Homeಮುಖಪುಟಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

ಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಭಾರಿ ಸದ್ದು ಮಾಡಿದ್ದ ಮೀಸಲಾತಿ ಹೋರಾಟ ಈಗ ನಡೆಯುತ್ತಿರುವ ಕಲಾಪದಲ್ಲಿ ಪ್ರಸ್ತಾಪವೇ ಆಗುತ್ತಿಲ್ಲ. ಭಾರಿ ಹವಾ ಮಾಡಿದ ಪಂಚಮಸಾಲಿ ಹೋರಾಟವೂ ಸಿ.ಡಿ ಗದ್ದಲದಲ್ಲಿ ಗಾಯಬ್ ಆಗಿದೆ. ಈ ನಡುವೆ, ಲಿಂಗಾಯತ ಧರ್ಮದಲ್ಲಿ ಈ ವೀರಶೈವರದೇನು ಕೆಲಸ, ಅವರು ಲಿಂಗಾಯತ ಧರ್ಮದ 100 ಉಪಪಂಗಡಗಳಲ್ಲಿ ಒಂದು ಅಷ್ಟೇ ಎಂದು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗಿನ ದೂರವಾಣಿ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಾನುಗೌರಿ: ಇತ್ತೀಚೆಗೆ ಸುದ್ದಿಯಾದ ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಸುದ್ದಿಯೇ ಆಗಲಿಲ್ಲ. ಈ ಕುರಿತು ನಿಮ್ಮ ಅಭಿಪ್ರಾಯ?

ಜಾಮದಾರ್: ರೀ ಅದೊಂದು ಹೋರಾಟವಾ? ಅಮಾಯಕ ಪಂಚಮಸಾಲಿಗಳನ್ನು ದಿಕ್ಕು ತಪ್ಪಿಸಿದ ಮತ್ತು ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಂಡ ಹೋರಾಟವಾಗಿದೆ.

ನಾನುಗೌರಿ: ಅಂದರೆ ಪಂಚಮಸಾಲಿಗಳು 2ಎ ಮೀಸಲಾತಿಗೆ ಅರ್ಹರೇ ಅಲ್ಲ ಎಂಬುದು ನಿಮ್ಮ ಅಭಿಪ್ರಾಯವೇ?

ಜಾಮದಾರ್: ಎಲ್ಲ ಸಮುದಾಯಗಳಿಗೂ ತಮ್ಮ ಪಾಲಿನ ಮೀಸಲಾತಿ ಕೇಳುವ ಹಕ್ಕಿದೆ. ಆದರೆ ಇದನ್ನು ಯಡಿಯೂರಪ್ಪ ಆಗಲಿ, ಸಿಸಿ ಪಾಟೀಲ್, ನಿರಾಣಿ ಅವರಾಗಲಿ ಏಕ್‌ಧಂ ನಿರ್ಣಯ ಮಾಡಲು ಆಗಲ್ಲ. ಅದಕ್ಕೆ ಒಂದು ಪ್ರೊಸೆಸ್ ಅಂತಾ ಇದೆ. ಈ ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ.

ನಾನುಗೌರಿ.ಕಾಂ: 3-ಬಿಯಿಂದ 2ಎ ಗೆ ಸೇರಲು ಅವರ ಪ್ರತಿಭಟನೆ ನಡೆಯಿತು. ಈ ಕುರಿತು ನಿಮ್ಮ ಅಭಿಪ್ರಾಯ ಏನು?

ಜಾಮದಾರ್: ಲಿಂಗಾಯತ ಧರ್ಮದಲ್ಲಿ 100 ಉಪ ಪಂಗಡಗಳಿವೆ. 3-ಬಿಯಲ್ಲಿ ಉಲ್ಲೇಖ ಆಗಿರುವುದು ಕೇವಲ 23 ಲಿಂಗಾಯತ ಉಪ ಪಂಗಡಗಳಷ್ಟೆ. ಉಳಿದ 77 ಉಪ ಪಂಗಡಗಳ ಬಗ್ಗೆ ಯಾರೂ ಯೊಚಿಸುತ್ತಿಲ್ಲ. ಕೆಲವು ರಾಜಕಾರಣಿಗಳ ಪುಸಲಾವಣೆಯೊಂದಿಗೆ ಕಾವಿ ತೊಟ್ಟವರು ಪಂಚಮಸಾಲಿ ಸಮಯದಾಯದ ದಿಕ್ಕು ತಪ್ಪಿಸಲು ನೋಡಿದರು. ಅದರ ಭಾಗವೇ ಈ ಹೋರಾಟ. ಈ ಹೋರಾಟ ಲಿಂಗಾಯತರಿಗೆ ಒಂದು ಕಪ್ಪು ಚುಕ್ಕೆ.

ನಾನುಗೌರಿ: ಇದರ ಹಿಂದೆ ಒಂದು ದೊಡ್ಡ ಶಕ್ತಿಯೇ ಇದೆಯಲ್ಲವಾ?

ಜಾಮದಾರ್: ಎಲ್ಲ ಪಂಚಮಸಾಲಿಗಳಲ್ಲ. ಆದರೆ ಅವರನ್ನು ಪ್ರತಿನಿಧಿಸುತ್ತೇವೆ ಎನ್ನುವ ಸ್ವಾಮಿಗಳು, ರಾಜಕಾರಣಿಗಳ ಒಂದು ಗುಂಪಿದೆ. ಬೇಡ ಜಂಗಮರ ಹೆಸರಲ್ಲಿ ಬೇಡರ ಮೀಸಲಾತಿ ಕದಿಯುವ ಗುಂಪಿದೆ ಮತ್ತು ವೀರಶೈವ-ಲಿಂಗಾಯತ ಎನ್ನುವ ತಳಬುಡವಿಲ್ಲದ ಗುಂಪೂ ಇದೆ. ಈ ಮೂರೂ ಗುಂಪುಗಳು ಅಖಂಡ ಲಿಂಗಾಯತ ಧರ್ಮವನ್ನು ಒಡೆದು ಹಾಕುತ್ತಿವೆ.

ನಾನುಗೌರಿ: ನೀವು ವೀರಶೈವ-ಲಿಂಗಾಯತ ಎಂಬ ತಳಬುಡವಿಲ್ಲದ ಗುಂಪು ಎಂದಿರಿ. ಈಗ ಅದೇ ಹೆಸರಲ್ಲಿ ಒಂದು ನಿಗಮ ಆಗಿದೆಯಲ್ಲ?

ಜಾಮದಾರ್: ವೀರಶೈವ-ಲಿಂಗಾಯತ ಅಂದರೆ ಯಾರ‍್ರಿ ಇವರು? ವೀರಶೈವರೂ ಅಲ್ಲ, ಈ ಕಡೆ ಲಿಂಗಾಯತರೂ ಅಲ್ಲ. ಲಿಂಗಾಯತ ಧರ್ಮಧ ನೂರು ಉಪ ಪಂಗಡಗಳಲ್ಲಿ ಅದೂ ಒಂದು ಅಷ್ಟೇ. ಈ ಹೆಸರಲ್ಲಿ ಒಂದು ಸರ್ವಶ್ರೇಷ್ಠ ಧರ್ಮವಾದ ಲಿಂಗಾಯತ ಧರ್ಮವನ್ನು ಇವರೆಲ್ಲ ನಾಶ ಮಾಡಲು ಹೊರಟಿದ್ದಾರೆ. ನಾವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ, ನೀವೆಲ್ಲ ಧರ್ಮ ಒಡೆಯುತ್ತಿದ್ದೀರಾ ಎಂದರು. ಈಗ ಅವರು ಮಾಡುತ್ತಿರುವುದೇನು? ಕೆಲವು ಸ್ವ ಹಿತಾಸಕ್ತಿ ಗುಂಪುಗಳು ಪುಡಿಗಾಸಿಗಾಗಿ ಧರ್ಮ ಒಡೆಯುತ್ತಿವೆ. ಇದರ ಹಿಂದೆ ಒಂದು ವ್ಯವಸ್ಥಿತ ಲಾಭಕರ ಸ್ವ ಹಿತಾಸಕ್ತಿಯ ಗುಂಪು ಇವೆ.

ನಾನುಗೌರಿ: ಈ ನಿಗಮಕ್ಕೆ 500 ಕೋಟೊ ರೂ ಕೊಟ್ಟಿದ್ದಾರಲ್ಲ?

ಜಾಮದಾರ್: ಅಲ್ರೀ ಇನ್ನೂ ಆ ನಿಗಮ ಅಧಿಕೃತವಾಗಿ ಚಾಲನೆಗೇ ಬಂದಿಲ್ಲ. ಅದಕ್ಕೆ 500 ಅಲ್ಲ, 100 ಕೋಟಿ ಅಲ್ಲ, 10 ಕೋಟಿ ರೂ ಕೂಡ ಸಿಗಲ್ಲ. ಇದೆಲ್ಲ ಒಂದು ಹುಚ್ಚಾಟ ಮತ್ತು ಪಾಲಿಟಿಕಲ್ ಗೇಮ್ ಅಷ್ಟೇ.

ನಾನುಗೌರಿ: ಅಂದರೆ ಈ ಹೋರಾಟಕ್ಕೆ ಭದ್ರ ಬುನಾದಿಯೇ ಇಲ್ಲ ಎನ್ನುತ್ತೀರಾ?

ಜಾಮದಾರ್: ಈ ಕುರಿತು ಅಂತಿಮ ತೀರ್ಮಾನ ಕೊಡಲಾರೆ, ಆದರೆ ಖಾವಿ ಧರಿಸಿ ಮೀಸಲಾತಿ ಕೇಳಿದ ಕೂಡಲೇ ಅದು ಸಿಗಲ್ಲ. ಅದಕ್ಕೆ ಪ್ರೊಸೆಸ್ ಇದೆ. ಯಡಿಯೂರಪ್ಪ ಅಂತಲ್ಲ, ಯಾರೇ ಸಿಎಂ ಆಗಿದ್ದರೂ ಆ ಪ್ರಕ್ರಿಯೆಯ ಮೂಲಕವೇ ಹೋಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆ ತಡೆದ ಬಿಜೆಪಿ-ಆರ್‌ಎಸ್‌ಎಸ್ ಇಂತಹ ದುಸ್ಸಾಹಸ ಮಾಡುತ್ತಿವೆ. ಈ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲ ಒಂದೇ ಬಿಡಿ.

ನಾನುಗೌರಿ: ಪಂಚಮಸಾಲಿಗಳಿಗೆ 2-ಎ ಸ್ಥಾನಮಾನ ಸಿಕ್ಕಿತು ಅಂದುಕೊಳ್ಳೋಣ. ಆಗ ಏನಾಗಬಹುದು?

ಜಾಮದಾರ್: ಈಗ ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿ ಮಾಡಿದ 10 ಪರ್ಸೆಂಟ್ ಮೀಸಲಾತಿಯಲ್ಲಿ ಪಂಚಮಸಾಲಿಗಳು, ಬೇಡ ಜಂಗಮರು, ಬಣಜಿಗರು ಕೂಡ ಬರುತ್ತಾರೆ. 2-ಎ ಮತ್ತು 10 ಪರ್ಸೆಂಟ್ ಎರಡನ್ನೂ ಪಡೆಯಲಾಗಲ್ಲ. ಈ ಕಾನೂನು ಬಗ್ಗೆ ತಿಳಿಯದೇ ಏನೇನೋ ಹೋರಾಟ ಮಾಡುತ್ತಿದ್ದಾರೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್

(ಈ ಸಂದರ್ಶನದಲ್ಲಿ ತಪ್ಪು ಗ್ರಹಿಕೆಯಿಂದಾಗಿ ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ ಎಂದು ಬಂದಿತ್ತು. ಅದಕ್ಕಾಗಿ ವಿಷಾಧಿಸುತ್ತೇವೆ)


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಾಮದಾರರದು ತಪ್ಪು ಅಭಿಪ್ರಾಯ..
    ಈ ಹಿಂದೆ ಬೇಡಜಂಗಮರೆಂಬ ಪಂಗಡ ಲಿಂಗಾಯತ ಪಂಥದಲ್ಲಿ ಬರುವುದು ಎಂದಿದ್ದರು.
    ಜಂಗಮ, ಜಾತಿ ಪಟ್ಟಿಯಲ್ಲಿ ಏಕಿಲ್ಲ ಎಂಬುದನ್ನು ಜಾಮದಾರ ವಿವರಿಸಲಿ.
    ಮೀಸಲಾತಿ ಇರುವುದು ಜಾತಿಗೇ ಹೊರತು ಮತ, ಧರ್ಮಕ್ಕಲ್ಲ ಎನ್ನುವ ಸಾಮಾನ್ಯ ಅರಿವೂ ಜಾಮದಾರರಿಗಿಲ್ಲ.
    ಬಣಜಿಗ, 2A ದಲ್ಲಿ ಶೈಕ್ಷಣಿಕ ಮೀಸಲಾತಿ ಮತ್ತು ಕೇಂದ್ರ OBC ಯಲ್ಲಿ ಬರುತ್ತದೆ ಎನ್ನುವ ಸತ್ಯವನ್ನೂ ಮುಚ್ಚಿಡುತ್ತಾರೆ. ಮೀಸಲಾತಿ ವಂಚಿಸಿ ವೀರಶೈವ ಅಥವಾ ಲಿಂಗಾಯತರನ್ನು ಶೋಷಿಸುವುದೇ ಧರ್ಮವಾಗಬಾರದು..!!

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...