Homeಸಿನಿಮಾಕ್ರೀಡೆವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

ವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

- Advertisement -
| ಅಂತಃಕರಣ |
ಈ ಬಾರಿಯ ಭಾರತದ ವಿಶ್ವಕಪ್ ತಂಡದ ಸುಮಾರು 13 ಆಟಗಾರರು ಎಲ್ಲರೂ ನಿರೀಕ್ಷಿಸಿದವರೇ ಆಗಿದ್ದರು. ಆದರೆ ಉಳಿದ ಇಬ್ಬರ ಆಯ್ಕೆ ಕೆಲವು ಅಭಿಪ್ರಾಯ ಬೇಧಗಳನ್ನು (ಒಪಿನಿಯನ್ ಡಿಫರೆನ್ಸ್) ಹುಟ್ಟುಹಾಕಿದೆ.
ಭಾರತದ 13 ಜನರು, ಯಾರ ಆಯ್ಕೆಯನ್ನು ಹೆಚ್ಚಾಗಿ ಪ್ರಶ್ನಿಸಲಾಗಿಲ್ಲವೋ – ಅವರು ಹೀಗಿದ್ದಾರೆ. ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೇದಾರ್ ಜಾಧವ್, ಕೆಎಲ್ ರಾಹುಲ್, ಎಂ ಎಸ್ ಧೋನಿ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‍ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜ.

ವಿಜಯ್ ಶಂಕರ್
ಒಪಿನಿಯನ್ ಡಿಫರೆನ್ಸ್ ಅನ್ನು ಹುಟ್ಟುಹಾಕಿರುವ ಆ ಎರಡು ಹೆಸರುಗಳೆಂದರೆ ವಿಜಯ್ ಶಂಕರ್ ಹಾಗೂ ದಿನೇಶ್ ಕಾರ್ತಿಕ್‍ರದ್ದು. ಇಬ್ಬರ ಆಯ್ಕೆಗಳೂ ಸಹ ಒಂದು ಮಟ್ಟಿಗೆ ಅಚ್ಚರಿಯೇ ತಂದಿತು. ಅದಕ್ಕಿಂತ ಹೆಚ್ಚಾಗಿ ಆಶ್ಚರ್ಯವಾದ ಸಂಗತಿಯೇನೆಂದರೆ ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡುರನ್ನು ಕೆಲ ತಿಂಗಳಗಳ ಮುಂಚೆ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಲ್ಲಿ ನಂಬರ್ 4 ಸ್ಥಾನದ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದಿದ್ದರು. ಆದರೆ ರಾಯುಡುರವರು ಫಾರ್ಮ್ ಕಳೆದುಕೊಂಡ ನಂತರ ಆ ಸ್ಥಾನಕ್ಕೆ ಅವರು ಇರಬೇಕೋ ಇಲ್ಲವೋ ಎಂಬ ಪ್ರಶ್ನೆ ಉದ್ಭವವಾಯಿತು. ಹಾಗೂ ಕೊನೆಗೂ ಸಹ ಅವರನ್ನು ತಂಡದಿಂದ ತೆಗೆಯಲಾಯಿತು. ಈಗ ಅವರು 15ರ ತಂಡಕ್ಕೆ ಯಾರಾದರೂ ಗಾಯಗೊಂಡರೆ ಅವರ ಬದಲಿಗೆ ಪ್ರವೇಶಿಸುವ 5 ಆಟಗಾರರ ಪಟ್ಟಿಯಲ್ಲಿದ್ದಾರೆ.
ವಿಜಯ್ ಶಂಕರ್‍ರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಿದ್ದು ಸಮಂಜಸವಲ್ಲ ಎನ್ನುವುದು ಹಲವರ ಅಭಿಪ್ರಾಯ. ಯಾಕೆಂದರೆ ಅಂಬಾಟಿ ರಾಯುಡು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್. ಏಕದಿನ ಕ್ರಿಕೆಟ್‍ನಲ್ಲಿ 47ರ ಸರಾಸರಿಯನ್ನು ಹೊಂದಿರುವ ರಾಯುಡು ಭಾರತದ ಪರ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಾಸರಿಯನ್ನು ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎಲ್ಲ ಬ್ಯಾಟ್ಸ್‍ಮನ್‍ಗಳ ಕೆರಿಯರ್‍ನಲ್ಲಿ ಕೆಲವೊಮ್ಮೆ ಫಾರ್ಮ್ ಇಲ್ಲದಿರುವುದು ಸಹಜ, ಆದರೆ ವಿಶ್ವಕಪ್‍ನಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಇಂಗ್ಲೆಂಡ್‍ನಲ್ಲಿ ಉತ್ತಮ ದಾಖಲೆ ಸಹ ಹೊಂದಿರುವ ಅಂಬಾಟಿ ರಾಯುಡುರನ್ನು ಆಡಿಸಬೇಕಿತ್ತು ಎಂಬುದು ಕೆಲವರ ಅಭಿಪ್ರಾಯ.

ಅಂಬಾಟಿ ರಾಯುಡು
ಆದರೆ ಆಯ್ಕೆಗಾರ ಎಂ.ಎಸ್.ಕೆ ಪ್ರಸಾದ್ ಹೇಳಿರುವ ಹಾಗೆ ವಿಜಯ್ ಶಂಕರ್ ಮೂರು ದೃಷ್ಟಿಕೋನಗಳಲ್ಲಿ (ಬ್ಯಾಟಿಂಗ್, ಫೀಲ್ಡಿಂಗ್ ಹಾಗೂ ಬೌಲಿಂಗ್) ತಂಡಕ್ಕೆ ಸಹಾಯ ಮಾಡುವುದರಿಂದ ಅವರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಲಾಯಿತು ಎಂಬುದು ಕೆಲವರ ಅಭಿಪ್ರಾಯ.
ನನ್ನ ಅಭಿಪ್ರಾಯದಲ್ಲಿ ಇವರಿಬ್ಬರ ಮಧ್ಯೆ ಅಂಬಾಟಿ ರಾಯುಡುರನ್ನು ಆಡಿಸಬೇಕಾಗಿತ್ತು. ಯಾಕೆಂದರೆ ವಿಜಯ್‍ರವರು ಮೂರು ವಿಭಾಗಗಳಲ್ಲಿ ತಂಡಕ್ಕೆ ಸಹಾಯ ಮಾಡಿದರೂ ಸಹ ಅಂಬಾಟಿರವರು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಫ್ಲೋಟರ್ ಆಗಿ ಕಾರ್ಯನಿರ್ವಹಿಸಬಲ್ಲರು. ಆದುದರಿಂದ ನನ್ನ ಪ್ರಕಾರ ಅಂಬಾಟಿ ರಾಯುಡುರವರು ಈ ಟೂರ್ನಿಯಲ್ಲಿ ಆಡಬೇಕಿತ್ತು.
ಇನ್ನೊಬ್ಬ ದಿನೇಶ್ ಕಾರ್ತಿಕ್ ಅವರ ಆಯ್ಕೆ ನನಗೆ ಚೂರೂ ಸಹ ಸಮಂಜಸವೆನಿಸಲಿಲ್ಲ. ಯಾಕೆಂದರೆ ತಂಡದಲ್ಲಿ ಧೋನಿಯವರು ವಿಕೆಟ್ ಕೀಪರ್ ಆಗಿದ್ದರು ಹಾಗೂ ಅವರಿಗೆ ಗಾಯವಾದರೆ ರಿಪ್ಲೇಸ್‍ಮೆಂಟ್ ಆಗಿ ಬೇರೆಯವರನ್ನು ಆಗ ಕಳಿಸಬಹುದಿತ್ತು ಅಥವಾ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡಬಹುದಿತ್ತು. ಯಾಕೆಂದರೆ ಧೋನಿಯವರು ನೀಡುವ ಮಾರ್ಗದರ್ಶನವನ್ನು ಯಾವ ಕೀಪರ್ ಸಹ ನೀಡಲಾಗುವುದಿಲ್ಲ. ಕಾರ್ತಿಕ್‍ರವರು ರಾಹುಲ್‍ಗಿಂತ ಸ್ವಲ್ಪ ಮಟ್ಟಿಗೆ ಮಾತ್ರ ಅತ್ಯುತ್ತಮ ಕೀಪರ್ ಎನ್ನುವುದು ನನ್ನ ಅಭಿಪ್ರಾಯ. ಇಬ್ಬರನ್ನೂ ಹೋಲಿಸಿದರೆ ರಾಹುಲ್ ಪ್ರಬುದ್ಧ ಬ್ಯಾಟ್ಸ್‍ಮನ್ ಸಹ. ಹಾಗಾಗಿ ನನಗೆ ದಿನೇಶ್ ಕಾರ್ತಿಕ್‍ರಿಗೆ ಯಾಕೆ ಸ್ಥಾನ ಸಿಕ್ಕಿತು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಕಾರ್ತಿಕ್‍ರ ಬದಲಿಗೆ ಅಂಬಾಟಿ ರಾಯುಡುರನ್ನು ಆಡಿಸಬಹುದಿತ್ತು. ಅಥವಾ ನಾನು ಹಿಂದೊಮ್ಮೆ ನನ್ನ ಲೇಖನದಲ್ಲಿ ಹೇಳಿದ ಹಾಗೆ ಆಜಿಂಕ್ಯ ರಹಾನೆಯವರನ್ನು ಆಡಿಸಬಹುದಾಗಿತ್ತು. ರಹಾನೆ, ರಾಯುಡು ಹಾಗೂ ಇನ್ನೊಬ್ಬ ಆಟಗಾರ ರೈನಾ, ಮೂವರೂ ಸಹ ಇಂಗ್ಲೆಂಡ್‍ನಲ್ಲಿ ಅನುಭವ ಹೊಂದಿದ್ದಾರೆ. ಆದುದರಿಂದ ದಿನೇಶ್‍ರ ಆಯ್ಕೆ ನನಗೆ ಗೊಂದಲವಾಗಿಯೇ ಉಳಿದಿದೆ.
ದಿನೇಶ್ ಕಾರ್ತಿಕ್
ತಂಡದ ಹೆಚ್ಚುವರಿ ಆಟಗಾರರಲ್ಲಿ ಅಕ್ಷರ್ ಪಟೇಲ್‍ರನ್ನು ಆಯ್ಕೆ ಮಾಡಿದ್ದು ನನಗಷ್ಟು ಸಮಂಜಸವೆನಿಸಲಿಲ್ಲ. ಯಾಕೆಂದರೆ ಅಕ್ಷರ್ ಇತ್ತೀಚಿಗೆ ಭಾರತ ತಂಡದಲ್ಲಿ ಆಡಿಲ್ಲ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅವರೇನೂ ಅತ್ಯುತ್ತಮ ಫಾರ್ಮ್‍ನಲ್ಲಿಲ್ಲ. ಅವರ ಬದಲಿಗೆ ಈಗ ಇನ್ನಷ್ಟು ಪ್ರಬುದ್ಧರಾಗಿರುವ ರವಿಚಂದ್ರನ್ ಅಶ್ವಿನ್‍ರನ್ನು ಆಯ್ಕೆ ಮಾಡಬಹುದಾಗಿತ್ತು.
ಇನ್ನು ಇದೇ ಹೆಚ್ಚುವರಿ ಆಟಗಾರರಲ್ಲಿ ಆಯ್ಕೆಯಾಗಿರುವ ನವದೀಪ್ ಸೈನಿಯವರ ಬದಲಿಗೆ ದೀಪಕ್ ಚಹಾರ್ ಅಥವಾ ಅವರದ್ದೇ ರೀತಿಯ ಒಬ್ಬ ಸ್ವಿಂಗ್ ಬೌಲರ್‍ನ್ನು ಆಯ್ಕೆ ಮಾಡಬೇಕಾಗಿತ್ತು. ಯಾಕೆಂದರೆ ನವದೀಪ್ ವೇಗವಾಗಿ ಮಾತ್ರ ಬೌಲ್ ಮಾಡಬಲ್ಲರು. ಇಂಗ್ಲೆಂಡ್ ಕಂಡೀಷನ್‍ಗಳು ಹೆಚ್ಚಾಗಿ ಬೆಂಬಲ ನೀಡುವುದು ಸ್ವಿಂಗ್‍ಗೆ. ಹೀಗಾಗಿ ಭುವನೇಶ್ವರ್ ಕುಮಾರ್‍ಗೆ ತಕ್ಕ ಸಾಥ್ ಕೊಡಬಲ್ಲ ಒಬ್ಬ ಸ್ವಿಂಗ್ ವೇಗಿಯನ್ನು ಆಯ್ಕೆ ಮಾಡಬಹುದಾಗಿತ್ತು ಎಂಬುದು ನನ್ನ ಅಭಿಪ್ರಾಯ.
ಒಟ್ಟಾರೆಯಾಗಿ ಇಲ್ಲಿಯ ತನಕ ಘೋಷಣೆಯಾಗಿರುವ ತಂಡಗಳಲ್ಲಿ ಭಾರತ ಒಂದು ಮಟ್ಟಿಗೆ ಅತ್ಯುತ್ತಮ ಬ್ಯಾಲೆನ್ಸ್ ಹೊಂದಿರುವ ತಂಡವಾಗಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಅತ್ಯಂತ ಉತ್ತಮ ಬೌಲಿಂಗ್ ಲೈನಪ್‍ಗಳನ್ನು ಕಟ್ಟಿಕೊಂಡಿವೆ ಹಾಗೂ ಇವೆರಡೂ ಲೈನಪ್‍ಗಳನ್ನು ಎದುರಿಸುವುದು ಇತರ ತಂಡಗಳಿಗೆ ದೊಡ್ಡ ಸವಾಲಾಗುವುದಂತೂ ಸರಿ. ಭಾರತ ವಿಶ್ವಕಪ್ ಗೆಲ್ಲಲಿ ಎಂಬುದು ನನ್ನ ಆಶಯ. ಈ ಆಶಯ ನಿಜವಾಗುತ್ತದಾ ಇಲ್ಲವಾ ಎಂಬುದು ನಾವು ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...