Homeಕರ್ನಾಟಕ‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ - ಮಹಿಳಾ ಹೋರಾಟಗಾರರ...

‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ – ಮಹಿಳಾ ಹೋರಾಟಗಾರರ ಆಕ್ರೋಶ

- Advertisement -
- Advertisement -

ರಮೇಶ್‌‌ ಜಾರಕಿಹೊಳಿ ಲೈಂಗಿಕ ಹಗರಣದಲ್ಲಿ ಮಹಿಳೆ ಕಿರುಕುಳಕ್ಕೆ ಬಲಿಯಾಗಿದ್ದಾರೆಯೆ ಎಂದು ತನಿಖೆ ಮಾಡುವ ಬದಲು ಆಪಾದಿತ “ರಾಜಕೀಯ ಪಿತೂರಿ” ಕೋನವನ್ನು ಮಾತ್ರ ಕೇಂದ್ರೀಕರಿಸುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿದ ಕರ್ನಾಟಕ ಸರ್ಕಾರದ ಕ್ರಮವು ಪ್ರಶ್ನಾರ್ಹವಾಗಿದೆ ಎಂದು ಮಹಿಳಾ ಸಂಘಟನೆಗಳು ಕಿಡಿಕಾರಿವೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದಲ್ಲಿ ಲೈಂಗಿಕ ದೃಶ್ಯಾವಳಿಯಿರುವ ವಿಡಿಯೊಗಳು ಸಾಮಾಜಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಇದರ ನಂತರ ರಾಜ್ಯದ ಬೃಹತ್ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮಾರ್ಚ್ 3 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ, ತನ್ನ ಮೇಲಿನ ಆರೋಪಗಳು ಸುಳ್ಳು ಎಂದು ಪ್ರತಿಪಾದಿಸಿದ್ದು, ಬಿಜೆಪಿಯನ್ನು ಮುಜುಗರದಿಂದ ತಪ್ಪಿಸಲು ಅವರು ಸಂಪುಟಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ರೈತ ನಾಯಕಿ ಮತ್ತು ದಲಿತ ಮಹಿಳಾ ಒಕ್ಕೂಟದ ಮಾಜಿ ರಾಜ್ಯ ಕಾರ್ಯದರ್ಶಿ ಆಗಿರುವ ಜಯಶ್ರೀ ಗುರನ್ನಾನವರ್, “ರಾಜ್ಯ ಸರ್ಕಾರ ಕೇವಲ ತನ್ನ ಸಚಿವ ಪ್ರತಿಷ್ಠೆಯನ್ನು ರಕ್ಷಿಸಲು ಮಾತ್ರ ಆಸಕ್ತಿ ಹೊಂದಿದೆ. ಮಾಧ್ಯಮಗಳು ಯುವತಿಯ ಗುರುತು ಪತ್ತೆಗೆ ಮತ್ತು ಸಚಿವರ ಮನೆಗೆ ಅವರು ಯಾಕೆ ಪದೆ ಪದೆ ಎಂಬುವುದನ್ನು ಪತ್ತೆ ಹಚ್ಚಲು ತೊಡಗಿಕೊಂಡಿದೆ. ಆದರೆ ಯಾರೂ ಕೂಡಾ ಮಾಜಿ ಸಚಿವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆಯೆ ಇಲ್ಲವೆ ಎಂದು ಪತ್ತೆ ಹಚ್ಚುತ್ತಿಲ್ಲ” ಎಂದು ಹೇಳಿದ್ದಾರೆಂದು ದಿ ಹಿಂದು ವರದಿ ಮಾಡಿದೆ.

ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀಲಾ ಅವರು ಇದು ಮೊದಲೇ ಊಹಿಸಲಾಗಿದ್ದ ಪಿತೃಪ್ರಧಾನ ಮನಸ್ಥಿತಿ, ರಾಜ್ಯ ಸರ್ಕಾರದ ಕ್ರಮಗಳಿಂದೇನು ಆಶ್ಚರ್ಯವಾಗಿಲ್ಲ ಎಂದು ಹೇಳಿದ್ದು, “ಲೈಂಗಿಕ ಕಿರುಕುಳದ ಆರೋಪದ ಎಲ್ಲಾ ಸಂದರ್ಭಗಳಲ್ಲಿ, ಮಹಿಳೆಯರದ್ದೇ ತಪ್ಪು ಎಂದು ಭಾವಿಸಲಾಗಿದೆ. ಇದು ಸರ್ಕಾರವು ಜಾರಕಿಹೊಳಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಧಿಕ್ಕರಿಸಿ ಮಹಿಳೆಯರನ್ನು ಖಳನಾಯಕರು, ಅವರು ಬಲಿಪಶುಗಳಲ್ಲ ಎಂದು ಕಾಣುವ ಉತ್ತರ ಪ್ರದೇಶದ ಮಾದರಿಯತ್ತ ಕರ್ನಾಟಕ ಚಲಿಸುತ್ತಿದೆ” ಎಂದು ಕಿಡಿಕಾರಿದ್ದಾರೆ ಎಂದು ಹಿಂದೂ ವರದಿ ಮಾಡಿದೆ.

ಪ್ರಕರಣದ ಬಗ್ಗೆ ಬಿಜೆಪಿ ಶಾಸಕ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಹಿಳೆಯು ಬಲಿಪಶು ಅಲ್ಲ, ಇದು ಬ್ಲ್ಯಾಕ್ಮೇಲ್ ಮತ್ತು ರಾಜಕೀಯ ಪಿತೂರಿ ಪ್ರಕರಣ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...