Homeಮುಖಪುಟಪಕ್ಷದ ಅಧೀಕೃತ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ ತಮಿಳುನಾಡು ಬಿಜೆಪಿ ಉಪಾಧ್ಯಕ್ಷ!

ಪಕ್ಷದ ಅಧೀಕೃತ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ ತಮಿಳುನಾಡು ಬಿಜೆಪಿ ಉಪಾಧ್ಯಕ್ಷ!

- Advertisement -
- Advertisement -

ಪಕ್ಷದ ಅಧೀಕೃತ ಟಿಕೆಟ್‌ ಘೋಷಣೆಗೂ ಮುನ್ನ ತಮಿಳುನಾಡಿನ ಬಿಜೆಪಿ ಉಪಾಧ್ಯಕ್ಷ ನೈನಾರ್ ನಾಗೇಂದ್ರನ್ ತಿರುನೆಲ್ವೇಲಿ ಕ್ಷೇತ್ರದಿಂದ ಶುಕ್ರವಾರ ನಾಮಪತ್ರ ಸಲ್ಲಿಸಿ ಕಾರ್ಯಕರ್ತರಿಗೆ ಅಘಾತ ನೀಡಿದ್ದಾರೆ.

ಫಾರ್ಮ್ ಬಿ ಅನ್ನು ಸಲ್ಲಿಸದೆ ನಾಗೇಂದ್ರನ್ ರಿಟರ್ನಿಂಗ್ ಅಧಿಕಾರಿ ಶಿವಕೃಷ್ಣಮೂರ್ತಿಯವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಬಿಜೆಪಿ ಸದಸ್ಯರು ಸೇರಿದಂತೆ ಮೈತ್ರಿ ಪಕ್ಷವಾದ ಎಐಎಡಿಎಂಕೆಯ ಯಾವುದೆ ನಾಯಕರು ಇರಲಿಲ್ಲ.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗೇಂದ್ರನ್, ಇಂದು ಶುಭ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಕೆಗೆ ಈ ದಿನವನ್ನು ಆರಿಸಿದೆ ಎಂದು ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲು ಫಾರ್ಮ್ ಬಿ ಅನ್ನು ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸೇರಲಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್

‘ನಾಗೇಂದ್ರನ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಆಗುವವರೆಗೂ ಕಾಯಬಹುದಿತ್ತು. ಇದು ಭವಿಷ್ಯದಲ್ಲಿ ತೊಂದರೆ ಉಂಟು ಮಾಡುತ್ತದೆ’ ಎಂದು ಹೆಸರು ಹೇಳಲು ಇಚ್ಚಿಸದ ರಾಜ್ಯದ ಹಿರಿಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆಂದು TNIE ವರದಿ ಮಾಡಿದೆ.

‘ಎಐಎಡಿಎಂಕೆ ತಿರುನೆಲ್ವೇಲಿಯನ್ನು ಬಿಜೆಪಿಗೆ ನೀಡಿದ್ದರಿಂದ ಅವರು ಪ್ರಚಾರ ಆರಂಭಿಸಿದ್ದಾರೆ. ಈ ಕ್ಷೇತ್ರದಲ್ಲಿ ನಾಗೇಂದ್ರನ್‌ ಅವರೇ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ಪ್ರತಿಯೊಬ್ಬ ಸೇರಿದಂತೆ, ಸಾರ್ವಜನಿಕರಿಗೂ ತಿಳಿದಿದೆ. ತಾನು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಅವರು ಈಗಾಗಲೇ ರಾಜ್ಯ ಮುಖಂಡರಿಗೆ ಮಾಹಿತಿ ನೀಡಿದ್ದಾರೆ’ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.

ಇದನ್ನೂ ಓದಿ:‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’

ತಿರುನೆಲ್ವೇಲಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರದಿಂದ ಪ್ರಾರಂಭವಾಗಿದ್ದು, ಮೊದಲ ದಿನ ನಾಗೇಂದ್ರನ್ ಸೇರಿದಂತೆ ಇನ್ನೂ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಯ ಪಕ್ಷದ ಮುಖಂಡರು ಘೋಷಿಸಲಿದ್ದಾರೆ ಎಂದು ನಾಗೇಂದ್ರನ್ ದೃಡಪಡಿಸಿದ್ದು, ಮಿತ್ರಪಕ್ಷವಾದ ಎಐಎಡಿಎಂಕೆ ತಮ್ಮ ವಿಜಯಕ್ಕಾಗಿ ಕೆಲಸ ಮಾಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಪಾಲಯಂ ಕೋಟೈನ 60 ವರ್ಷದ ಹೋಟೆಲ್‌ ಉದ್ಯಮಿ ನಾಗೇಂದ್ರನ್ ಅವರು ಎಐಎಡಿಎಂಕೆ ಪಕ್ಷದಲ್ಲಿದ್ದಾಗ ತಿರುನೆಲ್ವೇಲಿಯಿಂದ ನಾಲ್ಕು ಬಾರಿ ಸ್ಪರ್ಧಿಸಿದ್ದರು. ಅದರಲ್ಲಿ 2001 ಮತ್ತು 2011 ರಲ್ಲಿ ಎರಡು ಬಾರಿ ಗೆದ್ದಿದ್ದರು. 2016 ರ ಚುನಾವಣೆಯಲ್ಲಿ ಅವರು ಡಿಎಂಕೆ ಅಭ್ಯರ್ಥಿಯ ಎದುರು ಸೋತು ನಂತರ ಬಿಜೆಪಿಗೆ ಸೇರಿದ್ದರು.

ಇದನ್ನೂ ಓದಿ: ಎಡಿಆರ್ ವರದಿ – 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...