Homeಮುಖಪುಟಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು.  ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ವಿಳಂಬವಾಗುತ್ತಿದೆ.

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (ಎನ್‌ಇಪಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ನಿರ್ಧಾರವು ವಿಳಂಬವಾಗುತ್ತಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು. ಅಂದಾಜಿನ ಪ್ರಕಾರ, ಉಚಿತ ಬೆಳಗಿನ ಉಪಹಾರಕ್ಕಾಗಿ ಹೆಚ್ಚುವರಿ 4,000 ಕೋಟಿ ರೂ. ಮತ್ತು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸುಮಾರು 5,000 ಕೋಟಿಯನ್ನು ಶಿಕ್ಷಣ ಇಲಾಖೆಯು ಅಪೇಕ್ಷಿಸಿತ್ತು.

ದೇಶದಾದ್ಯಂತ ಇರುವ 11.8 ಕೋಟಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಖರ್ಚು ಮಾಡುತ್ತಿರುವ ಹಣ 11,000 ಕೊಟಿ ರೂ. ಆಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆದರೆ ಮುಂಬರುವ ಹಣಕಾಸು ವರ್ಷದಲ್ಲಿ ಶಿಕ್ಷಣ ಇಲಾಖೆಯ ಬಜೆಟ್ ಹಂಚಿಕೆಯನ್ನು 8% ರಷ್ಟು ಕಡಿತಗೊಳಿಸಲಾಗಿದ್ದು, 2020-21ರಲ್ಲಿ 59,845 ಕೋಟಿ ರೂ.ಗಳಿಂದ 2021-22ರಲ್ಲಿ 54,873 ಕೋಟಿ ರೂ.ಗೆ ಇಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ, ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸುಮಾರು ಒಂಬತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದ್ದರೂ, ಮಾರ್ಪಾಡುಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆದಿತ್ತು. ಅಂದರೆ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಬಡಿಸುವ ಮಧ್ಯಾಹ್ನದ ಊಟಕ್ಕೆ ಬದಲಾಗಿ ಶುಷ್ಕ ಪಡಿತರ ಅಥವಾ ಹಣವನ್ನು (ನೇರ ಲಾಭ ವರ್ಗಾವಣೆ) ನೀಡಲಾಗಿತ್ತು.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಈ ಯೋಜನೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ ಮೊತ್ತ 11,000 ಕೋಟಿ ರೂ.ಗಳು. ಆದರೆ ತಗಲುವ ವೆಚ್ಚ 12,900 ಕೋಟಿ ರೂ.ಗಳು ಎಂದು ಇಲಾಖೆ ಹೇಳಿದೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಕೇವಲ 11,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

ಆದರೂ, ಮಾರ್ಚ್ 9 ರಂದು ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವಂತೆ ಶಿಫಾರಸು ಮಾಡಿದ್ದು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಹೇಳಿದೆ. ಪ್ರಸ್ತುತ ಈ ಯೋಜನೆ 1-8ನೇ ತರಗತಿಯವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಅದನ್ನು ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಿಸಬೇಕು ಎಂಬುದನ್ನು ಸಮಿತಿಯು ಉಲ್ಲೇಖಿಸಿದೆ.

ಎನ್‌ಇಪಿಯ ಶಿಫಾರಸುಗಳಿಗೆ ಅನುಗುಣವಾಗಿ ಮಧ್ಯಾಹ್ನದ ಊಟದ ಜೊತೆಗೆ ಬೆಳಗಿನ ಉಪಾಹಾರವನ್ನೂ ಪೂರಕವಾಗಿ ನೀಡಬೇಕು ಎಂಬ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ 2020 ರ ಆಗಸ್ಟ್‌ನಲ್ಲಿ ಅಂಗೀಕರಿಸಿತ್ತು. ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುತ ಆಹಾರ ನೀಡುವುದರ ಜೊತೆಗೆ ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವುದೇ ಇದರ ಉದ್ದೇಶವಾಗಿತ್ತು.

ಸಂಶೋಧನೆಯ ಪ್ರಕಾರ, “ಮಧ್ಯಾಹ್ನದ ಊಟಕ್ಕೆ ಮೊದಲು ಸರಳ ಮತ್ತು ಪೌಷ್ಠಿಕಾಂಶಯುತ ಆಹಾರವನ್ನು ನೀಡುವುದರಿಂದ ಬೆಳಿಗ್ಗೆ-ಮಧ್ಯಾಹ್ನದ ನಡುವಿನ ಸಮಯದಲ್ಲಿ ಮಕ್ಕಳು ಹೆಚ್ಚು ಕ್ರಿಯಾತ್ಮಕವಾಗಿರುತ್ತಾರೆ” ಎಂದು ರಾಷ್ಟ್ರೀಯ ಶಿಕ್ಷಣ ನೀತಿಯು ಹೇಳುತ್ತದೆ.

ಸರ್ಕಾರ ಹಣಕಾಸಿನ ಸ್ಥಿತಿ ಸುಧಾರಿಸಿದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...