Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...