Homeಮುಖಪುಟಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ನಾಡಿನ ಖ್ಯಾತ ಉರ್ದು ಸಾಹಿತಿ ಶಿಕಾರಿಪುರದ ಡಾ. ಹಫೀಜ್ ಕರ್ನಾಟಕಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗೆ ಭಾಜನರಾಗಿದ್ದು ಶಿವಮೊಗ್ಗ ಜಿಲ್ಲೆಗೆ ಸಾಹಿತ್ಯ ಶ್ರೇಷ್ಠತೆಯ ಗರಿಯೊಂದು ಮೂಡಿದೆ.

ಡಾ. ಹಫೀಜ್ ಕರ್ನಾಟಕಿ ಅವರು ಬರೆದಿರುವ ‘ಫಕ್ರ್-ಇ-ವತನ್’ ಸಣ್ಣಕತೆಗಳ ಸಂಕಲನವು ಉರ್ದು ಸಾಹಿತ್ಯ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಶಿಕಾರಿಪುರದ ಶಿಕ್ಷಕ ದಂಪತಿಗಳಾದ ನಜೀರ್ ಪಾಶಾ, ಬಸೀರ್ ಉನ್ನಿಸಾ ದಂಪತಿಗಳ ಮಗನಾಗಿ ಹುಟ್ಟಿದ ಹಫೀಜ್ ಅವರು ಎಂ.ಎ ಪದವೀಧರರಾಗಿದ್ದು, ಶಿಕ್ಷಣ, ಸಾಹಿತ್ಯದಲ್ಲಿ ಅಪಾರ ಜ್ಞಾನವನ್ನು ಹೊಂದಿದ್ದಾರೆ. ಉರ್ದು ಸಾಹಿತ್ಯದಲ್ಲಿ ಪಾಂಡಿತ್ಯವನ್ನು ಸಾಧಿಸಿದ್ದಾರೆ. ಇದುವರೆಗೂ 94 ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಕೃತಿಗಳನ್ನು ಕೊಟ್ಟಿದ್ದಾರೆ.

ನೈತಿಕ ಮೌಲ್ಯ, ಆಧ್ಯಾತ್ಮಿಕ ಅರಿವು, ಮಾನವತೆ, ಸೌಹಾರ್ದತೆ, ದೇಶಪ್ರೇಮ ಹಫೀಜ್ ಅವರ ಸಾಹಿತ್ಯದ ಜೀವಜಲವಾಗಿದೆ. ಸಾಹಿತ್ಯ ಸಂವೇದನೆಯ ಇವರ ಸಾಧನೆಯನ್ನು ಗುರುತಿಸಿ ಗುಲ್ಬರ್ಗಾ ವಿಶ್ವವಿದ್ಯಾಲಯ ಹಫೀಜ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದರೆ, ಇವರ ಸಾಹಿತ್ಯ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಹಿಂದಿನ ಅವಧಿಯ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕರ್ನಾಟಕ ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡು ಅಕಾಡೆಮಿಯ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಿದರು.

ಕೇವಲ ಸಾಹಿತ್ಯ ಕ್ಷೇತ್ರದಲ್ಲಿ ಅಷ್ಟೆ ಅಲ್ಲದ ಸಾಮಾಜಿಕವಾಗಿ ಡಾ. ಹಫೀಜ್ ಕರ್ನಾಟಕಿ ಅವರ ಅವರ ಸಾಧನೆ -ಸೇವೆಗಳು ಮಾದರಿಯಾಗಬಲ್ಲವು. ಶಿಕಾರಿಪುರದ ಜಯನಗರ ಬಡಾವಣೆಯಲ್ಲಿ ಮದೀನತ್ ಉಲ್ ಉಲೂಮ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಸಮಾಜದ ಸಾವಿರಾರು ಬಡಮಕ್ಕಳಿಗೆ ವಿದ್ಯೆ, ಅನ್ನ ,ಆಶ್ರಯ ನೀಡುತ್ತ ಪ್ರಬುದ್ದ ಪ್ರಜೆಗಳನ್ನಾಗಿ ರೂಪಿಸುವಲ್ಲಿ ತೊಡಗಿದ್ದಾರೆ. ಜಾತಿ, ಧರ್ಮ ಬೇಧವಿಲ್ಲದೆ ವಿಧವೆಯರಿಗೆ ಹಾಗು ವಿಧವೆಯರ ಮಕ್ಕಳಿಗೆ ಮಾಸಿಕ ವೇತನವನ್ನು ಟ್ರಸ್ಟ್ ವತಿಯಿಂದ ನೀಡುತ್ತಿದ್ದಾರೆ. ವಿಶೇಷವಾಗಿ ಎಲ್ಲಾ ಧರ್ಮದ, ಜಾತಿಯ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿರುವ ಹಫೀಝ್ ನೇತೃತ್ವದ ಟ್ರಸ್ಟ್ ಡಿ.ಎಡ್ ಶಿಕ್ಷಣದ ಜೊತೆಗೆ ವೃತ್ತಿಪರ ಶಿಕ್ಷಣವನ್ನು ಕೊಟ್ಟು ಸ್ವಾವಲಂಬಿ ಬದುಕಿಗೆ ನೆರವಾಗುತ್ತಿದೆ.

ಸಾಮಾಜಿಕ ಸಾಮರಸ್ಯ, ಸಹಬಾಳ್ವೆ ಮತ್ತು ಮಾನವತೆಯೇ ದೇವರನ್ನು ತಲುಪುವ ದಿವ್ಯಮಾರ್ಗ ಎಂದೆ ನಿರಂತರ ಕಾಯಕದಲ್ಲಿ ತೊಡಗಿರುವ ಡಾ. ಹಫೀಜ್ ಕರ್ನಾಟಕಿ ಶರಣರ ತಪೋಭೂಮಿ ಶಿಕಾರಿಪುರದ ಮಹಾಶರಣರಂತೆ ಸಮಾಜದ ಒಳಿತಿಗಾಗಿ ದುಡಿಯುತ್ತಿದ್ದಾರೆ.

  • ಎನ್ ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...