Homeಮುಖಪುಟಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು 'ಲೈಕ್' ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು ‘ಲೈಕ್’ ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

- Advertisement -
- Advertisement -

ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಟ್ವೀಟ್ ಅನ್ನು ‘ಲೈಕ್’ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಆರಂಭವಾಗಿದೆ. ಇದು ಮುಂದಿನ ತಿಂಗಳು ಅಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗದ ನಿಷ್ಪಕ್ಷಪಾತ ನಡವಳಿಕೆ ಕುರಿತು ಪ್ರಶ್ನೆಗಳನ್ನು ಎತ್ತಿದೆ.

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಬಂಗಾಳ ಭಾಷೆಯಲ್ಲಿ ಹೊಸ ಚಾನೆಲ್ ಆರಂಭಿಸುತ್ತಿರುವುದಾಗಿ ಟ್ವೀಟ್ ಮಾಡಿದೆ. ಅದನ್ನು ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ‘ಲೈಕ್’ ಮಾಡಿರುವ ಸ್ಕ್ರೀನ್‌ ಶಾಟ್‌ ಅನ್ನು ಹಂಚಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ, “ಇದು ನ್ಯಾಯಸಮ್ಮತ, ಪಾರದರ್ಶಕ, ವಸ್ತುನಿಷ್ಟ ಚುನಾವಣಾ ಯಂತ್ರಾಂಗವೇ” ಎಂದು ಪ್ರಶ್ನಿಸಿದ್ದಾರೆ.

ಪುದುಚೇರಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಸಾಕೇತ್ ಗೋಖಲೆ ದೂರು ಸಲ್ಲಿಸಿದ್ದರು. ಆದರೆ ಅದನ್ನು ದಾಖಲಿಸಿಲು ಪುದುಚೇರಿ ಚುನಾವಣಾ ಆಯೋಗ ನಿರಾಕರಿಸಿತ್ತು. ಈ ಕುರಿತು ಆಕ್ರೋಶಿತಗೊಂಡಿದ್ದ ಗೋಖಲೆ ಇಲ್ಲಿನ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ನನ್ನ ದೂರು ದಾಖಲಿಸಿಲ್ಲ ಮತ್ತು ಅರ್ನಾಬ್ ಗೋಸ್ವಾಮಿ ಟ್ವೀಟ್‌ ಅನ್ನು ಸಮರ್ಥಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ಅದು ಅವರ ವಯಕ್ತಿಕ ಖಾತೆಯಲ್ಲ. ಬದಲಿಗೆ ಚುನಾವಣಾ ಆಯೋಗದ ಅಧಿಕೃತ ಅಕೌಂಟ್‌ನಲ್ಲಿ ಬಿಜೆಪಿ ಪರವಿರುವ ಖಾಸಗಿ ಚಾನೆಲ್‌ ಒಂದನ್ನು ಉತ್ತೇಜಿಸಲಾಗುತ್ತಿದೆ. ಕೆಲವೇ ತಿಂಗಳಲ್ಲಿ ಅಲ್ಲಿ ಚುನಾವಣೆ ನಡೆಯುತ್ತಿದೆ. ಇದು ಹಲವು ಪ್ರಶ್ನೆಗಳನ್ನು ಎತ್ತಲಿದ್ದು ಇದರ ಕುರಿತು ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕೆಂದು ಗೋಖಲೆ ಒತ್ತಾಯಿಸಿದ್ದಾರೆ.

ಅಲ್ಲದೆ ಜನವರಿ 26ರಂದು ರೈತರು ಭಾರತೀಯ ಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಮಾಡಿದ್ದ ಟ್ವೀಟ್ ಅನ್ನು ಸಹ ಪುದುಚೇರಿ ಚುನಾವಣಾ ಆಯೋಗ ಲೈಕ್ ಮಾಡಿದೆ. “ಇದು ಅತ್ಯಂತ ಕೊಳಕುತನ. ಈಗ ಸಂಘಪರಿವಾರದ ಮನಸ್ಥಿತಿಯಲ್ಲಿದೆ. ಇಂತಹ ಆಯೋಗದಿಂದ ಪಾರದರ್ಶನ, ನ್ಯಾಯಸಮ್ಮತ, ನಿಷ್ಪಷಪಾತ ಚುನಾವಣೆಯನ್ನು ಬಯಸುವುದು ಹೇಗೆ? ಇದರ ಬಗ್ಗೆ ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಲೂ ಪಾಂಡಿಸಿಚೇರಿಯ ಮುಖ್ಯ ಚುನಾವಣಾ ಅದಿಕಾರಿಗ ಟ್ವಿಟರ್ ಟೈಮ್‌ಲೈನ್‌ನಲ್ಲಿ ಮೊದಲ ಟ್ವೀಟ್‌ಗೆ ಲೈಕ್ ಒತ್ತಿರುವುದು ಹಾಗೇ ಇದೆ. ಆದರೆ ಎರಡನೇ ಟ್ವೀಟ್‌ಗೆ ಮಾಡಿದ್ದ ಲೈಕ್ ಅನ್ನು ಅನ್‌ಲೈಕ್ ಮಾಡಲಾಗಿದೆ ಎಂದು ಜನತಾಕರಿಪೋರ್ಟರ್ ವರದಿ ಮಾಡಿದೆ. ಗೋಖಲೆಯವರ ಪ್ರಶ್ನೆಗಳಗೆ ಭಾರತೀಯ ಚುನಾವಣಾ ಆಯೋಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಅಧಿಕಾರ ಹಿಡಿಯಲು ಸ್ವಾಯುತ್ತ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ ಬದಲಿಸಲು ಹೊರಟ ಕೇಂದ್ರ

ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...