Homeಮುಖಪುಟಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಮಕ್ಕಳಿಗೆ ಬೆಳಗಿನ ಉಪಹಾರ ಯೋಜನೆ: ಕೇಂದ್ರದ ಆರ್ಥಿಕ ಬಿಕ್ಕಟ್ಟಿನಿಂದ ವಿಳಂಬ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು.  ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ವಿಳಂಬವಾಗುತ್ತಿದೆ.

- Advertisement -
- Advertisement -

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (ಎನ್‌ಇಪಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ಒದಗಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ನಿರ್ಧಾರವು ವಿಳಂಬವಾಗುತ್ತಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಈ ಕ್ರಮವನ್ನು 2021ರ ಏಪ್ರಿಲ್ ತಿಂಗಳಿನಿಂದ ಪ್ರಾರಂಭಿಸಬೇಕಾಗಿತ್ತು. ಅಂದಾಜಿನ ಪ್ರಕಾರ, ಉಚಿತ ಬೆಳಗಿನ ಉಪಹಾರಕ್ಕಾಗಿ ಹೆಚ್ಚುವರಿ 4,000 ಕೋಟಿ ರೂ. ಮತ್ತು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸುಮಾರು 5,000 ಕೋಟಿಯನ್ನು ಶಿಕ್ಷಣ ಇಲಾಖೆಯು ಅಪೇಕ್ಷಿಸಿತ್ತು.

ದೇಶದಾದ್ಯಂತ ಇರುವ 11.8 ಕೋಟಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಖರ್ಚು ಮಾಡುತ್ತಿರುವ ಹಣ 11,000 ಕೊಟಿ ರೂ. ಆಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಆದರೆ ಮುಂಬರುವ ಹಣಕಾಸು ವರ್ಷದಲ್ಲಿ ಶಿಕ್ಷಣ ಇಲಾಖೆಯ ಬಜೆಟ್ ಹಂಚಿಕೆಯನ್ನು 8% ರಷ್ಟು ಕಡಿತಗೊಳಿಸಲಾಗಿದ್ದು, 2020-21ರಲ್ಲಿ 59,845 ಕೋಟಿ ರೂ.ಗಳಿಂದ 2021-22ರಲ್ಲಿ 54,873 ಕೋಟಿ ರೂ.ಗೆ ಇಳಿಸಲಾಗಿದೆ.

ಕಳೆದ ಒಂದು ವರ್ಷದಲ್ಲಿ, ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸುಮಾರು ಒಂಬತ್ತು ತಿಂಗಳು ಶಾಲೆಗಳನ್ನು ಮುಚ್ಚಲಾಗಿದ್ದರೂ, ಮಾರ್ಪಾಡುಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆದಿತ್ತು. ಅಂದರೆ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿ ಬಡಿಸುವ ಮಧ್ಯಾಹ್ನದ ಊಟಕ್ಕೆ ಬದಲಾಗಿ ಶುಷ್ಕ ಪಡಿತರ ಅಥವಾ ಹಣವನ್ನು (ನೇರ ಲಾಭ ವರ್ಗಾವಣೆ) ನೀಡಲಾಗಿತ್ತು.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಈ ಯೋಜನೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ ಮೊತ್ತ 11,000 ಕೋಟಿ ರೂ.ಗಳು. ಆದರೆ ತಗಲುವ ವೆಚ್ಚ 12,900 ಕೋಟಿ ರೂ.ಗಳು ಎಂದು ಇಲಾಖೆ ಹೇಳಿದೆ. ಆದರೆ, ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಕೇವಲ 11,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ.

ಆದರೂ, ಮಾರ್ಚ್ 9 ರಂದು ಲೋಕಸಭೆಯಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಶಿಕ್ಷಣದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವನ್ನು ಒದಗಿಸುವಂತೆ ಶಿಫಾರಸು ಮಾಡಿದ್ದು, ಮಧ್ಯಾಹ್ನದ ಬಿಸಿಯೂಟ ಯೋಜನೆಯ ವ್ಯಾಪ್ತಿಯನ್ನು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಹೇಳಿದೆ. ಪ್ರಸ್ತುತ ಈ ಯೋಜನೆ 1-8ನೇ ತರಗತಿಯವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಅದನ್ನು ಪೂರ್ವ ಪ್ರಾಥಮಿಕ ಶಾಲೆಗಳಿಗೂ ವಿಸ್ತರಿಸಬೇಕು ಎಂಬುದನ್ನು ಸಮಿತಿಯು ಉಲ್ಲೇಖಿಸಿದೆ.

ಎನ್‌ಇಪಿಯ ಶಿಫಾರಸುಗಳಿಗೆ ಅನುಗುಣವಾಗಿ ಮಧ್ಯಾಹ್ನದ ಊಟದ ಜೊತೆಗೆ ಬೆಳಗಿನ ಉಪಾಹಾರವನ್ನೂ ಪೂರಕವಾಗಿ ನೀಡಬೇಕು ಎಂಬ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ 2020 ರ ಆಗಸ್ಟ್‌ನಲ್ಲಿ ಅಂಗೀಕರಿಸಿತ್ತು. ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶಯುತ ಆಹಾರ ನೀಡುವುದರ ಜೊತೆಗೆ ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವುದೇ ಇದರ ಉದ್ದೇಶವಾಗಿತ್ತು.

ಸಂಶೋಧನೆಯ ಪ್ರಕಾರ, “ಮಧ್ಯಾಹ್ನದ ಊಟಕ್ಕೆ ಮೊದಲು ಸರಳ ಮತ್ತು ಪೌಷ್ಠಿಕಾಂಶಯುತ ಆಹಾರವನ್ನು ನೀಡುವುದರಿಂದ ಬೆಳಿಗ್ಗೆ-ಮಧ್ಯಾಹ್ನದ ನಡುವಿನ ಸಮಯದಲ್ಲಿ ಮಕ್ಕಳು ಹೆಚ್ಚು ಕ್ರಿಯಾತ್ಮಕವಾಗಿರುತ್ತಾರೆ” ಎಂದು ರಾಷ್ಟ್ರೀಯ ಶಿಕ್ಷಣ ನೀತಿಯು ಹೇಳುತ್ತದೆ.

ಸರ್ಕಾರ ಹಣಕಾಸಿನ ಸ್ಥಿತಿ ಸುಧಾರಿಸಿದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ


ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...