Homeಮುಖಪುಟಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

ಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

- Advertisement -
- Advertisement -

38 ವರ್ಷದ ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ನಾಗ್ಪುರದ ಮೂವರು ಪೊಲೀಸರು ಮತ್ತು ತಾಯಿ-ಮಗಳು ಜೋಡಿ ಸೇರಿದಂತೆ ಆರು ಜನರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಸಂತ್ರಸ್ತ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದು, ಇದರಿಂದಾಗಿ ವ್ಯಕ್ತಿಯು ಕಳೆದ ತಿಂಗಳು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಚಿನ್ ಸಾಬಲ್ ಎಂದು ಗುರುತಿಸಲ್ಪಟ್ಟಿದ್ದು, ಅವರು ಮುಂಬಯಿಯಲ್ಲಿ ಮಕ್ಕಳ ಕಲ್ಯಾಣ ಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಾ, ಥಾಣೆ ಜಿಲ್ಲೆಯ ಅಂಬರ್ನಾಥ್‌ನಲ್ಲಿ ವಾಸಿಸುತ್ತಿದ್ದರು” ಎಂದು ಅಂಬರ್ನಾಥದ ಶಿವಾಜಿ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ನಾಗ್ಪುರದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸರ್ವೀಸಸ್ (ಐಸಿಡಿಎಸ್) ನಲ್ಲಿ ಕೆಲಸ ಮಾಡುತ್ತಿದ್ದ ನೀತಾ ಖೇಡ್ಕರ್‌ ಎಂಬವರು ಸಚಿನ್‌ ಅವರೊಂದಿಗೆ ಸ್ನೇಹ ಸಂಪಾದಿಸಿದ್ದರು. ನಂತರ ತನ್ನ ಪತಿ ತೀರಿಕೊಂಡಿದ್ದು ತನ್ನನ್ನು ಮದುವೆಯಾಗು ಎಂದು ಸಚಿನ್ ಅವರೊಂದಿಗೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಆದರೆ ಸಚಿನ್‌ಗೆ ಇದರಲ್ಲಿ ಆಸಕ್ತಿಯಿಲ್ಲ ಎಂದು ತಿಳಿಯುತ್ತಿದ್ದಂತೆ ತನ್ನ ಗಂಡನ ಆತ್ಮಹತ್ಯೆಯ ಪ್ರಕರಣದಲ್ಲಿ ಅವರನ್ನೂ ಸೇರಿಸಿಕೊಳ್ಳುವುದಾಗಿ ಮಹಿಳೆ ಬೆದರಿಕೆ ಹಾಕಿದ್ದರು. ಡಿಸೆಂಬರ್ 2020 ಮತ್ತು ಫೆಬ್ರವರಿ 2021 ರ ನಡುವೆ ಅವರು ಈ ಬಗ್ಗೆ ಕಿರುಕುಳ ನೀಡುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಕೆಲವು ದಿನಗಳ ನಂತರ, ನಾಗ್ಪುರದ ಯಶೋಧರ ನಗರ ಪೊಲೀಸ್ ಠಾಣೆಯ ಕೆಲವು ಸಿಬ್ಬಂದಿಗಳು ಸಚಿನ್ ಅವರನ್ನು ವಿಚಾರಣೆಗೆ ಕರೆಯಲು ಪ್ರಾರಂಭಿಸಿದ್ದು, ಖೇಡ್ಕರ್ ಅವರ ಪತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸಚಿನ್ ಸಹೋದರ ನೀಡಿದ ದೂರಿನ ಪ್ರಕಾರ, ಈ ಪೊಲೀಸರು ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ ಇರಲು 9.50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

“ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲಿಂಗ್‌ನಿಂದಾಗಿ, ಫೆಬ್ರವರಿ 18 ರಂದು ಅಂಬರ್ನಾಥದಲ್ಲಿರುವ ತನ್ನ ನಿವಾಸದಲ್ಲಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್, ತನ್ನ ಸಹೋದರನಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ತನಗೆ ಒದಗಿ ಬಂದ ಕಷ್ಟಗಳ ಬಗ್ಗೆ ವಿವರಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಅದರಂತೆ ಮಾರ್ಚ್ 10 ರಂದು ಮಹಿಳೆ, ಅವರ ಮಗಳು, ಸಹೋದರ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯಾವುದೇ ಬಂಧನ ನಡೆದಿಲ್ಲ ಮತ್ತು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡದ ಫಲಕಗಳಿಗೆ ಮಸಿ: ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...