Homeಅಂಕಣಗಳುನೂರರ ನೋಟ: ಕಾಡುಗಳ್ಳರ ಅಟ್ಟಹಾಸ; ನಿಲ್ಲದ ಗಣಿಗಾರಿಕೆ; ಹೆಚ್ಚಿದ ವನ್ಯಜೀವ-ಮನುಷ್ಯ ಸಂಘರ್ಷ

ನೂರರ ನೋಟ: ಕಾಡುಗಳ್ಳರ ಅಟ್ಟಹಾಸ; ನಿಲ್ಲದ ಗಣಿಗಾರಿಕೆ; ಹೆಚ್ಚಿದ ವನ್ಯಜೀವ-ಮನುಷ್ಯ ಸಂಘರ್ಷ

- Advertisement -
- Advertisement -

ಕಾಡಿನಲ್ಲಿ ವಾಸ ಮಾಡುವ ಹುಲಿ, ಚಿರತೆ, ಆನೆ ಪದೇ ಪದೇ ಅರಣ್ಯದ ಹತ್ತಿರ ಇರುವ ಗ್ರಾಮಗಳಿಗೆ ಬರುತ್ತಿವೆ. ಆನೆ ಬೆಳೆ ನಾಶ ಮಾಡುತ್ತದೆ, ಜನರ ಮೇಲೆ ದಾಳಿ ಮಾಡಿ ಕೊಲ್ಲುತ್ತದೆ. ಹುಲಿ ಚಿರತೆಗಳು ನಾಯಿ, ಹಸು, ಕರು, ಕೋಳಿಗಳನ್ನು ತಿಂದು ಹಾಕುವುದಲ್ಲದೆ ಮನುಷ್ಯರ ಮೇಲೂ ಬಿದ್ದು ಹಾನಿ ಮಾಡುತ್ತಿವೆ. ಪ್ರತಿದಿನ ಈ ವನ್ಯಜೀವಿ ಮತ್ತು ಮನುಷ್ಯರ ಸಂಘರ್ಷದ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದರೂ ಸರ್ಕಾರವೇ ಆಗಲಿ, ಅರಣ್ಯ ಇಲಾಖೆಯಾಗಲಿ ಆತಂಕಗೊಳ್ಳುತ್ತಿಲ್ಲ. ಅದರ ಬಗೆಗೆ ಚರ್ಚೆಯೂ ಆಗುತ್ತಿಲ್ಲ. ಇದು ಹೀಗೆಯೇ ಮುಂದುವರೆದರೆ ಒಂದು ದಿನ ಅರಣ್ಯದ ಪ್ರಾಣಿಗಳೆಲ್ಲ ಗ್ರಾಮಗಳನ್ನು ಆವರಿಸಿಕೊಂಡು ಭಯ ಭೀತನಾದ ಮನುಷ್ಯ ತನ್ನ ರಕ್ಷಣೆಗಾಗಿ ಅರಣ್ಯ ಸೇರುವುದು ಅನಿವಾರ್ಯವಾಗುತ್ತದೆ.

ಹಿಂದೆ ಎಂದೋ ಒಂದೊಂದು ಸಾರಿ ಹಳ್ಳಿಗಳಿಗೆ ಬರುತ್ತಿದ್ದ ಕಾಡುಪ್ರಾಣಿಗಳು ಈಗ ಪದೇಪದೇ ಹೊರಟಹತ್ತಿವೆ. ಇದಕ್ಕೆ ಕಾರಣವೇನಿರಬಹುದು ಎಂದು ಜರೂರಾಗಿ ಯೋಚಿಸಬೇಕಾದ ಸಮಯ ಇದು.

ಅರಣ್ಯ ಪ್ರದೇಶ ವರ್ಷದಿಂದ ವರ್ಷಕ್ಕೆ ಕಿರಿದಾಗುತ್ತಿದೆ. ಕಾಡುಪ್ರಾಣಿಗಳಿಗೆ ಇದರಿಂದ ನೆಲಸಲು ಸ್ಥಳದ ಅಭಾವ ಕಾಣಿಸಿಕೊಳ್ಳುತ್ತಿರಬಹುದು. ಆಹಾರ ಮತ್ತು ನೀರಿನ ಅಭಾವ ಇದಕ್ಕೆ ಕಾರಣವಿರಬಹುದು. ಅರಣ್ಯ ನಾಶಕ್ಕೆ ಮುಖ್ಯ ಕಾರಣ ಹಲವು ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಸರ್ಕಾರ ರಸ್ತೆಗಳನ್ನು ನಿರ್ಮಾಣ ಮಾಡುತ್ತಿರುವುದು. ಪಶ್ಚಿಮಘಟ್ಟ ಮೊದಲುಗೊಂಡು ಎಲ್ಲೆಲ್ಲಿ ಬೆಟ್ಟದ ಸಾಲುಗಳಿವೆಯೋ ಅಲ್ಲೆಲ್ಲ ಸರ್ಕಾರದ ಒಪ್ಪಿಗೆ ಪಡೆದು ಅಥವಾ ಅಕ್ರಮವಾಗಿ ಕಲ್ಲುಗಣಿ ಕಾರ್ಯ ಅವ್ಯಾಹತವಾಗಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವುದು, ಕಾಡಿನಲ್ಲಿ ಬೆಳೆದಿರುವ ಉತ್ಕೃಷ್ಟವಾದ ಮರಗಳನ್ನು ಕಳ್ಳತನದಿಂದ ಮತ್ತು ಅರಣ್ಯಾಧಿಕಾರಿಗಳ ನೆರವಿನಿಂದ ಕಡಿದು ದುಡ್ಡು ಮಾಡಿಕೊಳ್ಳುವ ಮರಗಳ್ಳರಿಂದ ಮತ್ತು ಅರಣ್ಯ ಮಧ್ಯದಲ್ಲಿ ಶ್ರೀಮಂತರ ಮೋಜಿಗಾಗಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡುವ ಧನಪಿಶಾಚಿಗಳಿಂದಾಗಿ ಅರಣ್ಯ ಭೂಮಿ ಕಿರಿದಾಗುತ್ತಿದೆ. ಒಟ್ಟು ಭೂಮಿಯ 1/3ಭಾಗ ಅರಣ್ಯ ಪ್ರದೇಶ ಇರಬೇಕೆಂದು ಇಂಗ್ಲಿಷರ ಕಾಲದಲ್ಲಿ ನಿಯಮ ಇತ್ತು. ಜನಸಂಖ್ಯೆ ಸ್ಫೋಟವಾದಂತೆ ಹಳ್ಳಿಯವರು ತಮ್ಮ ಹಳ್ಳಿಗಳ ವಿಸ್ತರಣೆಗಾಗಿ ಕಾಡನ್ನು ಕಬಳಿಸುತ್ತಾ ಬಂದರು. ನಗರಗಳ, ಪಟ್ಟಣಗಳ ಜನಸಂಖ್ಯೆ ಹೆಚ್ಚಿದಂತೆ ಮುನಿಸಿಪಾಲಿಟಿಗಳು, ಜಿಲ್ಲಾ ಬೋರ್ಡುಗಳು ಸರ್ಕಾರದ ಸಹಕಾರದೊಂದಿಗೆ ಅರಣ್ಯ ಭೂಮಿಯನ್ನೇ ಕಬಳಿಸುವ ಹವ್ಯಾಸಕ್ಕೆ ಬಿದ್ದವು. ಅರಣ್ಯ ಪ್ರದೇಶದಲ್ಲಿ ಕಾರ್ಖಾನೆಗಳನ್ನೂ ಸ್ಥಾಪಿಸಲಾಯಿತು.

ಬೆಂಗಳೂರಿನಂತಹ ಪಟ್ಟಣಗಳು ಬೆಳೆದಂತೆ ಪಟ್ಟಣದ ಸರಹದ್ದಿನಲ್ಲಿದ್ದ ಅರಣ್ಯಗಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತು. ಹೀಗಾಗಿ 33% ಇದ್ದ ಅರಣ್ಯ ಪ್ರದೇಶ ಈಗ ಶೇ,18ಕ್ಕೆ ಇಳಿದಿದೆ. ಕೆಲವು ವರ್ಷಗಳ ಹಿಂದೆ ಅರಣ್ಯಪ್ರದೇಶ ಶೇ,23ರಷ್ಟಿತ್ತು. ಆಗಲೇ ಎಚ್ಚೆತ್ತುಕೊಂಡು ಸರ್ಕಾರ ಅರಣ್ಯಪ್ರದೇಶವನ್ನು ವಿಸ್ತರಿಸುವಂತಹ ಕೆಲಸ ಆರಂಭಿಸಬೇಕಾಗಿತ್ತು. ಸರ್ಕಾರದ ನಿಷ್ಕ್ರಿಯತೆಯಿಂದಾಗಿ ಅರಣ್ಯ ಈ ದುರವಸ್ಥೆ ಮುಟ್ಟಿದೆ. ಲೋಕಸಭೆಯ, ಶಾಸನಸಭೆಯ ಹಲವು ಸದಸ್ಯರು ಕಲ್ಲಿನ ವ್ಯಾಪಾರ, ಮ್ಯಾಂಗನೀಸ್, ಕಬ್ಬಿಣ ಮುಂತಾದ ಲೋಹಗಳ ವ್ಯಾಪಾರದಲ್ಲಿ ತೊಡಗಿಕೊಂಡು ಅರಣ್ಯ ಪ್ರದೇಶಗಳಲ್ಲಿ, ನದಿತಟಗಳ ಪ್ರದೇಶಗಳ ಆಸುಪಾಸಿನಲ್ಲೂ ಅಕ್ರಮ ಗಣಿಗಾರಿಕೆ ಮಾಡಲುತೊಡಗಿದರು.

ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಯ್ತು ದೇಶದ ಪರಿಸ್ಥಿತಿ. ’ಹರ ಕೊಲ್ಲಲು ಪರಕಾಯ್ವನೇ’ ಎಂಬ ದುಸ್ಥಿತಿಗೆ ನಾವು ತಲುಪಿದ್ದೇವೆ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸಂತೋಷ್ ಲಾಡ್, ಆನಂದ್ ಸಿಂಗ್ ಮುಂತಾದವರು ಗಣಿಗಾರಿಕೆಯಲ್ಲಿ ತೊಡಗಿ ಅದಿರನ್ನು ದೋಚಿದ ಪ್ರಕರಣಗಳನ್ನು ಬಯಲಿಗೆಳೆದ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು, ಬಳ್ಳಾರಿಯನ್ನೇ ಈ ಖದೀಮರು ತಮ್ಮ ವಶವರ್ತಿ ಮಾಡಿಕೊಂಡಿದ್ದರಿಂದ ಅದನ್ನು ಈ ಖದೀಮರ ರಿಪಬ್ಲಿಕ್ ಎಂದು ಕರೆದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಒಮ್ಮೆ ಜನಾದನ ರೆಡ್ಡಿಯವರ ಮೇಲೆ ಮುನಿಸಿಕೊಂಡು ಬಳ್ಳಾರಿಯ ಜಿಲ್ಲಾಧಿಕಾರಿಗಳು, ಗಣಿ ಅಧಿಕಾರಿಗಳು, ಎಸ್‌ಪಿ ಎಲ್ಲರನ್ನೂ ಏಕಕಾಲಕ್ಕೆ ವರ್ಗಾವಣೆ ಮಾಡಿದರು. ಈ ವಿಷಯ ತಿಳಿದ ಜನಾರ್ದನ ರೆಡ್ಡಿಯವರು ಯಡಿಯೂರಪ್ಪನವರಿಗೆ ಫೋನ್ ಮಾಡಿ ’ಈ ಕೂಡಲೇ ನೀವು ವರ್ಗ ಮಾಡಿರುವ ಅಧಿಕಾರಿಗಳನ್ನು ಬಳ್ಳಾರಿಗೆ ವಾಪಸ್ ಕಳುಹಿಸದಿದ್ದರೆ ನೀವು ಕುರ್ಚಿ ಬಿಟ್ಟು ಇಳಿಯಬೇಕಾದೀತು’ ಎಂದು ಬೆದರಿಕೆ ಹಾಕಿದರು. ಯಡಿಯೂರಪ್ಪನವರು ಮರು ಮಾತಾಡದೆ ಆ ಅಧಿಕಾರಿಗಳ ವರ್ಗಾವಣೆ ಆರ್ಡರನ್ನು ಹಿಂಪಡೆದರು. ಜನಾದನ ರೆಡ್ಡಿಯವರು ಈ ಬಳ್ಳಾರಿ ರಿಪಬ್ಲಿಕ್ಕಿನ ಅನಭಿಷಕ್ತ ಚಕ್ರವರ್ತಿ ಆಗಿದ್ದರು.

ಈ ಲೇಖನದ ಸಾರಾಂಶ ಇಷ್ಟೇ: ಅರಣ್ಯ ಭೂಮಿ ಕಿರಿದಾಗುತ್ತಿದೆ. ಹೀಗೆ ಮುಂದುವರೆದರೆ ಅರಣ್ಯದಲ್ಲಿರುವ ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ, ನಗರಗಳಿಗೆ ದಾಳಿ ಇಡುತ್ತವೆ. ಮಾನವ ರಕ್ತದ ರುಚಿ ನೋಡಿದ ಮೇಲೆ ಅವು ಆಡು, ಹಸುಗಳನ್ನು ತಿನ್ನುವುದು ಬಿಟ್ಟು ಮನುಷ್ಯನ ಮಾಂಸಕ್ಕೇ ಪಳಗಿಕೊಳ್ಳುತ್ತವೆ. ಆಗ ಯಾವ ಹಳ್ಳಿಯೂ, ಪಟ್ಟಣವೂ ಸುರಕ್ಷಿತವಾಗಿರುವುದಿಲ್ಲ. ಮನುಷ್ಯ ಊರು ಬಿಟ್ಟು ಕಾಡಿಗೆ ವಲಸೆ ಹೋಗುವುದೊಂದೇ ತನಗಿರುವ ಏಕೈಕ ಮಾರ್ಗ ಎಂದು ತೀರ್ಮಾನಿಸಿದರೆ ಅದಕ್ಕೆ ಆಶ್ಚರ್ಯ ಪಡಬೇಕಾಗಿಲ್ಲ.

ಈ ಅನಾಹುತ ಸಂಭವಿಸುವ ಮೊದಲೇ ಸರ್ಕಾರ ಅರಣ್ಯವನ್ನು ಉಳಿಸುವ ಕಾರ್ಯ ಕೈಗೊಂಡೀತೆ?


ಇದನ್ನೂ ಓದಿ:  ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...