Homeಮುಖಪುಟಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಹಂತದ ಮತದಾನ ಆರಂಭಕ್ಕೆ ಕೆಲವೇ ದಿನಗಳಿರುವಾಗ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಬಿಜೆಪಿ ನಾಯಕ, ಮಾಜಿ ಕೇಂದ್ರ ಹಣಕಾಸು ಸಚಿವ ಯಶವಂತ್ ಸಿನ್ಹಾ ಇಂದು ಟಿಎಂಸಿ ಪಕ್ಷೆಕ್ಕೆ ಸೇರ್ಪಡೆಯಾಗಿದ್ದಾರೆ.

83 ವರ್ಷದ ಯಶವಂತ್ ಸಿನ್ಹಾ ಬಿಜೆಪಿಯಲ್ಲಿರುವಾಗಲೇ ನರೇಂದ್ರ ಮೋದಿ ಸರ್ಕಾರದ ಕಟು ವಿಮರ್ಶಕರಲ್ಲಿ ಒಬ್ಬರಾಗಿದ್ದರು. ನಂತರ ಅವರು 2018ರಲ್ಲಿ ಬಿಜೆಪಿ ಪಕ್ಷ ತ್ಯಜಿಸಿದ್ದರು. ಇಂದು ಅವರು ಟಿಎಂಸಿ ಸೇರ್ಪಡೆಯಾಗಿರುವುದು ಪಕ್ಷದಿಂದ ಹೊರಹೋಗುವವರ ಸಂಖ್ಯೆಯಲ್ಲಿ ಹೆಚ್ಚಳದಿಂದ ಬಳಲುತ್ತಿದ್ದ ಟಿಎಂಸಿಗೆ ವರದಾನವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಮುಂಜಾನೆಯೇ ಯಶವಂತ್ ಸಿನ್ಹಾರವರು ಕೋಲ್ಕತ್ತಾದ ಟಿಎಂಸಿ ಭವನಕ್ಕೆ ಭೇಟಿ ನೀಡಿದ್ದರು. ಅಲ್ಲಿ ಇಂದು ಟಿಎಂಸಿ ಪಕ್ಷದ ಡೆರೇಕ್ ಓ ಬ್ರಿಯಾನ್, ಸುದೀಪ್ ಬಂಡೋಪಾಧ್ಯಯ ಮತ್ತು ಸುಬ್ರತ ಮುಖರ್ಜಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದ್ದಾರೆ. ಇದು ನಮಗೆ ಹೆಮ್ಮೆಯ ವಿಷಯ ಎಂದು ಸುಬ್ರತ ಮುಖರ್ಜಿ ತಿಳಿಸಿದ್ದಾರೆ.

ಯಶವಂತ್ ಸಿನ್ಹಾರವರು ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಮತ್ತು ಹಣಕಾಸು ಸಚಿವರಾಗಿ ಕೆಲಸ ಮಾಡಿದ್ದರು.

ಟಿಎಂಸಿ ಸೇರ್ಪಡೆ ನಂತರ ಮಾತನಾಡಿದ ಯಶವಂತ್ ಸಿನ್ಹಾ “ಇಂದು ನಮ್ಮ ದೇಶದಲ್ಲಿ ಯಾರೂ ಚಿಂತಿತರಾಗಿಲ್ಲ. ನಮಗೆ ಆಹಾರ ನೀಡುವ ರೈತ ದೆಹಲಿ ಬೀದಿಗಳಲ್ಲಿ ಕುಳಿತಿದ್ದಾನೆ, ಆದರೆ ಯಾರೂ ಅವರ ಬಗ್ಗೆ ಚಿಂತಿಸುತ್ತಿಲ್ಲ. ಶಿಕ್ಷಣ, ಆರೋಗ್ಯ ಎಲ್ಲವೂ ಕೆಟ್ಟ ದಿನಗಳನ್ನು ನೋಡುತ್ತಿದೆ. ಆದರೆ ಸರ್ಕಾರ ಚಿಂತಿಸುತ್ತಿಲ್ಲ. ಎಲ್ಲಾ ಕಡೆ ಚುನಾವಣೆಗಳನ್ನು ಗೆಲ್ಲುವುದು ಮಾತ್ರವೇ ಆಡಳಿತ ಪಕ್ಷದ ಏಕೈಕ ಗುರಿಯಾಗಿದೆ. ಅಟಲ್ ಜಿ ಸಮಯದಲ್ಲಿ ಪಕ್ಷ ಮತ್ತು ಈಗ ಪಕ್ಷವು ತುಂಬಾ ಭಿನ್ನವಾಗಿದೆ. ಅಟಲ್‌ಜಿ ಒಮ್ಮತವನ್ನು ನಂಬಿದ್ದರು. ಇಂದಿನ ಸರ್ಕಾರವು ವಿಭಜನೆಯನ್ನು ನಂಬುತ್ತದೆ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

“ನಮ್ಮ ದೇಶವು ವಿಚಿತ್ರ ಪರಿಸ್ಥಿತಿಯಲ್ಲಿದೆ. ನಾವು ನಂಬಿದ್ದ ಮೌಲ್ಯಗಳು ಅಪಾಯದಲ್ಲಿವೆ. ಪ್ರಜಾಪ್ರಭುತ್ವದ ಶಕ್ತಿ ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿದೆ ಎಂದು ನಮಗೆ ತಿಳಿದಿದೆ. ಆದರೆ ಇಂದು ಆ ಎಲ್ಲಾ ಸಂಸ್ಥೆಗಳು ದುರ್ಬಲಗೊಂಡಿವೆ. ನ್ಯಾಯಾಂಗವು ದುರ್ಬಲವಾಗಿದೆ ಎಂದು ನಾನು ವಿಷಾದದಿಂದ ಹೇಳುತ್ತೇನೆ. ಅದಕ್ಕಾಗಿಯೇ ಸರ್ಕಾರದ ಇಚ್ಛೆಯನ್ನು ಪ್ರಶ್ನಿಸಲು ಯಾರೂ ಇಲ್ಲ” ಎಂದು ಕೋಲ್ಕತ್ತಾದ ಟಿಎಂಸಿ ಕಚೇರಿಯಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತನ್ನ ವಿರುದ್ಧದ ಪ್ರಕರಣಗಳನ್ನು ತಾನೇ ಹಿಂಪಡೆದ ಯುಪಿ ಸಿಎಂ ಯೋಗಿ ಆದಿತ್ಯನಾಥ್: BSP ಸಂಸದನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...