Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...