Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...