Homeಸಿನಿಮಾಕ್ರೀಡೆವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

ವಿಶ್ವಕಪ್ : ವಿಜಯ್ ಶಂಕರ್ ಸೇರಿಸಿದ್ಯಾಕೆ? ಅಂಬಾಟಿ ರಾಯುಡು ಬಿಟ್ಟಿದ್ಯಾಕೆ?

- Advertisement -
| ಅಂತಃಕರಣ |
ಈ ಬಾರಿಯ ಭಾರತದ ವಿಶ್ವಕಪ್ ತಂಡದ ಸುಮಾರು 13 ಆಟಗಾರರು ಎಲ್ಲರೂ ನಿರೀಕ್ಷಿಸಿದವರೇ ಆಗಿದ್ದರು. ಆದರೆ ಉಳಿದ ಇಬ್ಬರ ಆಯ್ಕೆ ಕೆಲವು ಅಭಿಪ್ರಾಯ ಬೇಧಗಳನ್ನು (ಒಪಿನಿಯನ್ ಡಿಫರೆನ್ಸ್) ಹುಟ್ಟುಹಾಕಿದೆ.
ಭಾರತದ 13 ಜನರು, ಯಾರ ಆಯ್ಕೆಯನ್ನು ಹೆಚ್ಚಾಗಿ ಪ್ರಶ್ನಿಸಲಾಗಿಲ್ಲವೋ – ಅವರು ಹೀಗಿದ್ದಾರೆ. ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೇದಾರ್ ಜಾಧವ್, ಕೆಎಲ್ ರಾಹುಲ್, ಎಂ ಎಸ್ ಧೋನಿ, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್‍ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜ.

ವಿಜಯ್ ಶಂಕರ್
ಒಪಿನಿಯನ್ ಡಿಫರೆನ್ಸ್ ಅನ್ನು ಹುಟ್ಟುಹಾಕಿರುವ ಆ ಎರಡು ಹೆಸರುಗಳೆಂದರೆ ವಿಜಯ್ ಶಂಕರ್ ಹಾಗೂ ದಿನೇಶ್ ಕಾರ್ತಿಕ್‍ರದ್ದು. ಇಬ್ಬರ ಆಯ್ಕೆಗಳೂ ಸಹ ಒಂದು ಮಟ್ಟಿಗೆ ಅಚ್ಚರಿಯೇ ತಂದಿತು. ಅದಕ್ಕಿಂತ ಹೆಚ್ಚಾಗಿ ಆಶ್ಚರ್ಯವಾದ ಸಂಗತಿಯೇನೆಂದರೆ ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡುರನ್ನು ಕೆಲ ತಿಂಗಳಗಳ ಮುಂಚೆ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಲ್ಲಿ ನಂಬರ್ 4 ಸ್ಥಾನದ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದಿದ್ದರು. ಆದರೆ ರಾಯುಡುರವರು ಫಾರ್ಮ್ ಕಳೆದುಕೊಂಡ ನಂತರ ಆ ಸ್ಥಾನಕ್ಕೆ ಅವರು ಇರಬೇಕೋ ಇಲ್ಲವೋ ಎಂಬ ಪ್ರಶ್ನೆ ಉದ್ಭವವಾಯಿತು. ಹಾಗೂ ಕೊನೆಗೂ ಸಹ ಅವರನ್ನು ತಂಡದಿಂದ ತೆಗೆಯಲಾಯಿತು. ಈಗ ಅವರು 15ರ ತಂಡಕ್ಕೆ ಯಾರಾದರೂ ಗಾಯಗೊಂಡರೆ ಅವರ ಬದಲಿಗೆ ಪ್ರವೇಶಿಸುವ 5 ಆಟಗಾರರ ಪಟ್ಟಿಯಲ್ಲಿದ್ದಾರೆ.
ವಿಜಯ್ ಶಂಕರ್‍ರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಿದ್ದು ಸಮಂಜಸವಲ್ಲ ಎನ್ನುವುದು ಹಲವರ ಅಭಿಪ್ರಾಯ. ಯಾಕೆಂದರೆ ಅಂಬಾಟಿ ರಾಯುಡು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್. ಏಕದಿನ ಕ್ರಿಕೆಟ್‍ನಲ್ಲಿ 47ರ ಸರಾಸರಿಯನ್ನು ಹೊಂದಿರುವ ರಾಯುಡು ಭಾರತದ ಪರ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಸರಾಸರಿಯನ್ನು ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎಲ್ಲ ಬ್ಯಾಟ್ಸ್‍ಮನ್‍ಗಳ ಕೆರಿಯರ್‍ನಲ್ಲಿ ಕೆಲವೊಮ್ಮೆ ಫಾರ್ಮ್ ಇಲ್ಲದಿರುವುದು ಸಹಜ, ಆದರೆ ವಿಶ್ವಕಪ್‍ನಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಇಂಗ್ಲೆಂಡ್‍ನಲ್ಲಿ ಉತ್ತಮ ದಾಖಲೆ ಸಹ ಹೊಂದಿರುವ ಅಂಬಾಟಿ ರಾಯುಡುರನ್ನು ಆಡಿಸಬೇಕಿತ್ತು ಎಂಬುದು ಕೆಲವರ ಅಭಿಪ್ರಾಯ.

ಅಂಬಾಟಿ ರಾಯುಡು
ಆದರೆ ಆಯ್ಕೆಗಾರ ಎಂ.ಎಸ್.ಕೆ ಪ್ರಸಾದ್ ಹೇಳಿರುವ ಹಾಗೆ ವಿಜಯ್ ಶಂಕರ್ ಮೂರು ದೃಷ್ಟಿಕೋನಗಳಲ್ಲಿ (ಬ್ಯಾಟಿಂಗ್, ಫೀಲ್ಡಿಂಗ್ ಹಾಗೂ ಬೌಲಿಂಗ್) ತಂಡಕ್ಕೆ ಸಹಾಯ ಮಾಡುವುದರಿಂದ ಅವರನ್ನು ಅಂಬಾಟಿ ರಾಯುಡುರವರ ಬದಲಿಗೆ ಆಯ್ಕೆ ಮಾಡಲಾಯಿತು ಎಂಬುದು ಕೆಲವರ ಅಭಿಪ್ರಾಯ.
ನನ್ನ ಅಭಿಪ್ರಾಯದಲ್ಲಿ ಇವರಿಬ್ಬರ ಮಧ್ಯೆ ಅಂಬಾಟಿ ರಾಯುಡುರನ್ನು ಆಡಿಸಬೇಕಾಗಿತ್ತು. ಯಾಕೆಂದರೆ ವಿಜಯ್‍ರವರು ಮೂರು ವಿಭಾಗಗಳಲ್ಲಿ ತಂಡಕ್ಕೆ ಸಹಾಯ ಮಾಡಿದರೂ ಸಹ ಅಂಬಾಟಿರವರು ಒಬ್ಬ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್ ಆಗಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಫ್ಲೋಟರ್ ಆಗಿ ಕಾರ್ಯನಿರ್ವಹಿಸಬಲ್ಲರು. ಆದುದರಿಂದ ನನ್ನ ಪ್ರಕಾರ ಅಂಬಾಟಿ ರಾಯುಡುರವರು ಈ ಟೂರ್ನಿಯಲ್ಲಿ ಆಡಬೇಕಿತ್ತು.
ಇನ್ನೊಬ್ಬ ದಿನೇಶ್ ಕಾರ್ತಿಕ್ ಅವರ ಆಯ್ಕೆ ನನಗೆ ಚೂರೂ ಸಹ ಸಮಂಜಸವೆನಿಸಲಿಲ್ಲ. ಯಾಕೆಂದರೆ ತಂಡದಲ್ಲಿ ಧೋನಿಯವರು ವಿಕೆಟ್ ಕೀಪರ್ ಆಗಿದ್ದರು ಹಾಗೂ ಅವರಿಗೆ ಗಾಯವಾದರೆ ರಿಪ್ಲೇಸ್‍ಮೆಂಟ್ ಆಗಿ ಬೇರೆಯವರನ್ನು ಆಗ ಕಳಿಸಬಹುದಿತ್ತು ಅಥವಾ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡಬಹುದಿತ್ತು. ಯಾಕೆಂದರೆ ಧೋನಿಯವರು ನೀಡುವ ಮಾರ್ಗದರ್ಶನವನ್ನು ಯಾವ ಕೀಪರ್ ಸಹ ನೀಡಲಾಗುವುದಿಲ್ಲ. ಕಾರ್ತಿಕ್‍ರವರು ರಾಹುಲ್‍ಗಿಂತ ಸ್ವಲ್ಪ ಮಟ್ಟಿಗೆ ಮಾತ್ರ ಅತ್ಯುತ್ತಮ ಕೀಪರ್ ಎನ್ನುವುದು ನನ್ನ ಅಭಿಪ್ರಾಯ. ಇಬ್ಬರನ್ನೂ ಹೋಲಿಸಿದರೆ ರಾಹುಲ್ ಪ್ರಬುದ್ಧ ಬ್ಯಾಟ್ಸ್‍ಮನ್ ಸಹ. ಹಾಗಾಗಿ ನನಗೆ ದಿನೇಶ್ ಕಾರ್ತಿಕ್‍ರಿಗೆ ಯಾಕೆ ಸ್ಥಾನ ಸಿಕ್ಕಿತು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಕಾರ್ತಿಕ್‍ರ ಬದಲಿಗೆ ಅಂಬಾಟಿ ರಾಯುಡುರನ್ನು ಆಡಿಸಬಹುದಿತ್ತು. ಅಥವಾ ನಾನು ಹಿಂದೊಮ್ಮೆ ನನ್ನ ಲೇಖನದಲ್ಲಿ ಹೇಳಿದ ಹಾಗೆ ಆಜಿಂಕ್ಯ ರಹಾನೆಯವರನ್ನು ಆಡಿಸಬಹುದಾಗಿತ್ತು. ರಹಾನೆ, ರಾಯುಡು ಹಾಗೂ ಇನ್ನೊಬ್ಬ ಆಟಗಾರ ರೈನಾ, ಮೂವರೂ ಸಹ ಇಂಗ್ಲೆಂಡ್‍ನಲ್ಲಿ ಅನುಭವ ಹೊಂದಿದ್ದಾರೆ. ಆದುದರಿಂದ ದಿನೇಶ್‍ರ ಆಯ್ಕೆ ನನಗೆ ಗೊಂದಲವಾಗಿಯೇ ಉಳಿದಿದೆ.
ದಿನೇಶ್ ಕಾರ್ತಿಕ್
ತಂಡದ ಹೆಚ್ಚುವರಿ ಆಟಗಾರರಲ್ಲಿ ಅಕ್ಷರ್ ಪಟೇಲ್‍ರನ್ನು ಆಯ್ಕೆ ಮಾಡಿದ್ದು ನನಗಷ್ಟು ಸಮಂಜಸವೆನಿಸಲಿಲ್ಲ. ಯಾಕೆಂದರೆ ಅಕ್ಷರ್ ಇತ್ತೀಚಿಗೆ ಭಾರತ ತಂಡದಲ್ಲಿ ಆಡಿಲ್ಲ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಅವರೇನೂ ಅತ್ಯುತ್ತಮ ಫಾರ್ಮ್‍ನಲ್ಲಿಲ್ಲ. ಅವರ ಬದಲಿಗೆ ಈಗ ಇನ್ನಷ್ಟು ಪ್ರಬುದ್ಧರಾಗಿರುವ ರವಿಚಂದ್ರನ್ ಅಶ್ವಿನ್‍ರನ್ನು ಆಯ್ಕೆ ಮಾಡಬಹುದಾಗಿತ್ತು.
ಇನ್ನು ಇದೇ ಹೆಚ್ಚುವರಿ ಆಟಗಾರರಲ್ಲಿ ಆಯ್ಕೆಯಾಗಿರುವ ನವದೀಪ್ ಸೈನಿಯವರ ಬದಲಿಗೆ ದೀಪಕ್ ಚಹಾರ್ ಅಥವಾ ಅವರದ್ದೇ ರೀತಿಯ ಒಬ್ಬ ಸ್ವಿಂಗ್ ಬೌಲರ್‍ನ್ನು ಆಯ್ಕೆ ಮಾಡಬೇಕಾಗಿತ್ತು. ಯಾಕೆಂದರೆ ನವದೀಪ್ ವೇಗವಾಗಿ ಮಾತ್ರ ಬೌಲ್ ಮಾಡಬಲ್ಲರು. ಇಂಗ್ಲೆಂಡ್ ಕಂಡೀಷನ್‍ಗಳು ಹೆಚ್ಚಾಗಿ ಬೆಂಬಲ ನೀಡುವುದು ಸ್ವಿಂಗ್‍ಗೆ. ಹೀಗಾಗಿ ಭುವನೇಶ್ವರ್ ಕುಮಾರ್‍ಗೆ ತಕ್ಕ ಸಾಥ್ ಕೊಡಬಲ್ಲ ಒಬ್ಬ ಸ್ವಿಂಗ್ ವೇಗಿಯನ್ನು ಆಯ್ಕೆ ಮಾಡಬಹುದಾಗಿತ್ತು ಎಂಬುದು ನನ್ನ ಅಭಿಪ್ರಾಯ.
ಒಟ್ಟಾರೆಯಾಗಿ ಇಲ್ಲಿಯ ತನಕ ಘೋಷಣೆಯಾಗಿರುವ ತಂಡಗಳಲ್ಲಿ ಭಾರತ ಒಂದು ಮಟ್ಟಿಗೆ ಅತ್ಯುತ್ತಮ ಬ್ಯಾಲೆನ್ಸ್ ಹೊಂದಿರುವ ತಂಡವಾಗಿದೆ. ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಅತ್ಯಂತ ಉತ್ತಮ ಬೌಲಿಂಗ್ ಲೈನಪ್‍ಗಳನ್ನು ಕಟ್ಟಿಕೊಂಡಿವೆ ಹಾಗೂ ಇವೆರಡೂ ಲೈನಪ್‍ಗಳನ್ನು ಎದುರಿಸುವುದು ಇತರ ತಂಡಗಳಿಗೆ ದೊಡ್ಡ ಸವಾಲಾಗುವುದಂತೂ ಸರಿ. ಭಾರತ ವಿಶ್ವಕಪ್ ಗೆಲ್ಲಲಿ ಎಂಬುದು ನನ್ನ ಆಶಯ. ಈ ಆಶಯ ನಿಜವಾಗುತ್ತದಾ ಇಲ್ಲವಾ ಎಂಬುದು ನಾವು ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...