Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...