Homeಮುಖಪುಟಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ - ಬಿಜೆಪಿಯಿಂದ ದೂರವಿರಿ ಎಂದು ವ್ಯಂಗ್ಯವಾಡಲಾಗಿದೆ.

- Advertisement -
- Advertisement -

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ರೈತ ಹೋರಾಟಗಾರರು ನೀಡಿರುವ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ತಾರಕಕ್ಕೇರುತ್ತಿರುವ ಸಮಯದಲ್ಲಿ ಈ ಅಭಿಯಾನ ಹೆಚ್ಚು ಸದ್ದು ಮಾಡುತ್ತಿದ್ದು, ಮದುವೆ ಮನೆಗಳಲ್ಲಿಯೂ ಬಿಜೆಪಿಗೆ ಮತ ನೀಡಬೇಡಿ ಎಂಬ ಕರೆ ವೈರಲ್ ಆಗುತ್ತಿದೆ.

No Vote To BJP ಎಂಬ ಹೆಸರಿನಲ್ಲಿ ಟ್ವಿಟರ್ ಖಾತೆಯೊಂದನ್ನು ತೆರಯಲಾಗಿದ್ದು ಬಿಜೆಪಿ ವಿರುದ್ಧ ನಿರಂತರವಾಗಿ ಪ್ರಚಾರ ನಡೆಸುತ್ತಿದೆ. ಅದು ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳು ಸೇರಿ ವದು ವರದು ಬಿಜೆಪಿಗೆ ಮತ ನೀಡಬೇಡಿ ಎಂದು ಫ್ಲಕಾರ್ಡುಗಳನ್ನು ಹಿಡಿದಿರುವ ಫೋಟೊವೊಂದನ್ನು ಪ್ರಕಟಿಸಿದೆ.

ಇನ್ನು ಟ್ವಿಟರ್‌ನಲ್ಲಿ ಕಳೆದ ಮೂರು ದಿನಗಳಿಂದಲೂ NoVoteToBJP ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ದೆಹಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತಾ ಕಿಸಾನ್ ಮೋರ್ಚಾದ ಮುಖವಾಣಿಯಾದ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ NoVoteToBJP ಘೋಷಣೆಯಡಿ ನಮ್ಮ ರೈತನಾಯಕರು ಪ್ರಚಾರ ಮಾಡಲು ನಿರ್ಧರಿಸಿದ್ದಾರೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದ ಬಿಜೆಪಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತೇವೆ” ಎಂದಿದೆ. ಅಲ್ಲದು ಅದು ಎರಡು ನಿಮಿಷದ ವಿಡಿಯೋವೊಂದನ್ನು ಸಹ ಟ್ವೀಟ್ ಮಾಡಿದೆ.

ನೀವು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ನಕರಾತ್ಮಕತೆ, ಔದಾರ್ಯದ ಕೊರತೆ ಮತ್ತು ಸತ್ಯ ನೋಡಲು ಇಷ್ಟಪಡದಿರುವ ಸೋಂಕು ತಗುಲಿರುವ ಜನರಿಂದ ದೂರಿವಿರಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಲಾಗಿದೆ.

ಇನ್ನು ನಿನ್ನೆ ಕೋಲ್ಕತ್ತದಲ್ಲಿ ಬಿಜೆಪಿಗೆ ಮತ ನೀಡಬೇಡಿ ಹೆಸರಿನಲ್ಲಿ ಬೃಹತ್ ರ್ಯಾಲಿ ನಡೆಸಲಾಗಿದೆ. “ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಘೋಷಿಸಲಾಗಿದೆ. ಇಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕೋಲ್ಕತ್ತಾದಲ್ಲಿ ಬಿಜೆಪಿಗೆ ಮತ ನೀಡಬೇಡಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

“ಪಟ್ರೋಲ್ ಬೆಲೆ 100 ರೂ ಆಗಿದೆ. ಸಿಲಿಂಡರ್ ಬೆಲೆ 1000 ರೂ ಆಗಿದೆ. ರಾಷ್ಟ್ರೀಯ ಸಂಪತ್ತುಗಳನ್ನು ಮಾರುವುದರಲ್ಲಿ ಸರ್ಕಾರ ನಿರತವಾಗಿದೆ. ಇಡೀ ವಿಶ್ವವೇ ಭಾರತವನ್ನು ಚುನಾವಣಾ ನಿರಂಕುಶಾಧಿಕಾರತ್ವದತ್ತ ಹೊರಳುತ್ತಿದೆ ಎಂದು ಹೇಳುತ್ತಿದೆ. ಈ ದುರಂತವನ್ನು ತಡೆಯಲು ನಿಮ್ಮ ಮತವನ್ನು ಬಳಸಿ. ಸ್ಪಷ್ಟವಾಗಿ ಮತ್ತು ಜೋರಾಗಿ ಬಿಜೆಪಿಗೆ ಮತವಿಲ್ಲ ಎಂದು ಹೇಳಿ” ಎಂದು ದೀಪಂಕರ್ ಟ್ವೀಟ್ ಮಾಡಿದ್ದಾರೆ.

3 ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ 106 ದಿನಗಳಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಚಳಿ ಮತ್ತು ತೀವ್ರ ಬಿಸಿಲನ್ನು ಅವರು ಎದುರಿಸಿದ್ದಾರೆ. ಹಲವಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಕಾರಣವಾದ ಬಿಜೆಪಿಗೆ ಮತ ಹಾಕಬಾರದು ಎಂದು ಬಿಕೆಯು ಏಕ್ತಾ ಉಗ್ರಾಣ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...