ ಬಿಜೆಪಿಯ ಅಮಿತ್ ಮಾಳವಿಯ ಅವರು ಯೋಗೇಂದ್ರ ಯಾದವ ಅವರಿಗೆ ಇದರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಚುನಾವಣೆಯ ಸಮಯದಲ್ಲಿ ತಮ್ಮ ಮುಸ್ಲಿಂ ಹೆಸರಿನ ಆಧಾರದ ಮೇಲೆ ರಾಜಕೀಯ ಮಾಡಿದ್ದಾರೆ ಎಂದು ಹೇಳಿದಾಗ, ಯೋಗೇಂದ್ರ ಯಾದವ ಅವರಿಗೆ ಈ ಎಲ್ಲ ಕಥೆಯನ್ನು ಮತ್ತೊಮ್ಮೆ ಹೇಳಬೇಕಾಯಿತು.

ಅಮಿತ್ ಮಾಳವೀಯ ನಂತಹ ವ್ಯಕ್ತಿಗೆ ಇಂತಹ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯ ಇಲ್ಲ ಎಂದು ಹೇಳಿ, ತಾವು ತಮ್ಮ ಮುಸ್ಲಿಂ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪ ನಿಜವಾಗಿದ್ದಲ್ಲಿ, ಸಾಕ್ಷ್ಯ ಒದಗಿಸಿ ಇಲ್ಲವಾದರೆ ಸುಮ್ಮನಿರಿ (‘ಶಟ್ ಅಪ್’) ಎಂದು ಗುಡುಗಿದರು. ಬಿಜೆಪಿಯವರು ಸಾಕ್ಷ್ಯವನ್ನು ಒದಗಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಇನ್ನು ಮುಂದೆಯೂ ಇಂತಹ ಆರೋಪವನ್ನು ಮಾಡುವದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅವರ ಮತ್ತು ತಂದೆಯ ಮೇಲೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ನೀವೂ ಆ ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...