Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...