Homeಅಂತರಾಷ್ಟ್ರೀಯವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

- Advertisement -
- Advertisement -

ಒಂದಲ್ಲ, ಏಳು ಭಾರತೀಯ ರಾಜ್ಯಗಳು! ಬಸ್ ಖರೀದಿಯಲ್ಲಿ ‘ರೈಲು’ ಬಿಟ್ಟಿದೆ ಕೇಂದ್ರ ಸಾರಿಗೆ ಸಚಿವಾಲಯ! ಹಾಳಾಗಿ ಹೋಗ್ಲಿ, ಇದೆಲ್ಲ ಗೊತ್ತಿದ್ದರೂ, ದೊಡ್ಡ ಮೀಡಿಯಾ ಸುಮ್ಮನಿದೆ!
ಏಳು ರಾಜ್ಯಗಳಿಗೆ ಬಸ್‌ ಒದಗಿಸುವ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಬಸ್ ತಯಾರಕ ಕಂಪನಿ ಸ್ಕ್ಯಾನಿಯಾ ಲಂಚ ನೀಡಿದೆ, ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ಬಹಿರಂಗ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

2013 ಮತ್ತು 2016 ರ ನಡುವೆ ಏಳು ಭಾರತೀಯ ರಾಜ್ಯಗಳಲ್ಲಿ ಬಸ್ ಒಪ್ಪಂದಗಳನ್ನು ಗೆಲ್ಲಲು ಸ್ವೀಡಿಷ್ ಟ್ರಕ್ ಮತ್ತು ಬಸ್ ತಯಾರಕ ಸಂಸ್ಥೆ ಸ್ಕ್ಯಾನಿಯಾ ಲಂಚ ನೀಡಿದೆ ಎಂದು ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ.

ಸ್ಕ್ಯಾನಿಯಾದಿಂದ ಲಂಚ ಪಡೆದವರಲ್ಲಿ ಒಬ್ಬ ‘ಅನಾಮಧೇಯ’ ಸಚಿವ ಕೂಡ ಇದ್ದಾರೆ.
ಸ್ವೀಡನ್‌ನ ಎಸ್‌ವಿಟಿ ಮತ್ತು ಜರ್ಮನಿಯ ಝೆಡ್‌ಡಿಎಫ್ ತನಿಖೆಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದ ಪ್ರಕಾರ, 2016 ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರರೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಸ್ಕ್ಯಾನಿಯಾ ಐಷಾರಾಮಿ ಬಸ್ ಒಂದನ್ನು ಮಾರಿದೆ. ಈ ಆರೋಪಗಳನ್ನು ಸಚಿವರ ಕಚೇರಿ “ದುರುದ್ದೇಶಪೂರಿತ, ಕಟ್ಟುಕಥೆ ಮತ್ತು ಆಧಾರರಹಿತ” ಎಂದು ಬುಧವಾರ ಹೇಳಿದೆ.

ಸ್ಕ್ಯಾನಿಯಾ ವಕ್ತಾರರು ಈ ಪ್ರಕರಣದಲ್ಲಿ ಲೋಪ ಆಗಿವೆ ಎಂದು ರಾಯಿಟರ್ಸ್‌ಗೆ ತಿಳಿಸಿದ್ದಾರೆ.. ಸ್ಕ್ಯಾನಿಯಾದ ಸಿಇಒ ಹೆನ್ರಿಕ್ ಹೆನ್ರಿಕ್ಸನ್, ಭಾರತದಲ್ಲಿ ತನ್ನ ವ್ಯವಹಾರದಲ್ಲಿ ಕಂಪನಿಯು “ಸ್ವಲ್ಪ ನಿಷ್ಕಪಟ” ವಾಗಿರಬಹುದು ಎಂದು ಹೇಳಿದ್ದಾರೆ..

ತನಿಖೆಯ ಪ್ರಕಾರ, 11.8 ಮಿಲಿಯನ್ ಡಾಲರ್ ಒಪ್ಪಂದದ ಭಾಗವಾಗಿ, ಚಾರ್ಸಿ ನಂಬರ್ ಮತ್ತು ಪರವಾನಗಿ ಫಲಕಗಳನ್ನು ಬದಲಾಯಿಸುವ ದಂಧೆಯೂ ಇಲ್ಲಿ ನಡೆದಿದೆ. ಭಾರತೀಯ ಗಣಿಗಾರಿಕೆ ಕಂಪನಿ ಒಂದರ ಜೊತೆ ಸ್ಕ್ಯಾನಿಯಾ ಈ ದಂಧೆ ಮಾಡಿದೆ ಎಂದು ಆರೋಪಿಸಲಾಗಿದೆ.

ಲಂಚ ಹಗರಣದ ಸುದ್ದಿ ಬರುತ್ತಿದ್ದಂತೆ, ಟ್ವಿಟರ್‌ನಲ್ಲಿ “ಸ್ಕ್ಯಾನಿಯಾ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಭರ್ಜರಿ ವಿರೋಧ ವ್ಯಕ್ತವಾಗಿತು. ಆಕ್ಟಿವಿಸ್ಟ್‌ಗಳು, ಪತ್ರಕರ್ತರು ಮತ್ತು ಇತರ ಬಳಕೆದಾರರು ಈ ಹಗರಣ ವರದಿ ಮಾಡದ ಮುಖ್ಯವಾಹಿನಿಯ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಟುಡೆ ಮಾಜಿ ಸಂಪಾದಕ ದಿಲೀಪ್ ಮಂಡಲ್, ಹಗರಣದ ಬಗ್ಗೆ ಮುಖ್ಯವಾಹಿನಿಗಳ ಮೌನವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಸಂಪಾದಕೀಯ ಸಲಹೆಗಾರ ಸಂಜುಕ್ತ ಬಸು ಮತ್ತು ಸ್ವೀಡನ್ ಮೂಲದ ಸಂಶೋಧಕ ಅಶೋಕ್ ಸ್ವೈನ್ ಕೂಡ ತನಿಖೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಿವಾಸಿ ಹಕ್ಕುಗಳ ಗುಂಪು ಸಹ ವಿರೋಧ ವ್ಯಕ್ತ ಮಾಡಿದೆ.

ಪಟ್ಟಭದ್ರ ಹಿತಾಸಕ್ತಿಗಳನ್ನು ಗಮನಿಸದ ಅಥವಾ ಆ ತರಹ ನಾಟಕ ಆಡುವ ಪತ್ರಿಕೋದ್ಯಮವು ಈ ದೇಶದಲ್ಲಿ ಹೆಚ್ಚು ಚಾಲ್ತಿಯಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.
(ಕೃಪೆ: ನ್ಯೂಸ್ ಲ್ಯಾಂಡ್ರಿ)


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...