Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...