Homeಮುಖಪುಟಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು.  ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ವಿಳಂಬವಾಗುತ್ತಿದೆ.

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (ಎನ್‌ಇಪಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ನಿರ್ಧಾರವು ವಿಳಂಬವಾಗುತ್ತಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು. ಅಂದಾಜಿನ ಪ್ರಕಾರ, ಉಚಿತ ಬೆಳಗಿನ ಉಪಹಾರಕ್ಕಾಗಿ ಹೆಚ್ಚುವರಿ 4,000 ಕೋಟಿ ರೂ. ಮತ್ತು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸುಮಾರು 5,000 ಕೋಟಿಯನ್ನು ಶಿಕ್ಷಣ ಇಲಾಖೆಯು ಅಪೇಕ್ಷಿಸಿತ್ತು.

ದೇಶದಾದ್ಯಂತ ಇರುವ 11.8 ಕೋಟಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಖರ್ಚು ಮಾಡುತ್ತಿರುವ ಹಣ 11,000 ಕೊಟಿ ರೂ. ಆಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆದರೆ ಮುಂಬರುವ ಹಣಕಾಸು ವರ್ಷದಲ್ಲಿ ಶಿಕ್ಷಣ ಇಲಾಖೆಯ ಬಜೆಟ್ ಹಂಚಿಕೆಯನ್ನು 8% ರಷ್ಟು ಕಡಿತಗೊಳಿಸಲಾಗಿದ್ದು, 2020-21ರಲ್ಲಿ 59,845 ಕೋಟಿ ರೂ.ಗಳಿಂದ 2021-22ರಲ್ಲಿ 54,873 ಕೋಟಿ ರೂ.ಗೆ ಇಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ, ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸುಮಾರು ಒಂಬತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದ್ದರೂ, ಮಾರ್ಪಾಡುಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆದಿತ್ತು. ಅಂದರೆ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಬಡಿಸುವ ಮಧ್ಯಾಹ್ನದ ಊಟಕ್ಕೆ ಬದಲಾಗಿ ಶುಷ್ಕ ಪಡಿತರ ಅಥವಾ ಹಣವನ್ನು (ನೇರ ಲಾಭ ವರ್ಗಾವಣೆ) ನೀಡಲಾಗಿತ್ತು.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಈ ಯೋಜನೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ ಮೊತ್ತ 11,000 ಕೋಟಿ ರೂ.ಗಳು. ಆದರೆ ತಗಲುವ ವೆಚ್ಚ 12,900 ಕೋಟಿ ರೂ.ಗಳು ಎಂದು ಇಲಾಖೆ ಹೇಳಿದೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಕೇವಲ 11,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

ಆದರೂ, ಮಾರ್ಚ್ 9 ರಂದು ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವಂತೆ ಶಿಫಾರಸು ಮಾಡಿದ್ದು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಹೇಳಿದೆ. ಪ್ರಸ್ತುತ ಈ ಯೋಜನೆ 1-8ನೇ ತರಗತಿಯವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಅದನ್ನು ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಿಸಬೇಕು ಎಂಬುದನ್ನು ಸಮಿತಿಯು ಉಲ್ಲೇಖಿಸಿದೆ.

ಎನ್‌ಇಪಿಯ ಶಿಫಾರಸುಗಳಿಗೆ ಅನುಗುಣವಾಗಿ ಮಧ್ಯಾಹ್ನದ ಊಟದ ಜೊತೆಗೆ ಬೆಳಗಿನ ಉಪಾಹಾರವನ್ನೂ ಪೂರಕವಾಗಿ ನೀಡಬೇಕು ಎಂಬ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ 2020 ರ ಆಗಸ್ಟ್‌ನಲ್ಲಿ ಅಂಗೀಕರಿಸಿತ್ತು. ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುತ ಆಹಾರ ನೀಡುವುದರ ಜೊತೆಗೆ ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವುದೇ ಇದರ ಉದ್ದೇಶವಾಗಿತ್ತು.

ಸಂಶೋಧನೆಯ ಪ್ರಕಾರ, “ಮಧ್ಯಾಹ್ನದ ಊಟಕ್ಕೆ ಮೊದಲು ಸರಳ ಮತ್ತು ಪೌಷ್ಠಿಕಾಂಶಯುತ ಆಹಾರವನ್ನು ನೀಡುವುದರಿಂದ ಬೆಳಿಗ್ಗೆ-ಮಧ್ಯಾಹ್ನದ ನಡುವಿನ ಸಮಯದಲ್ಲಿ ಮಕ್ಕಳು ಹೆಚ್ಚು ಕ್ರಿಯಾತ್ಮಕವಾಗಿರುತ್ತಾರೆ” ಎಂದು ರಾಷ್ಟ್ರೀಯ ಶಿಕ್ಷಣ ನೀತಿಯು ಹೇಳುತ್ತದೆ.

ಸರ್ಕಾರ ಹಣಕಾಸಿನ ಸ್ಥಿತಿ ಸುಧಾರಿಸಿದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...