Homeಮುಖಪುಟತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಶಿವರಾತ್ರಿ ಹಬ್ಬದ ಪ್ರಯುಕ್ತ ತಾಜ್‌ಮಹಲ್‌ ಆವರಣದೊಳಗೆ ಶಿವಪೂಜೆ ಮಾಡಲು ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಕಾರ್ಯಕರ್ತರು

- Advertisement -
- Advertisement -

ಶಿವರಾತ್ರಿ ಹಬ್ಬದ ಪ್ರಯುಕ್ತ ತಾಜ್‌ಮಹಲ್‌ ಆವರಣದೊಳಗೆ ಶಿವಪೂಜೆ ಮಾಡಲು ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಐತಿಹಾಸಿಕ ಮತ್ತು ಜಗತ್ ಪ್ರಸಿದ್ಧ ತಾಜ್‌ಮಹಲ್‌ನಲ್ಲಿ ನಿಯೋಜಿಸಲಾಗಿರುವ ಕೇಂದ್ರ ಭದ್ರತಾ ಪಡೆ ಸಿಬ್ಬಂದಿಯು ಮೂವರನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್‌ಡಿಟಿವಿ ವರದಿ ಮಾಡಿದೆ.

“ಮಹಿಳೆಯೂ ಸೇರಿದಂತೆ ಹಿಂದೂ ಮಹಾಸಭಾದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಾಜ್‌ಗಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉಮೇಶ್ ಚಂದ್ರ ತ್ರಿಪಾಠಿ ಹೇಳಿದ್ದಾರೆ.

ಹಿಂದೂ ಮಹಾಸಭಾದ ಪ್ರಾಂತೀಯ ಅಧ್ಯಕ್ಷೆ ಮೀನಾ ದಿವಾಕರ್ ಎಂಬುವವರು ತಾಜ್‌ಮಹಲ್‌ ಆವರಣದಲ್ಲಿರುವ ಮುಖ್ಯ ತೊಟ್ಟಿಯ ಬಳಿ ಇಬ್ಬರು ವ್ಯಕ್ತಿಗಳೊಂದಿಗೆ ಪೂಜೆ ಸಲ್ಲಿಸಲು ಮುಂದಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ ನಿರ್ಮಾಣವಾಗಿರುವ ಸ್ಮಾರಕವನ್ನು ಭಾರತದ ಪುರಾತತ್ವ ಇಲಾಖೆಯು ಅಡಿಯಲ್ಲಿ ಸಂರಕ್ಷಿಸಲಾಗಿದೆ.

ಇದನ್ನೂ ಓದಿ: ತಾಜ್‌ ಮಹಲ್‌ ಆವರಣದಲ್ಲಿ ಕೇಸರಿ ಬಾವುಟ ಹಾರಿಸಿದ ಹಿಂದೂ ಜಾಗರಣ್ ಮಂಚ್ ಕಾರ್ಯಕರ್ತರು: ಬಂಧನ

ಈ ಹಿಂದೆಯೂ, ತಾಜ್‌ ಮಹಲ್ ಆವರಣದೊಳಗೆ ಭಗವಾಧ್ವಜ ಹಾರಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇವರ ಕೃತ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಜ್‌ ಮಹಲ್‌ ಆವರಣದಲ್ಲಿ ಧ್ವಜ ಹಾರಿಸಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿತ್ತು.‌ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದರು.

ಕೇಂದ್ರ ಭದ್ರತಾ ದಳದ ಮುಖ್ಯಸ್ಥ ರಾಹುಲ್‌ ಯಾದವ್‌ ಈ ಕುರಿತು ಪ್ರತಿಕ್ರಿಯಿಸಿ, “ನಾಲ್ಕು ಜನ ಆರೋಪಿಗಳು ಯೂಟ್ಯೂಬ್‌ನಲ್ಲಿ ತಮ್ಮ ವೀಡಿಯೋ ಹೆಚ್ಚು ವೀಕ್ಷಣೆಯಾಗಲಿ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ. ತಾಜ್‌ಮಹಲ್‌ ಪ್ರವೇಶ ದ್ವಾರದಲ್ಲಿ ಲೋಹ ಪತ್ತೆಹಚ್ಚುವ ವ್ಯವಸ್ಥೆಯಿದೆ, ಆದರೆ ಸಣ್ಣ ಬಟ್ಟೆ ತುಂಡುಗಳು ಇದರಲ್ಲಿ ದಾಖಲಾಗುವುದಿಲ್ಲ. ಇನ್ನು ಸೆಲ್ಫೀ ಸ್ಟಿಕ್‌ ಗಳನ್ನು ಆವರಣಕ್ಕೆ ತರಲು ಅನುಮತಿಯಿದೆ. ಅವರು ಸೆಲ್ಫೀ ಸ್ಟಿಕ್‌ ಬಳಸಿ ಬಾವುಟ ಹಾರಿಸಿದ್ದಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಬಾಕ್ಸಿಂಗ್ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಕೋಚ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...