Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...