Homeಕರೋನಾ ತಲ್ಲಣಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ700 ಮಂದಿ ಭಾಗಿ, ಪ್ರಕರಣ ದಾಖಲು

ಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ700 ಮಂದಿ ಭಾಗಿ, ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣದಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ನಿರ್ಬಂಧಗಳ ಹೊರತಾಗಿಯೂ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಸುಮಾರು 700 ಮಂದಿ ಭಾಗವಹಿಸಿದ್ದಾರೆ.

ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಮದುವೆ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಜ್ಯದ ಮಾರ್ಗಸೂಚಿಗಳ ಪ್ರಕಾರ, 50 ಜನರಿಗೆ ಮಾತ್ರ ಮದುವೆಗೆ ಹಾಜರಾಗಲು ಅವಕಾಶವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 10 ರಂದು ಈ ಕಾರ್ಯಕ್ರಮ ನಡೆದಿದೆ ಎಂದು ಕಲ್ಯಾಣ್ ಡೊಂಬಿವ್ಲಿ ಮಹಾನಗರ ಪಾಲಿಕೆ (ಕೆಡಿಎಂಸಿ) ಗುರುವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಆತಂಕ: ಒಂದು ವಾರ ನಾಗ್ಪುರ ಲಾಕ್‌ಡೌನ್

“ಕಲ್ಯಾಣ್ (ಪೂರ್ವ) ದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಹಲವಾರು ಜನರು ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದರು. ಸಿವಿಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ, ಮದುವೆಯಲ್ಲಿ ಸುಮಾರು 700 ಜನರನ್ನು ನೋಡಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ.

ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದವರು ಕೊರೊನಾ ನಿಯಮಗಳನ್ನು ಪಾಲಿಸಿರಲಿಲ್ಲ. ಮಾಸ್ಕ್, ದೈಹಿಕ ಅಂತರಗಳನ್ನು, ಸುರಕ್ಷತಾ ನಿಯಮಾವಳಿಗಳನ್ನು ಅನುಸರಿಸಿಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ), 269 ಮತ್ತು 270 (ಯಾವುದೇ ರೋಗದ ಸೋಂಕನ್ನು ಜೀವಕ್ಕೆ ಅಪಾಯಕಾರಿಯಾಗಿ ಹರಡುವ ಸಾಧ್ಯತೆ ಬಗ್ಗೆ ಇರುವ ನಿರ್ಲಕ್ಷ್ಯ ಮತ್ತು ಮಾರಕ ಕೃತ್ಯ), ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಕಾರ್ಯಕ್ರಮದ ಸಂಘಟಕರಾದ ರಾಜೇಶ್ ಮಾತ್ರೆ ಮತ್ತು ಮಹೇಶ್ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಗುರುವಾರ, ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ನಾಗ್ಪುರವನ್ನು ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಸರ್ಕಾರ ಆದೇಶಿಸಿದೆ. ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಕಾರ್ಯನಿರ್ವಹಿಸಲಿವೆ ಎಂದಿದೆ.


ಇದನ್ನೂ ಓದಿ: UAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...