Homeಅಂತರಾಷ್ಟ್ರೀಯಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಟೇಪ್ ರೆಕಾರ್ಡರ್‌ನ ಕ್ಯಾಸೆಟ್ ಅನ್ವೇಷಕ ಲಾವೊ ಒಟೆನ್ಸ್ ನಿಧನ

ಲಾವೊ ಒಟೆನ್ಸ್ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ

- Advertisement -
- Advertisement -

ಕ್ಯಾಸೆಟ್‌ಗಳು ಯಾರಿಗೆ ಗೊತ್ತಿಲ್ಲ. 90ರ ದಶಕದ ಪೀಳಿಗೆಯವರೆಗಿನ ಯಾರನ್ನು ಕೇಳಿದರೂ ಅವರ ಜೀವನದ ಒಂದಲ್ಲಾ ಒಂದು ಘಳಿಗೆಯಲ್ಲಿ ಕ್ಯಾಸೆಟ್‌ನೊಂದಿಗಿನ ನೆನಪಿನ ಸುರುಳಿಗಳು ಬಿಚ್ಚಿಕೊಳ್ಳುತ್ತವೆ; ಧ್ವನಿ ಸುರುಳಿಯ ಕ್ಯಾಸೆಟ್‌ನಂತೆಯೇ. ಟೇಪ್‌ ರೆಕಾರ್ಡರ್ ಒಳಗೆ ಈ ಕ್ಯಾಸೆಟ್ ಟೇಪ್ ಸಿಕ್ಕಿಕೊಂಡರೆ, ಅದನ್ನು ಹೊರತೆಗೆದು ಮತ್ತೆ ಸುತ್ತಿ ಕ್ಯಾಸೆಟ್‌ ಒಳಗೆ ಸೇರಿಸುವುದು ನಿಜಕ್ಕೂ ಧ್ಯಾನಸ್ಥ ಕೆಲಸವಾಗಿರುತ್ತಿತ್ತು. ಇನ್ನು ಅದು ತುಂಡಾಗಿಬಿಟ್ಟರಂತೂ, ಅದಕ್ಕೆ ಕಳ್ಳಿಹಾಲು ಹಾಕಿ ಅಂಟಿಸಿ, ನೆರಳಿನಲ್ಲಿಯೇ ಒಣಗಿಸಿ ಸುತ್ತುವುದು ಯಾವ ಕರಕುಶಲ ಕೆಲಸಕ್ಕೂ ಕಡಿಮೆಯಿಲ್ಲ. ಇನ್ನು ನಮ್ಮ ಅಚ್ಚುಮೆಚ್ಚಿನ ಚಲನಚಿತ್ರ ಗೀತೆಗಳು, ದೇವರ ಹಾಡುಗಳು, ಜನಪದ ಕಥನಗಳು, ಸಿನಿಮಾಗಳನ್ನು ಕ್ಯಾಸೆಟ್‌ಗಳಲ್ಲಿಯೇ ಕೇಳುತ್ತಿದ್ದೆವು. 1960ರ ದಶಕದಲ್ಲಿ ಅನ್ವೇಷಿಸಲಾದ ಈ ಕ್ಯಾಸೆಟ್ ಬಹುಪಾಲು ಜನರಿಗೆ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದುದರಲ್ಲಿ ಸಂದೇಹವಿಲ್ಲ.

ಇಂತಹ ನೆನಪಿನ ಸುರುಳಿ ನಮ್ಮೊಂದಿಗಿರಲು ಕಾರಣ ಈ ಕ್ಯಾಸೆಟ್‌ ಅನ್ನು ಅನ್ವೇಷಿಸಿದ ಲಾವೊ ಒಟೆನ್ಸ್. ಆದರೆ ಅವರೂ ಕೂಡ ಇನ್ನುಮುಂದೆ ಕ್ಯಾಸೆಟ್‌ನಂತೆಯೇ ನಮ್ಮ ನೆನಪಿನ ಸುರುಳಿಗಳಲ್ಲಿ ಮಾತ್ರ ಉಳಿಯುತ್ತಾರೆ. ಹೌದು, ಧ್ವನಿ ಸುರುಳಿಯ ಕ್ಯಾಸೆಟ್ (ಟೇಪ್) ಕಂಡುಹಿಡಿದಿದ್ದ ಲಾವೊ ಒಟೆನ್ಸ್ ಇತ್ತೀಚೆಗೆ ನಿಧನರಾಗಿದ್ದಾರೆ. ನೆದರ್ಲೆಂಡ್ ಮೂಲದವರಾದ 94 ವರ್ಷದ ಲಾವೊ ಒಟೆನ್ಸ್ ನಿಧನರಾಗಿದ್ದಾರೆ ಎಂದು ಫಿಲಿಪ್ಸ್‌ ಕಂಪನಿ ದೃಢಪಡಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಟಿಎಂಸಿ ಸೇರ್ಪಡೆ!

21, ಜೂನ್ 1926 ರಲ್ಲಿ ಜನಿಸಿದ ಲಾವೊ ಒಟೆನ್ಸ್ ಡೆಲ್ಫ್‌ನ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದು, 1952ರಲ್ಲಿ ಫಿಲಿಪ್ಸ್‌ ಕಂಪನಿ ಸೇರಿದ್ದರು. ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಆಗ ಟೇಪ್‌ ರೆಕಾರ್ಡರ್‌ಗೆ ಪರ್ಯಾಯವನ್ನು ಅನ್ವೇಷಿಸಲು ಹೆಚ್ಚಿನ ಒತ್ತು ನೀಡಿದ್ದರು. ಕಾಂಪ್ಯಾಕ್ಟ್‌ ಡಿಸ್ಕ್‌ ಅಭಿವೃದ್ಧಿಪಡಿಸಲು ಒಟೆನ್ಸ್‌ ಅವರು ಫಿಲಿಪ್ಸ್‌ ಕಂಪನಿಗೆ ನೆರವಾಗಿದ್ದರು. ಸಿಡಿ, ಡಿವಿಡಿ ಕ್ಯಾಸೆಟ್‌ಗಳ ಅನ್ವೇಷಣೆಗೂ ಲಾವೊ ಒಟೆನ್ಸ್ ಅವರ ಕೊಡುಗೆಯಿದೆ.

ಧ್ವನಿ ಸಂಗ್ರಹಣ ಟೇಪ್‌ ಮತ್ತು ಪ್ಲೇಯರ್‌ಗಳು ಸುಲಭವಾಗಿ ಬಳಸುವಂತೆ ಇರಬೇಕು ಮತ್ತು ದೊರೆಯಬೇಕು ಎಂಬುದು ಇವರ ಗುರಿಯಾಗಿತ್ತು.

ರೇಡಿಯೋ ನಂತರ ಮನುಷ್ಯನಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಟೇಪ್‌ ರೇಕಾರ್ಡರ್‌ಗಳು. 20ನೇ ಶತಮಾನದ ಅಂತ್ಯದವರೆಗೂ ಜಗತ್ತಿನಾದ್ಯಂತ ಬಹುಪಾಲು ಸಂಗೀತ, ಸಿನಿಮಾಗಳನ್ನು ಧ್ವನಿಸುರುಳಿ ಮತ್ತು ಟೇಪ್‌ ರೆಕಾರ್ಡರ್‌ಗಳಲ್ಲಿಯೇ ಕೇಳಲಾಗುತ್ತಿತ್ತು. ಅದು ಅಂದಿನವರಿಗೆ ಬಹುಪ್ರಿಯವಾದ ಮಾಧ್ಯಮವಾಗಿತ್ತು. ಇಂದಿಗೂ ಕೂಡ ಹಲವರು ಕ್ಯಾಸೆಟ್‌ಗಳನ್ನು ಭಾವನಾತ್ಮವಾಗಿ ನೋಡುತ್ತಾ, ಅವುಗಳನ್ನು ಕಾಪಿಟ್ಟುಕೊಂಡಿದ್ದಾರೆ.


ಇದನ್ನೂ ಓದಿ: ವಿಧಾನಸಭೆಯಲ್ಲೇ ಸ್ಯಾನಿಟೈಸರ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...