Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...