Homeಮುಖಪುಟಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು.  ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ವಿಳಂಬವಾಗುತ್ತಿದೆ.

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (ಎನ್‌ಇಪಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ನಿರ್ಧಾರವು ವಿಳಂಬವಾಗುತ್ತಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು. ಅಂದಾಜಿನ ಪ್ರಕಾರ, ಉಚಿತ ಬೆಳಗಿನ ಉಪಹಾರಕ್ಕಾಗಿ ಹೆಚ್ಚುವರಿ 4,000 ಕೋಟಿ ರೂ. ಮತ್ತು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸುಮಾರು 5,000 ಕೋಟಿಯನ್ನು ಶಿಕ್ಷಣ ಇಲಾಖೆಯು ಅಪೇಕ್ಷಿಸಿತ್ತು.

ದೇಶದಾದ್ಯಂತ ಇರುವ 11.8 ಕೋಟಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಖರ್ಚು ಮಾಡುತ್ತಿರುವ ಹಣ 11,000 ಕೊಟಿ ರೂ. ಆಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆದರೆ ಮುಂಬರುವ ಹಣಕಾಸು ವರ್ಷದಲ್ಲಿ ಶಿಕ್ಷಣ ಇಲಾಖೆಯ ಬಜೆಟ್ ಹಂಚಿಕೆಯನ್ನು 8% ರಷ್ಟು ಕಡಿತಗೊಳಿಸಲಾಗಿದ್ದು, 2020-21ರಲ್ಲಿ 59,845 ಕೋಟಿ ರೂ.ಗಳಿಂದ 2021-22ರಲ್ಲಿ 54,873 ಕೋಟಿ ರೂ.ಗೆ ಇಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ, ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸುಮಾರು ಒಂಬತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದ್ದರೂ, ಮಾರ್ಪಾಡುಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆದಿತ್ತು. ಅಂದರೆ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಬಡಿಸುವ ಮಧ್ಯಾಹ್ನದ ಊಟಕ್ಕೆ ಬದಲಾಗಿ ಶುಷ್ಕ ಪಡಿತರ ಅಥವಾ ಹಣವನ್ನು (ನೇರ ಲಾಭ ವರ್ಗಾವಣೆ) ನೀಡಲಾಗಿತ್ತು.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಈ ಯೋಜನೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ ಮೊತ್ತ 11,000 ಕೋಟಿ ರೂ.ಗಳು. ಆದರೆ ತಗಲುವ ವೆಚ್ಚ 12,900 ಕೋಟಿ ರೂ.ಗಳು ಎಂದು ಇಲಾಖೆ ಹೇಳಿದೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಕೇವಲ 11,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

ಆದರೂ, ಮಾರ್ಚ್ 9 ರಂದು ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವಂತೆ ಶಿಫಾರಸು ಮಾಡಿದ್ದು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಹೇಳಿದೆ. ಪ್ರಸ್ತುತ ಈ ಯೋಜನೆ 1-8ನೇ ತರಗತಿಯವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಅದನ್ನು ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಿಸಬೇಕು ಎಂಬುದನ್ನು ಸಮಿತಿಯು ಉಲ್ಲೇಖಿಸಿದೆ.

ಎನ್‌ಇಪಿಯ ಶಿಫಾರಸುಗಳಿಗೆ ಅನುಗುಣವಾಗಿ ಮಧ್ಯಾಹ್ನದ ಊಟದ ಜೊತೆಗೆ ಬೆಳಗಿನ ಉಪಾಹಾರವನ್ನೂ ಪೂರಕವಾಗಿ ನೀಡಬೇಕು ಎಂಬ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ 2020 ರ ಆಗಸ್ಟ್‌ನಲ್ಲಿ ಅಂಗೀಕರಿಸಿತ್ತು. ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುತ ಆಹಾರ ನೀಡುವುದರ ಜೊತೆಗೆ ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವುದೇ ಇದರ ಉದ್ದೇಶವಾಗಿತ್ತು.

ಸಂಶೋಧನೆಯ ಪ್ರಕಾರ, “ಮಧ್ಯಾಹ್ನದ ಊಟಕ್ಕೆ ಮೊದಲು ಸರಳ ಮತ್ತು ಪೌಷ್ಠಿಕಾಂಶಯುತ ಆಹಾರವನ್ನು ನೀಡುವುದರಿಂದ ಬೆಳಿಗ್ಗೆ-ಮಧ್ಯಾಹ್ನದ ನಡುವಿನ ಸಮಯದಲ್ಲಿ ಮಕ್ಕಳು ಹೆಚ್ಚು ಕ್ರಿಯಾತ್ಮಕವಾಗಿರುತ್ತಾರೆ” ಎಂದು ರಾಷ್ಟ್ರೀಯ ಶಿಕ್ಷಣ ನೀತಿಯು ಹೇಳುತ್ತದೆ.

ಸರ್ಕಾರ ಹಣಕಾಸಿನ ಸ್ಥಿತಿ ಸುಧಾರಿಸಿದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...