Homeಚಳವಳಿಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

- Advertisement -
- Advertisement -

ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಅವಿಶ್ವಾಸ ನಿರ್ಣಯವನ್ನು ಗೆದ್ದ ನಂತರ, ಆಡಳಿತ ಪಕ್ಷದ ಶಾಸಕರು, ಜೆಜೆಪಿ ಮತ್ತು ಸ್ವತಂತ್ರ ಶಾಸಕರು ಪ್ರತಿಭಟನಾ ನಿರತ ರೈತರ ಕೋಪವನ್ನು ಎದುರಿಸುತ್ತಿದ್ದಾರೆ. ಗುರುವಾರ ಒಬ್ಬ ಶಾಸಕರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲಾಗಿದೆ.

106 ದಿನಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಸಂಯುಕ್ತ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಅವಿಶ್ವಾಸ ಮತ ನೀಡಿ, ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಕರೆ ನೀಡಿತ್ತು.

ಆದರೆ, ನಿನ್ನೆ (ಮಾರ್ಚ್ 10) ಹರಿಯಾಣ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಇದರಿಂದ ತೀವ್ರ ಹೋರಾಟಕ್ಕೆ ಸಜ್ಜಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

ಸ್ಥಳೀಯ ಶಾಸಕ ಅಸೀಮ್ ಗೋಯೆಲ್ ಅವರ ಅಂಬಾಲಾ ನಿವಾಸದ ಹೊರಗೆ ರೈತರು ಇಂದು ಪ್ರತಿಭಟನೆ ನಡೆಸಿದರು. ನಿನ್ನೆ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ, ಜನವರಿ 26 ರ ಕೆಂಪು ಕೋಟೆಯ ಹಿಂಸಾಚಾರವನ್ನು ಅವರು ಉಲ್ಲೇಖಿಸಿ, ಪ್ರತಿಭಟನಾ ನಿರತ ರೈತರು “ರಾಷ್ಟ್ರ ವಿರೋಧಿ” ಅಂಶಗಳನ್ನು ಸೂಚಿಸುತ್ತಾರೆ ಎಂದಿದ್ದರು. ನಂತರ, “ನಾನು ರೈತರನ್ನು ಹಾಗೆ ಕರೆಯಲಿಲ್ಲ. ನವದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿವಾದಾತ್ಮಕ ಘೋಷಣೆಗಳನ್ನು ಉಲ್ಲೇಖಿಸಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

ಸರ್ಕಾರಕ್ಕೆ ಮತ ಚಲಾಯಿಸಿದ ಹರಿಯಾಣ ಲೋಖಿತ್ ಪಕ್ಷದ ಮುಖ್ಯಸ್ಥರಾಗಿರುವ ಸ್ವತಂತ್ರ ಶಾಸಕ ಗೋಪಾಲ್ ಗೋಯಲ್ ಕಂದಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆದಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.

ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಇತರ ಸ್ವತಂತ್ರ ಶಾಸಕರು ಮುಖ್ಯಮಂತ್ರಿ ಖಟ್ಟರ್ ಅವರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಉಲ್ಲೇಖಿಸಿರುವ ಎಸ್‌ಕೆಎಂ ಮುಖಂಡರು, “ರೈತರಿಗೆ ಮತ್ತು ಅವರು ತಮಗೆ ಮಾಡಿಕೊಂಡಿರುವ ದೊಡ್ಡ ದ್ರೋಹ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸಂಯುಕ್ತ ಕಿಸಾನ್ ಮೋರ್ಚಾ ತಮ್ಮ ಪತ್ರಿಕಾ ಹೇಳಿಕೆಯಲ್ಲಿ, ’ತಮ್ಮನ್ನು ಕೃಷಿ ಸಮುದಾಯಕ್ಕೆ ಸೇರಿದ ಪಕ್ಷ ಎಂದು ಬಣ್ಣಿಸುವ ಜೆಜೆಪಿಯ ರೈತ ವಿರೋಧಿ ಮುಖ ಸಂಪೂರ್ಣವಾಗಿ ಬಹಿರಂಗವಾಗಿದೆ. ಈಗ ನಡೆಯುತ್ತಿರುವ ಚಳುವಳಿಯಿಂದಾಗಿ ಈ ಶಾಸಕರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ’ ಎಂದು ಹೇಳಿದೆ.

’ಈ ಶಾಸಕರ ರೈತ ವಿರೋಧಿ ಕೆಲಸಗಳ ವಿರುದ್ಧ ರೈತರು ವಿರೋಧ ಮತ್ತು ಪ್ರತಿರೋಧದ ಬೀಜಗಳನ್ನು ಬಿತ್ತಿದ್ದಾರೆ ಮತ್ತು ಶೀಘ್ರದಲ್ಲೇ ಕೊಯ್ಲು ಮಾಡಲಾಗುವುದು ಎಂದಿದೆ. ಹರಿಯಾಣದ ರೈತರು ಎಲ್ಲಾ ಬಿಜೆಪಿ ಮತ್ತು ಜೆಜೆಪಿ ಮುಖಂಡರನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ಮೂಲಕ ಈ ಪ್ರತಿಭಟನೆಯನ್ನು ತೀವ್ರಗೊಳಿಸಲು ಉದ್ದೇಶಿಸಿದ್ದಾರೆ’ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

10 ಶಾಸಕರಿರುವ ಜೆಜೆಪಿಯನ್ನು ಹರಿಯಾಣದಲ್ಲಿ ಕೃಷಿ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಕ್ಷವಾಗಿ ನೋಡಲಾಗುತ್ತದೆ. ಇದು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರ ಮೊಮ್ಮಗ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಈ ಶಾಸಕರನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕು, ಅವರಿಗೆ ಕಪ್ಪು ಧ್ವಜಗಳನ್ನು ತೋರಿಸಬೇಕು ಮತ್ತು ಸಭೆ ನಡೆಸಲು ಬಿಡಬಾರದು ಎಂದು ರೈತ ಸಂಘವು ಜನರಿಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಕರೆ ನೀಡಿದೆ.

ಹರಿಯಾಣ ವಿಧಾನಸಭೆಯ ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಬಿದ್ದಿವೆ.


ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...