Homeಅಂತರಾಷ್ಟ್ರೀಯಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡಿದ ಶಿಶುವಿಹಾರ: ನೋಟಿಸ್ ನೀಡಿದ ಚೀನಾ ಸರ್ಕಾರ

ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ- ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್

- Advertisement -
- Advertisement -

ಮಕ್ಕಳಿಗೆ ಕೇವಲ ಸಸ್ಯಾಹಾರ ನೀಡವುದನ್ನು ಖಂಡಿಸಿ, ಮಾಂಸಹಾರವನ್ನು ನೀಡಬೇಕೆಂದು ಚೀನಾದ ಅಧಿಕಾರಿಗಳು ನೈರುತ್ಯ ಚೀನಾದಲ್ಲಿರುವ ಶಿಶುವಿಹಾರಕ್ಕೆ ಆದೇಶ ನೀಡಿರುವ ಘಟನೆ ನಡೆದಿದೆ.

“ಚೆಂಗ್‌ಡು ನಗರದ ಡೆಯಿನ್ ಸ್ಕೂಲ್ ಎಂದು ಕರೆಯಲ್ಪಡುವ ಶಿಶುವಿಹಾರವು “ಶಾಲಾಪೂರ್ವ ಹಂತದ ಮಕ್ಕಳಿಗೆ ಮಾಂಸ ಆಧಾರಿತ ಆಹಾರವನ್ನು ನೀಡದೇ, ಆಹಾರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮತ್ತು ಸ್ಥಳೀಯ ನಿಯಮಗಳನ್ನು ಮುರಿದಿದೆ” ಎಂದು ಹಾಂಗ್-ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಸ್ಥಳೀಯ ಶಿಕ್ಷಣ ಬ್ಯೂರೋ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಶಾಲೆಯು ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದೆ. ಆದರೆ ಸರ್ಕಾರ ನೀಡಿರುವ ಪೌಷ್ಠಿಕಾಂಶ ಆಹಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಮಾಂಸ ಮತ್ತು ಮೀನಿನ ಆಹಾರಗಳನ್ನು ಮಕ್ಕಳಿಗೆ ನೀಡಲಾಗುತ್ತಿಲ್ಲ ಎಂದು ಬ್ಯೂರೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜೊತೆಗೆ ಊಟದ ನಿಯಮವನ್ನು ಸುಧಾರಿಸುವುದರೊಂದಿಗೆ ಅದನ್ನು ಹೆಚ್ಚು ಸಮತೋಲನಗೊಳಿಸುವಂತೆಯೂ ಆದೇಶಿಸಿದೆ.

49 ಮಕ್ಕಳ ದಾಖಲಾತಿಯಿರುವ ಶಿಶುವಿಹಾರ, ವಿದ್ಯಾರ್ಥಿಗಳಲ್ಲಿ ಸಸ್ಯಾಹಾರಿ ಆಹಾರವನ್ನು ಉತ್ತೇಜಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಶಿಕ್ಷಣ ಬ್ಯೂರೋ ಮಧ್ಯಪ್ರವೇಶಿಸಿದೆ. ಜೊತೆಗೆ ಕೆಲವರು ಶಿಶು ವಿಹಾರದ ಈ ಕ್ರಮವನ್ನು ‘ಕನ್‌ಫ್ಯೂಷನಿಸಂ’ ಧರ್ಮಕ್ಕೆ ತಾಳೆ ಹಾಕಿ ಟೀಕೆ ಮಾಡಿದ್ದಾರೆ.

ಈ ಕುರಿತು WeChat ನಲ್ಲಿ ವಿವಾದ ಸೃಷ್ಟಿಯಾಗಿದ್ದು, “ಗ್ರೇಟ್! ಚೆಂಗ್‌ಡೂನಲ್ಲಿ ಸಂಪೂರ್ಣ ಸಸ್ಯಾಹಾರಿ ಶಿಶುವಿಹಾರವಿದೆ” ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಅನೇಕರು, “ತಮ್ಮ ಮಕ್ಕಳು ಅಗತ್ಯ ಪೋಷಕಾಂಶಗಳನ್ನು ಪಡೆಯುತ್ತಾರೆಯೇ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು, “ಕನ್‌ಫ್ಯೂಷಿಯಸ್ ಎಂದಿಗೂ ಜನರು ಮಾಂಸವನ್ನು ತ್ಯಜಿಸಬೇಕು ಎಂದು ಹೇಳಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. “ಮಕ್ಕಳಿಗೆ ಸಸ್ಯಾಹಾರವನ್ನು ನೀಡುವುದು ದುಷ್ಕೃತ್ಯ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಡೆಯಿನ್ ಶಾಲೆ ನಿರಾಕರಿಸಿದೆ.

ಇದನ್ನೂ ಓದಿ: ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಚೀನಾದಲ್ಲಿ ಯೋಗ ಮತ್ತು ಸಸ್ಯಾಹಾರದ ಸಂಸ್ಕೃತಿ ಆರಂಭವಾಗುತ್ತಿದೆ. ರಾಜಧಾನಿ ಬೀಜಿಂಗ್ ಸೇರಿದಂತೆ ದೇಶಾದ್ಯಂತ ಹಲವಾರು ಸಸ್ಯಾಹಾರಿ ರೆಸ್ಟೋರೆಂಟ್‌ಗಳು ಆರಂಭವಾಗಿವೆ ಎಂದು ಮಿಂಟ್ ವರದಿ ಮಾಡಿದೆ.

ಚೀನಾದ ಪ್ರಾಚೀನ ಸಂಸ್ಕೃತಿ ಮರೆಯಾಗುತ್ತಿರುವ ಮತ್ತು ಮಕ್ಕಳಲ್ಲಿ ಸ್ಥೂಲ ಕಾಯದ ಸಮಸ್ಯೆ ಹೆಚ್ಚುತ್ತಿರುವ ಆತಂಕದ ನಡುವೆ, ಪುರಾತನ ಚೀನಾದ ಶಾಸ್ತ್ರೀಯ ಬೋಧನೆ ಮತ್ತು ಸಸ್ಯಾಹಾರ ಆಹಾರವನ್ನು ಉತ್ತೇಜಿಸುವ ಶೈಕ್ಷಣಿಕ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತಿವೆ.

ಆದರೆ ವಿಶ್ವಾದ್ಯಂತ ಹೆಚ್ಚುತ್ತಿರುವ ಸಸ್ಯಾಹಾರಿ ಆಹಾರದ ಜನಪ್ರಿಯತೆಯ ನಡುವೆ, ಚೀನಾದಲ್ಲಿ ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಝೇಜಿಯಾಂಗ್ ವಿಶ್ವವಿದ್ಯಾಲಯದ ಆಹಾರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಝೌ ವೆನ್ವೆನ್, “ಸಸ್ಯಗಳಿಂದ ಪಡೆದ ಆಹಾರವನ್ನು ಮಾತ್ರ ಅವಲಂಬಿಸಿದರೆ ಅಪೌಷ್ಟಿಕತೆಗೆ ಕಾರಣವಾಗಬಹುದು ಎಂದು ವಿಶ್ವದಾದ್ಯಂತದ ಅಧ್ಯಯನಗಳು ಸಾಬೀತುಪಡಿಸಿವೆ. ಮನುಷ್ಯನ ದೇಹವು ತನಗೆ ಅಗತ್ಯವಾದ ಅಮೈನೋ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಮಾಂಸಾಹಾರಗಳಿಂದ ಪಡೆಯಬೇಕಾಗಿದೆ. ಮಕ್ಕಳಿಗೆ ಅಂತಹ ಪೋಷಕಾಂಶಗಳ ಹೆಚ್ಚಿನ ಅಗತ್ಯವಿರುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿದೇಶದಿಂದ ಬಸ್ ಖರೀದಿಯಲ್ಲೂ ಲಂಚ: ಎಲ್ಲ ಗೊತ್ತಿದ್ದರೂ ಮಲಗೇ ಇರುವ ದೊಡ್ಡ ಮೀಡಿಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...