Homeಮುಖಪುಟತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ತಮಿಳುನಾಡು: ಕೊಯಮತ್ತೂರು ದಕ್ಷಿಣದಿಂದ ಕಮಲ್ ಹಾಸನ್, ಕೋಲಥೂರ್‌ನಿಂದ ಸ್ಟಾಲಿನ್ ಸ್ಪರ್ಧೆ

ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ದೀದಿ ವರ್ಸಸ್ ಬಿಜೆಪಿ ಎಂಬ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದರೆ, ತಮಿಳುನಾಡು ರಾಜಕೀಯ ನಾಯಕರ ಜೊತೆಗೆ ಚಿತ್ರನಟ, ನಟಿಯರಿಂದಾಗಿ ಗಮನ ಸೆಳೆಯುತ್ತಿದೆ. ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದಾರೆ.

ಎಐಎಡಿಎಂಕೆ ಮೈತ್ರಿಕೂಟದಲ್ಲಿ ಕೊಯಮತ್ತೂರಿನ ದಕ್ಷಿಣ ಕ್ಷೇತ್ರವನ್ನು ಬಿಜೆಪಿಗೆ ನೀಡಲಾಗಿದೆ. ವನತಿ ಶ್ರೀನಿವಾಸನ್ ಬಿಜೆಪಿ ಪರವಾಗಿ ಇಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಅಂತೆಯೇ ಡಿಎಂಕೆ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದರ ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ.

ಮಕ್ಕಳ್ ನೀಧಿ ಮಯ್ಯಂ ಪಕ್ಷವನ್ನು ಪ್ರಾರಂಭಿಸಿದ ನಂತರ ಪಕ್ಷವು ಕಳೆದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿತ್ತು. ಯಾವುದೇ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಶೇ.4 ಮತಗಳಿಸಿ ಗಮನಸೆಳೆದಿತ್ತು. ಆದರೆ ಆ ಚುನಾವಣೆಯಲ್ಲಿ ಕಮಲ್ ಹಾಸನ್ ಸ್ಪರ್ಧಿಸಿರಲಿಲ್ಲ, ಹಾಗಾಗಿ ಇದು ಕಮಲ್ ಹಾಸನ್ ಎದುರಿಸಬೇಕಾದ ಮೊದಲ ಚುನಾವಣೆಯಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಶುಕ್ರವಾರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಮಲ್ ಹಾಸನ್, ತಾವೂ ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.

ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಜನರಿಗಾಗಿ ಕಮಲ್ ಹಾಸನ್ ಎರಡು ರಾಷ್ಟ್ರೀಯ ಪಕ್ಷಗಳೊಂದಿಗೆ ಘರ್ಷಣೆ ನಡೆಸುತ್ತಿರುವುದು ಭಾರಿ ನಿರೀಕ್ಷೆಗೆ ಕಾರಣವಾಗಿದೆ. ಬಿಜೆಪಿಯ ವನತಿ ಶ್ರೀನಿವಾಸನ್ ಎದುರು ಕಮಲ್ ಹಾಸನ್ ಅಲ್ಲಿ ದೊಡ್ಡ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಕಮಲ್ ಹಾಸನ್ ಪಕ್ಷಕ್ಕೆ ಅಲ್ಲಿ ಉತ್ತಮ ವೋಟ್ ಬ್ಯಾಂಕ್ ಇದೆ ಎನ್ನಲಾಗಿದೆ.

ಇತ್ತ ಏಪ್ರಿಲ್ 6 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ತಮ್ಮ ಕೋಲಥೂರ್ ಕ್ಷೇತ್ರದಿಂದ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಚೆಪಾಕ್ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪ್ರವೇಶಿಸಲಿದ್ದಾರೆ.

ಶುಕ್ರವಾರ ತಮಿಳುನಾಡು ಚುನಾವಣೆಗೆ ಎಲ್ಲಾ 173 ಅಭ್ಯರ್ಥಿಗಳ ಪಟ್ಟಿಯನ್ನು ಸ್ಟಾಲಿನ್ ಬಿಡುಗಡೆ ಮಾಡಿದರು. ಹಿರಿಯರಾದ ದುರೈ ಮುರುಗನ್, ಕೆ.ಎನ್ ನೆಹರು, ಕೆ.ಪೊನ್ಮುಡಿ ಮತ್ತು ಎಮ್ಆರ್‌ಕೆ ಪನ್ನಿರ್‌ಸೆಲ್ವಂ ಸೇರಿದಂತೆ ಹಲವರು ತಮ್ಮ ಟಿಕೆಟ್‌ಗಳನ್ನು ಗಟ್ಟಿ ಮಾಡಿಕೊಂಡಿದ್ದಾರೆ.

ಮಾರ್ಚ್ 15 ರಂದು ನಾಮಪತ್ರವನ್ನು ಸಲ್ಲಿಸಿ ಅಭಿಯಾನದ ಮುಂದಿನ ಹಂತದಲ್ಲಿ ಪ್ರಚಾರ ಕೈಗೊಳ್ಳುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸ್ಟಾಲಿನ್ ಹೇಳಿದ್ದಾರೆ. 2011 ರಿಂದ ಅಧಿಕಾರದಿಂದ ಹೊರಗಿರುವ ಡಿಎಂಕೆ, ಆಡಳಿತಾರೂ AIADMK ಯನ್ನು ಪದಚ್ಯುತಗೊಳಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯುವತ್ತ ದೃಷ್ಟಿ ಹಾಯಿಸುತ್ತಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...