Homeಕರ್ನಾಟಕಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಮಾಫಿಯಾ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

’ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು’ ಎಂದಿದ್ದಾರೆ.

ವಿಧಾನಸಭೆಯಲ್ಲಿ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದ ಸಚಿವ ಆರ್‌.ಅಶೋಕ್, ‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ. ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಮಾಫಿಯ ತಡೆಯಲಾಗದು ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ ಎಂದಿದ್ದಾರೆ.

’ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ..? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?’ ಎಂದು ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...