Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....