Homeಅಂಕಣಗಳುಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು "ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಹುಟ್ಟಿ ರಾಜಸ್ತಾನವನ್ನು ಹಾದು ಉತ್ತರಪ್ರದೇಶದಲ್ಲಿ ಯಮುನೆಯನ್ನು ಸೇರುವ ಚಂಬಲ್ ನದಿಯ ಪ್ರಾಚೀನ ಹೆಸರು ಚರ್ಮಾನ್ವತಿ. ಅರ್ಥಾತ್ ದಂಡೆಗಳ ಮೇಲೆ ಚರ್ಮವನ್ನು ಒಣಗಿಸಲಾಗುತ್ತಿದ್ದ ನದಿ. ಮಹಾಭಾರತದಲ್ಲಿ ಈ ನದಿಯ ಹೆಸರು ಚರ್ಮಾನ್ಯವತಿ. ಆರ್ಯ ಅರಸು ರಂತಿದೇವನು ಅಗ್ನಿಹೋತ್ರದಲ್ಲಿ ಬಲಿ ನೀಡಿದ ಸಹಸ್ರಾರು ಪ್ರಾಣಿಗಳ ರಕ್ತ ಮತ್ತು ರಾಶಿ ಹಾಕಲಾಗಿದ್ದ ಚರ್ಮಗಳಿಂದ ಹರಿದ ದ್ರವಧಾರೆಯಿಂದ ಹುಟ್ಟಿದ ನದಿ. ಪಾಂಚಾಲ ರಾಜ್ಯದ ದಕ್ಷಿಣ ಸರಹದ್ದಾಗಿತ್ತು. ಶಕುನಿಯ ರಾಜ್ಯವಾಗಿದ್ದ ಸೀಮೆ. ಪಗಡೆಯಾಟ- ವಸ್ತ್ರಾಪಹರಣದ ನಂತರ ಕ್ರುದ್ಧ ದ್ರೌಪದಿ ಚರ್ಮಾನ್ವತಿಯನ್ನೂ ಅದರ ನೀರು ಕುಡಿದವರನ್ನೂ ಶಪಿಸುತ್ತಾಳೆ.

ಶಪಿತ ನದಿಯ ನೀರನ್ನು ಯಾರೂ ಮುಟ್ಟುವುದಿಲ್ಲ. ಹೀಗಾಗಿ ಈ ನದಿ ಮಲಿನವಾಗಲಿಲ್ಲ ಎಂಬ ಪ್ರತೀತಿಯಿದೆ. ಚಂಬಲ್ ಇಂದಿಗೂ ದೇಶದ ಅತ್ಯಂತ ಪರಿಶುದ್ಧ ನದಿಗಳಲ್ಲೊಂದು. ಚಂಬಲ್ ನೂರಾರು ವರ್ಷಗಳ ಕಾಲ ಕೊರೆದು ರಚಿಸಿರುವ ದುರ್ಗಮ ಕಣಿವೆಗಳು ಖ್ಯಾತ-ಕುಖ್ಯಾತ. ತಮ್ಮನ್ನು ಬಂಡಾಯಗಾರರು ಎಂದು ಕರೆದುಕೊಂಡ ಡಕಾಯಿತರು 20ನೆಯ ಶತಮಾನದಲ್ಲಿ ಈ ಕಣಿವೆಗಳಿಗೆ ಭೀತಿ- ನಿಗೂಢತೆಯನ್ನು ಲೇಪಿಸಿದರು. ಡಕಾಯಿತರ ಕುರಿತು ತಯಾರಿಸಿದ ಚಲನಚಿತ್ರಗಳು ಚಂಬಲ್ ಕಣಿವೆಯ ದಂತಕತೆಯನ್ನು ದೇಶದ ಮನೆಮನೆಗೆ ಮುಟ್ಟಿಸಿದವು. ಭೂಲಕ್ಷಣಗಳು ಮತ್ತು ಹಿಂಸೆಯ ಕುಖ್ಯಾತಿಯ ಕಾರಣ ಈ ಸೀಮೆಗೆ ಕೈಗಾರಿಕೆಗಳು ಕಾಲಿಡಲಿಲ್ಲ. ಚಂಬಲ್ ನದಿಯ ನೀರು ಇಂದಿಗೂ ಸ್ಫಟಿಕ ಶುದ್ಧವಾಗಿಯೇ ಉಳಿದಿದೆ.

ದಟ್ಟದಾರಿದ್ರ್ಯ, ಹೆಪ್ಪುಗಟ್ಟಿರುವ ಜಾತಿಪದ್ಧತಿಯ ಕ್ರೌರ್ಯ ಉತ್ತರಪ್ರದೇಶ-ಮಧ್ಯಪ್ರದೇಶ-ರಾಜಸ್ತಾನದ ಈ ಸಂಗಮ ಸೀಮೆಯ ಬಹುಜನರಾದ ದಲಿತರು ಹಿಂದುಳಿದವರು ಹಾಗೂ ಬುಡಕಟ್ಟು ಜನರನ್ನು ಇಂದಿಗೂ ತುಳಿದಿಟ್ಟಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ಸೀಮೆಗಳು ಸೇರಿ ಬುಂದೇಲಖಂಡ ಎಂದು ಎರಡು ರಾಜ್ಯಗಳ ಈ ಪ್ರದೇಶವನ್ನು ಕತ್ತಲ ಖಂಡ ಎನ್ನುವುದುಂಟು. ಅನಕ್ಷರತೆ, ಬಂಜರು, ಬಡತನ, ಬರಗಾಲ, ಬವಣೆಗಳೇ ಹಿಂಡಿರುವ ಖಂಡವಿದು. ಉಪ್ಪು-ರೊಟ್ಟಿ, ಹುಲ್ಲುಬೀಜಗಳನ್ನು ಬೀಸಿದ ಹಿಟ್ಟಿನ ರೊಟ್ಟಿಯನ್ನು ತಿಂದು ಜೀವ ಹಿಡಿದು ಸುದ್ದಿಯಾದವರು ಇಲ್ಲಿನ ಜನ. ಬೆಂಬಿಡದ ಬರಗಾಲ ಸಾವಿರಾರು ಸಣ್ಣ ಹಿಡುವಳಿದಾರರ ಪ್ರಾಣಬಲಿ ಪಡೆದ ಪ್ರದೇಶ. ಹಸಿದ ಮಕ್ಕಳ ಸಂಕಟ ನೋಡಲಾಗದೆ ರಕ್ತ ಮಾರಿ ಹೊಟ್ಟೆ ಹೊರೆದ ಪ್ರಕರಣಗಳು ಇಲ್ಲಿಂದ ವರದಿಯಾಗಿರುವುದು ಉಂಟು.

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು “ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

ಅವಧಿ, ಬುಂದೇಲಿ, ಭೋಜ್ಪುರಿ ಹಾಗೂ ಬಜ್ಜಿಕಾ ಎಂಬ ನಾಲ್ಕು ಪ್ರಾದೇಶಿಕ ನುಡಿಗಟ್ಟುಗಳಲ್ಲಿ ಹೊರಬರುವ ಈ ವಾರಪತ್ರಿಕೆಯು ದೇಶವಿದೇಶಗಳ ಮಾಧ್ಯಮಗಳ ಗಮನ ಸೆಳೆದಿದೆ. ಪತ್ರಕರ್ತೆಯರಿಗೆಂದು ಮೀಸಲಾದ ಪ್ರತಿಷ್ಠಿತ ಚಮೇಲಿ ದೇವಿ ಜೈನ್ ಪ್ರಶಸ್ತಿ, ಯುನೆಸ್ಕೋದ ಕಿಂಗ್ ಸೆಜೋಂಗ್ ಸಾಕ್ಷರತೆ ಬಹುಮಾನ, ಲಾಡ್ಲಿ ಮೀಡಿಯಾ ಪ್ರಶಸ್ತಿ, ಟೈಮ್ಸ್ ನೌ ಸುದ್ದಿವಾಹಿನಿಯ ಅಮೇಝಿಂಗ್ ಇಂಡಿಯನ್ ಪ್ರಶಸ್ತಿ, ಕೈಫಿ ಅಜ್ಮಿ ಪ್ರಶಸ್ತಿ, ಬೆಂಗಳೂರಿನ ಸ್ಫೂರ್ತಿಧಾಮ ಟ್ರಸ್ಟ್‌ನ ಬೋಧಿವೃಕ್ಷ ಪ್ರಶಸ್ತಿಗಳು ಈ ಸಾಹಸಕ್ಕೆ ಸಂದಿವೆ.

ಒಂದು ಕಾಲಕ್ಕೆ ಕಂಪ್ಯೂಟರನ್ನು ಮುಟ್ಟುವುದಿರಲಿ, ನೋಡುವುದೂ ದುಸ್ಸಾಧ್ಯವಿದ್ದ ಹಿನ್ನೆಲೆಯಿಂದ ಬಂದ ಬಡ ಯುವತಿಯರ ಆತ್ಮವಿಶ್ವಾಸ ಕುದುರಿದೆ. ಸಮಾಜ, ಸರ್ಕಾರ, ಸರೀಕ ಪತ್ರಕರ್ತರು ಗುರುತಿಸಿ ನಡೆಸಿಕೊಳ್ಳುವ ಪರಿ ಹೊಸ ಹುಮ್ಮಸ್ಸು ನೀಡಿದೆ. ಹೆಸರಿಗಂಟಿಕೊಂಡು ಬಂದ ತಳಸಮುದಾಯದ ಅಡ್ಡಹೆಸರುಗಳನ್ನು ಈ ಯುವತಿಯರು ಕಿತ್ತೆಸೆದಿದ್ದಾರೆ.

ದೊಡ್ಡ ಪತ್ರಿಕೆಗಳು ದೊಡ್ಡ ಪೇಟೆ ಪಟ್ಟಣಗಳ ಸುದ್ದಿ ಪ್ರಕಟಿಸುತ್ತವೆ. ಅವುಗಳ ಸಂಪಾದಕೀಯ ಸಿಬ್ಬಂದಿ ವಿಶ್ವವಿದ್ಯಾಲಯ ಶಿಕ್ಷಣ ಉಳ್ಳವರು, ಇಂಗ್ಲಿಷ್ ಬಲ್ಲವರು. ಬುಂದೇಲಖಂಡದ ಈ ಹಳ್ಳಿಗಾಡಿನ ಜನರ ಪಾಲಿಗೆ ಇಂಗ್ಲಿಷ್ ಮಾತ್ರವಲ್ಲ, ಹಿಂದಿ ಕೂಡ ಕುಲೀನ ಭಾಷೆ. ದಲಿತ ಮಹಿಳೆಯರು ದುಪ್ಪಟ್ಟು ಶೋಷಣೆ ಎದುರಿಸಿದವರು. ಬೇರುಮಟ್ಟದ ಸ್ಥಳೀಯ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲವರು ಎಂಬುದು ’ಲೆಹರಿಯಾ’ ಹಿಂದಿನ ಆಲೋಚನೆ.

ಕ್ಷೇತ್ರಕ್ಕೆ ತೆರಳಿ ಸುದ್ದಿ ಸಂಗ್ರಹಿಸುವವರು, ಬರೆಯುವವರು, ಪರಿಷ್ಕರಿಸಿ ತಲೆಬರೆಹ ನೀಡುವವರು, ಪತ್ರಿಕೆಯ ವಿನ್ಯಾಸ ಮಾಡುವವರು, ಮುದ್ರಣ ಮಾಡಿಸಿ ತರುವವರು, ಹಳ್ಳಿಗಳಿಗೆ ಹಂಚುವವರು ಎಲ್ಲರೂ ಹೆಣ್ಣುಮಕ್ಕಳೇ. ಒಂಟಿಯಾಗಿ ಹಳ್ಳಿ ಹಳ್ಳಿ ಸುತ್ತಿ ಸುದ್ದಿ ಹೆಕ್ಕುತ್ತಾರೆ. ನಕಾಶೆಯಲ್ಲೇ ಇಲ್ಲದ, ನೀರು ದೀಪಗಳಿರದ, ಅಂಚೆಯೂ ತಲುಪದ ಕೊಂಪೆಗಳನ್ನೂ ಬಿಟ್ಟಿಲ್ಲ ಇವರು. ದೊಡ್ಡ ಪತ್ರಿಕೆಗಳ ವರದಿಗಾರರು ಅನುಭವಿಸುವ ಸೌಲಭ್ಯಗಳು ಇವರಿಗಿಲ್ಲ. ಹಸಿವಾದರೆ ಮನೆಯಿಂದ ಒಯ್ದ ಬುತ್ತಿಯೇ ಗತಿ. ಬಸ್ಸು, ಸೈಕಲ್ಲು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆ ಮಾಮೂಲು. ಪುಂಡು ಪೋಕರಿಗಳನ್ನೂ ಪುರುಷಪ್ರಾಧಾನ್ಯ ವ್ಯವಸ್ಥೆಯ ಕಿರುಕುಳಗಳನ್ನೂ ನಿತ್ಯ ನುಂಗಿ ನಡೆಯುತ್ತಾರೆ.

ಬುಂದೇಲ್ ಖಂಡದ ಚಿತ್ರಕೂಟ, ಫೈಝಾಬಾದ್, ಝಾನ್ಸಿ, ಲಲಿತಪುರ್, ಅಂಬೇಡ್ಕರ್ ನಗರ್, ಬಾಂದಾ ಜಿಲ್ಲೆಗಳಲ್ಲಿ ಲೆಹರಿಯಾ ಹೆಜ್ಜೆ ಗುರುತುಗಳು ಪಡಿಮೂಡಿವೆ. ಆರುನೂರು ಕುಗ್ರಾಮಗಳ ಬದುಕಿನ ಹಾಸು ಹೊಕ್ಕಾಗಿದೆ ಖಬರ್ ಲೆಹರಿಯಾ. ಈ ಪೈಕಿ ಬಹುತೇಕ ಹಳ್ಳಿಗಳು ಮುಖ್ಯವಾಹಿನಿಯ ಸುದ್ದಿಪತ್ರಿಕೆಗಳನ್ನು ಕಂಡಿಲ್ಲ. ಹಳ್ಳಿ ಹಳ್ಳಿಗಳ ಕುಡಿವ ನೀರು, ರಸ್ತೆ, ಶಾಲೆ, ಆಸ್ಪತ್ರೆ, ಮನರೇಗ ಯೋಜನೆಯಲ್ಲಿ ಕೂಲಿ ನಿರಾಕರಿಸಿ ಬಡಪಾಯಿಗಳ ವಂಚಿಸುವ ಪಂಚಾಯತಿ ಪ್ರಧಾನ, ರೇಷನ್ ಕಾರ್ಡ್ ಸಮಸ್ಯೆ, ಕಳವು, ಕೊಲೆ, ದಬ್ಬಾಳಿಕೆ, ಅಧಿಕಾರಿಗಳ ನಿರ್ಲಕ್ಷ್ಯದ ವ್ಯಥೆಯ ಕತೆಗಳ ಕುರಿತು ದೊಡ್ಡ ಪತ್ರಿಕೆಗಳಿಗೆ ರುಚಿಯಿಲ್ಲ.

ಡಿಜಿಟಲ್ ದಾರಿ ಹಿಡಿದ ನಂತರ ಪತ್ರಿಕೆಯನ್ನು ಓದುವ ಹೆಣ್ಣುಮಕ್ಕಳ ಪ್ರಮಾಣ ಭಾರೀ ಜಿಗಿತ ಕಂಡಿದೆ. ಸ್ಮಾರ್ಟ್ ಫೋನ್ ಮತ್ತು ಸೆಲ್ಫಿ ಸ್ಟಿಕ್ ಬಳಸಿ ಫೋಟೋ-ವಿಡಿಯೋ ತೆಗೆದು ವರದಿ ಸಂದರ್ಶನಗಳನ್ನು ವಾಟ್ಸಾಪ್‌ನಲ್ಲಿ ಕಚೇರಿಗೆ ರವಾನಿಸುತ್ತಿದ್ದಾರೆ ವರದಿಗಾರ್ತಿಯರು. ಪತ್ರಿಕೆಯಲ್ಲಿ ಅಚ್ಚಾಗುವ ವರದಿಗಳು ದೃಶ್ಯರೂಪದಲ್ಲಿ ಸಾಮಾಜಿಕ ಅಂತರ್ಜಾಲ ತಾಣಗಳ ಮೂಲಕ ಲಕ್ಷಾಂತರ ಮಂದಿಯನ್ನು ತಲುಪುತ್ತಿವೆ.

ಪತ್ರಿಕೆಯ ಡಿಜಿಟಲ್ ವ್ಯವಹಾರಗಳನ್ನು ಮುದ್ರಣದಿಂದ ಪ್ರತ್ಯೇಕಿಸಿ ಚಂಬಲ್ ಮೀಡಿಯಾ ಎಂಬ ಹೊಸ ಕಂಪನಿಯ ಕೈಗೆ ಒಪ್ಪಿಸಲಾಗಿದೆ. ಗ್ರಾಮೀಣ ಡಿಜಿಟಲ್ ಮಾಧ್ಯಮದ ಹೂರಣವನ್ನು ರೂಪಿಸಿ ಪ್ರಸ್ತುತಪಡಿಸುವುದು ಈ ಕಂಪನಿಯ ಕಾರ್ಯಸೂಚಿ. ಗ್ರಾಮೀಣ ಪ್ರದೇಶಗಳಲ್ಲೂ ಈಗ ಅಂತರ್ಜಾಲ ಸೌಲಭ್ಯ ಧಾರಾಳ. ಆದರೆ ಆ ಜನರಿಗೆ ಗುಣಮಟ್ಟದ ಸ್ವತಂತ್ರ ಪ್ರಗತಿಪರ ಡಿಜಿಟಲ್ ಮೀಡಿಯಾ ಲಭ್ಯವಿಲ್ಲ. ಅವರ ಸುದ್ದಿಯನ್ನು ಅವರದೇ ಭಾಷೆಯಲ್ಲಿ ಹೇಳುವ ಮತ್ತೊಂದು ಪ್ರಯತ್ನ ಈವರೆಗೆ ಆಗಿಲ್ಲ, ಸನಿಹ ಭವಿಷ್ಯದಲ್ಲಿ ನಡೆಯುವುದೂ ಇಲ್ಲ. ದಲಿತ, ಆದಿವಾಸಿ ಹಾಗೂ ಮುಸ್ಲಿಮ್ ಹೆಣ್ಣುಮಕ್ಕಳೇ ಚಂಬಲ್ ಮೀಡಿಯಾದಲ್ಲೂ ಸಕ್ರಿಯರಾಗಿರುತ್ತಾರೆ. ಮುಂಬರುವ ಮೂರು ವರ್ಷಗಳಲ್ಲಿ ಹಿಂದೀ ರಾಜ್ಯಗಳ ಎಂಬತ್ತು ಜಿಲ್ಲೆಗಳಲ್ಲಿ ನೆಲೆಯೂರುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.

ಚಂಬಲ್ ಹೆಣ್ಣುಮಕ್ಕಳ ಈ ವಿರಳ ಪ್ರಯೋಗ ದೇಶದ ಇತರೆ ಸೀಮೆಗಳಲ್ಲೂ ಕುಡಿಯೊಡೆದು ಹಬ್ಬಬೇಕಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...